ಗಣರಾಜ್ಯೋತ್ಸವ ಸಂಭ್ರಮದ ನಡುವೆ ಅಸ್ಸಾಂನಲ್ಲಿ ನಾಲ್ಕು ಸ್ಫೋಟ
ಗುವಾಹಟಿ, ಜನವರಿ 26: ಗಣರಾಜ್ಯೋತ್ಸವ ಸಂಭ್ರಮದ ನಡುವೆಯೇ ಭಾನುವಾರ ಬೆಳಿಗ್ಗೆ ಅಸ್ಸಾಂನ ಎರಡು ಸ್ಥಳಗಳಲ್ಲಿ ನಾಲ್ಕು ಪ್ರಬಲ ಗ್ರೆನೇಡ್ ಸ್ಫೋಟಗಳು ಸಂಭವಿಸಿವೆ.
ದಿಬ್ರುಗಡದಲ್ಲಿ ಮೂರು ಮತ್ತು ಚಾರೈಡಿಯೋ ಜಿಲ್ಲೆಯಲ್ಲಿ ಒಂದು ಕಡೆ ಸ್ಫೋಟ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಬ್ರುಗಡ ಜಿಲ್ಲೆಯ ಗ್ರಹಾಂ ಬಜಾರ್ ಮತ್ತು ಎ.ಟಿ. ರಸ್ತೆಯ ಗುರುದ್ವಾರದ ಪಕ್ಕದಲ್ಲಿ ಸ್ಫೋಟಗಳು ಉಂಟಾಗಿವೆ. ಮತ್ತೊಂದು ಸ್ಫೋಟ ಬೆಳಗಿನ ಎಂಟು ಗಂಟೆ ಸುಮಾರಿಗೆ ಚಾರೈಡಿಯೋ ಜಿಲ್ಲೆಯ ಸೋನಾರಿ ಸಮೀಪದ ತಿಯಾಕ್ಘಾಟ್ ಟಿನಿಯಾಲಿ ಎಂಬಲ್ಲಿನ ಅಂಗಡಿಯೊಂದರ ಮುಂಭಾಗ ಸಂಭವಿಸಿದೆ.
ಬೈಕ್ನಲ್ಲಿ ಬಂದ ಶಂಕಿ ಉಗ್ರರು ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಇತರೆ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ದಿಬ್ರುಗಡದ ತೈಲ ಪಟ್ಟಣ ದುಲಿಯಾಜಾನ್ ದಲ್ಲಿ ನಾಲ್ಕನೆಯ ಸ್ಫೋಟ ಸಂಭವಿಸಿದೆ. ಇದಲ್ಲದೆ ಟಿನ್ಸುಕಿಯಾ ಜಿಲ್ಲೆಯಲ್ಲಿ ಕೂಡ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ಬಂದಿಲ್ಲ. ಬೆಳಗಿನ 8.15-8.25ರ ಹತ್ತು ನಿಮಿಷಗಳ ಅವಧಿಯಲ್ಲಿ ಎಲ್ಲ ನಾಲ್ಕು ಸ್ಫೋಟಗಳು ಸಂಭವಿಸಿವೆ.
ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಿಬ್ರುಗಡದ ತೈಲ ಪಟ್ಟಣ ದುಲಿಯಾಜಾನ್ ಟಿನಿಯಾಲಿ ಸ್ಫೋಟ ಸಂಭವಿಸಿದ ಸ್ಥಳವು ಪೊಲೀಸ್ ಠಾಣೆಯಿಂದ ಕೇವಲ ನೂರು ಮೀಟರ್ ದೂರದಲ್ಲಿದೆ.
ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
'ಅಸ್ಸಾಂನ ಕೆಲವು ಸ್ಥಳಗಳಲ್ಲಿ ನಡೆದಿರುವ ಬಾಂಬ್ ಸ್ಫೋಟವನ್ನು ಬಲವಾಗಿ ಖಂಡಿಸುತ್ತೇನೆ. ಪವಿತ್ರ ದಿನದಂದು ಭಯ ಮೂಡಿಸುವ ಹೇಡಿತನದ ಪ್ರಯತ್ನವು ಜನರಿಂದ ಸಂಪೂರ್ಣವಾಗಿ ತಿರಸ್ಕಾರಕ್ಕೆ ಒಳಗಾದ ಉಗ್ರರ ಗುಂಪುಗಳ ಹತಾಶೆಯನ್ನು ತೋರಿಸುತ್ತದೆಯಷ್ಟೇ' ಎಂದು ಅವರು ಟ್ವೀಟ್ ಮಾಡಿದ್ದಾರೆ.
-
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post












Click it and Unblock the Notifications