ಜೆಇಇ ಪರೀಕ್ಷೆಯಲ್ಲಿ ಶೇ.99.80ರಷ್ಟು ಅಂಕ ಪಡೆದವರು ಪೊಲೀಸ್ ವಶಕ್ಕೆ
ಗುವಾಹಟಿ, ಅಕ್ಟೋಬರ್.29: ಅಸ್ಸಾಂನಲ್ಲಿ ಜೆಇಇ ಪರೀಕ್ಷೆ ಬರೆಯುವುದಕ್ಕೆ ತನ್ನ ಬದಲಿಗೆ ಬೇರೊಬ್ಬ ಅಭ್ಯರ್ಥಿಯನ್ನು ಕಳುಹಿಸುವ ಮೂಲಕ ವಂಚಿಸಿದ ಆರೋಪಿ ನೀಲ ನಕ್ಷತ್ರ ದಾಸ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
ಗುವಾಹಟಿಯ ಅಜರ್ ಪೊಲೀಸ್ ಠಾಣೆಯಲ್ಲಿ ಮಿತ್ರದೇವ್ ಶರ್ಮಾ ಎಂಬುವವರು ಅಭ್ಯರ್ಥಿ ನೀಲ ನಕ್ಷತ್ರ ದಾಸ್ ವಿರುದ್ಧ ದೂರು ದಾಖಲಿಸಿದ್ದರು. ಈ ದೂರಿನನ್ವಯ ಮುಖ್ಯ ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು, ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದರು.
ಬಂಧಿತ ಆರೋಪಿಗಳನ್ನು ಗುರುವಾರ ಗುವಾಹಟಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ನೀಡುವಂತೆ ಮನವಿ ಮಾಡಿಕೊಂಡರು. ಪೊಲೀಸರ ಮನವಿಗೆ ಸಮ್ಮತಿಸಿದ ಕೋರ್ಟ್, ಮುಂದಿನ ಐದು ದಿನಗಳ ಕಾಲ ಎಲ್ಲ ಐದೂ ಮಂದಿ ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿದೆ.

ಜೆಇಇ ಪರೀಕ್ಷೆಗೇ ಹಾಜರಾಗಿಲ್ಲ ಅಭ್ಯರ್ಥಿ:
ಜೆಇಇ ಪರೀಕ್ಷೆಯಲ್ಲಿ ಶೇ.99.80ರಷ್ಟು ಅಂಕ ಗಳಿಸಿದ ಅಸ್ಸಾಂ ಮೂಲದ ಅಭ್ಯರ್ಥಿ ನೀಲ ನಕ್ಷತ್ರ ದಾಸ್ ಮುಖ್ಯ ಪರೀಕ್ಷೆಗೆ ಹಾಜರಾಗಿರಲಿಲ್ಲ. ಕಳೆದ ಸಪ್ಟೆಂಬರ್.05ರಂದು ನಡೆದ ಜೆಇಇ ಮುಖ್ಯ ಪರೀಕ್ಷೆ ಸಂದರ್ಭದಲ್ಲಿ ತಮ್ಮ ಬದಲಿಗೆ ಬೇರೊಬ್ಬರನ್ನು ಕೂರಿಸಿ ಪರೀಕ್ಷೆ ಬರೆಸಲಾಗಿದೆ ಎಂದು ಆರೋಪಿಸಲಾಗಿದೆ.
ಕಳೆದ ಅಕ್ಟೋಬರ್.23ರಂದು ಜೆಇಇ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಅಭ್ಯರ್ಥಿಯು ಭಾರಿ ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು. ಈ ಸಂಬಂಧ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಮುಖ್ಯ ಪರೀಕ್ಷೆಗೆ ತಮ್ಮ ಬದಲಿಗೆ ಮತ್ತೊಬ್ಬ ಅಭ್ಯರ್ಥಿಯನ್ನು ಕೂರಿಸಿದ ಬಗ್ಗೆ ಮುಖ್ಯ ಅಭ್ಯರ್ಥಿ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಗುವಾಹಟಿ ಪಶ್ಚಿಮ ವಿಭಾಗದ ಹೆಚ್ಚುವರಿ ಡಿಸಿಪಿ ಸುಪ್ರೋತಿವ್ ಲಾಲ್ ಬರುಹಾ ತಿಳಿಸಿದ್ದಾರೆ.
ನಕಲಿ ಅಭ್ಯರ್ಥಿಗಾಗಿ 15 ರಿಂದ 20 ಲಕ್ಷ ಖರ್ಚು:
ಜೆಇಇ ಪರೀಕ್ಷೆಯಲ್ಲಿ ತನ್ನ ಮಗ ಉತ್ತೀರ್ಣರಾಗಬೇಕು ಎಂಬ ಕಾರಣಕ್ಕೆ ವೈದ್ಯರಾಗಿರುವ ಅವರ ತಂದೆಯು 15 ರಿಂದ 20 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಅಭ್ಯರ್ಥಿಯ ತಂದೆ, ಅವರಿಗೆ ಸಹಾಯ ಮಾಡಿದ ಮೂವರು ವ್ಯಕ್ತಿಗಳು ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಇದುವರೆಗೂ ಬಂಧಿಸಲಾಗಿತ್ತು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications