Just in: 500 ರೂಪಾಯಿಗೆ ಜಗಳ, ತಲೆ ಕತ್ತರಿಸಿ ಠಾಣೆಗೆ ತಂದ ಆರೋಪಿ
ಗುವಾಹಟಿ, ಆಗಸ್ಟ್ 17: ಅಸ್ಸಾಂನ ವ್ಯಕ್ತಿಯೊಬ್ಬ 500 ರೂಪಾಯಿ ವಿಷಯದಲ್ಲಿ ಜಗಳ ಮಾಡಿಕೊಂಡು ತನ್ನದೇ ಗ್ರಾಮದ 55 ವರ್ಷದ ವ್ಯಕ್ತಿಯೊಬ್ಬನ ಶಿರಚ್ಛೇದ ಮಾಡಿರುವ ಘಟನೆ ಉತ್ತರ ಅಸ್ಸಾಂನ ಸೋನಿತ್ಪುರ ಜಿಲ್ಲೆಯಲ್ಲಿ ನಡೆದಿದೆ.
ಈ ಬರ್ಬರ ಕೊಲೆ ಬಳಿಕ ಆರೋಪಿಯೇ ಕತ್ತರಿಸಿದ ತಲೆಯೊಂದಿಗೆ ರಾತ್ರಿಯ ವೇಳೆಯಲ್ಲಿ ಸುಮಾರು 25 ಕಿಲೋಮೀಟರ್ ದೂರದ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗಿ ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಅಸ್ಸಾಂನ ಸೋನಿತ್ಪುರ ಜಿಲ್ಲೆಯ ರಂಗಪಾರ ಪೊಲೀಸ್ ಠಾಣೆ ವ್ಯಾಪ್ತಿಯ ದೋಯಲ್ಪುರದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಆಯೋಜಿಸಲಾಗಿದ್ದ ಫುಟ್ಬಾಲ್ ಪಂದ್ಯ ಮುಗಿದ ನಂತರ ಸೋಮವಾರ ರಾತ್ರಿ 10:30ರ ಸುಮಾರಿಗೆ ಈ ಘಟನೆ ನಡೆದಿದೆ. ಅರುಣಾಚಲ ಪ್ರದೇಶದ ಗಡಿಗೆ ಸಮೀಪದಲ್ಲಿರುವ ದೂರದ ಗ್ರಾಮ ದೋಯಲ್ಪುರ.

ಮೃತನನ್ನು ಬೋಯಿಲಾ ಹೆಮ್ರಾಮ್ ಎಂದು ಗುರುತಿಸಲಾಗಿದೆ. ಆರೋಪಿ ಸುನಿರಾಮ್ ಮಾದ್ರಿ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 500 ರೂಪಾಯಿಗಳ ವಿವಾದದ ಪರಿಣಾಮವಾಗಿ ಬೋಯಿಲಾ ಹೇಮ್ರಾಮ್ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾರೆ.
ಘಟನೆಯ ಹಿಂದಿನ ದಿನ ಆರೋಪಿಯಿಂದ 500 ರೂಪಾಯಿ ಸಾಲವನ್ನು ಪಡೆದಿದ್ದರು. ಆದರೆ ನಂತರ ಸಾಲ ಪಡೆದದನ್ನು ಒಪ್ಪಿಲ್ಲ. ಫುಟ್ಬಾಲ್ ಪಂದ್ಯದ ನಂತರ ಮೇಕೆಯನ್ನು ಬಹುಮಾನವಾಗಿ ಗೆದ್ದ ಆರೋಪಿ ಸುನಿರಾಮ್ ಮಾದ್ರಿ, ತನ್ನೊಂದಿಗೆ ಕಸಾಯಿಖಾನೆಗೆ ಬರುವಂತೆ ಬೋಯಿಲಾ ಹೆಮ್ರಾಮ್ನನ್ನು ಕೇಳಿಕೊಂಡಿದ್ದಾರೆ. ಆದರೆ, ಆತ ಆರೋಪಿಯೊಂದಿಗೆ ಹೋಗಲು ನಿರಾಕರಿಸಿದನು. ಇದರಿಂದ ರೊಚ್ಚಿಗೆದ್ದ ಸುನಿರಾಮ್ ಮಾದ್ರಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವ್ಯಕ್ತಿಯನ್ನು ಕೊಂದ ನಂತರ, ಆರೋಪಿ ಕತ್ತರಿಸಿದ ತಲೆಯನ್ನು ಹೊತ್ತುಕೊಂಡು 25 ಕಿ.ಮೀ ನಡೆದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಜೊತೆಗೆ ಕೊಲೆಗೆ ಬಳಸಿದ ಮಚ್ಚನ್ನು ಸಹ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
"ಆರೋಪಿಯನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಮತ್ತು ಪ್ರಕರಣದ ಎಲ್ಲಾ ಅಂಶಗಳನ್ನು ತನಿಖೆ ಮಾಡಲಾಗುತ್ತಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ. ಮೃತ ವ್ಯಕ್ತಿ ಮತ್ತು ಆರೋಪಿಗಳು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications