ಮೇಘಾಲಯ : ಗಣಿ ಕಾರ್ಮಿಕರ ರಕ್ಷಣೆಗೆ ನೌಕಾಪಡೆ ತಂಡ ರವಾನೆ
ಗುವಾಹಟಿ, ಡಿಸೆಂಬರ್ 28 : ಮೇಘಾಲಯದಲ್ಲಿ ಕಲ್ಲಿದ್ದಲಿನ ಗಣಿಯಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರು ರಕ್ಷಣೆಗೆ ನೌಕಾಪಡೆ 15 ಸದಸ್ಯರ ತಂಡವನ್ನು ಕಳುಹಿಸಿದೆ. ಎರಡು ವಾರಗಳಿಂದ ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕಾರ್ಯಾಚರಣೆಗೆ ಆಗಮಿಸಿರುವ ತಂಡ ವಿಶೇಷ ಉಪಕರಣಗಳನ್ನು ತಂದಿದೆ. ನೀರಿನಾಳದಲ್ಲಿ ಚಿತ್ರೀಕರಣ ಮಾಡಬಹುದಾದ ರಿಮೋಟ್ ಮೂಲಕ ನಿಯಂತ್ರಸುವ ವಿಶೇಷ ಸಾಧನಗಳನ್ನು ತರಲಾಗಿದೆ.
ವಿಶೇಷ ತಂಡದ ಮೂರು ಜನರು ಈಗಾಗಲೇ ಗಣಿ ಇರುವ ಪ್ರದೇಶವನ್ನು ತಲುಪಿದ್ದಾರೆ. ಉಳಿದ ಸದಸ್ಯರು 12 ಗಂಟೆಗಳಲ್ಲಿ ಅಲ್ಲಿಗೆ ತಲುಪಲಿದ್ದಾರೆ ಎಂದು ನೌಕಾಪಡೆ ಹೇಳಿದೆ. ಖುದ್ದು ನೌಕಾಪಡೆಯೇ ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳಲಿದೆ.

ಮೇಘಾಲಯದ ಪೂರ್ವ ಜೈಂಟಿಯಾ ಜಿಲ್ಲೆಯ ಲುಂಥಾರಿ ಕಲ್ಲಿದ್ದಲಿನ ಗಣಿಯಲ್ಲಿ 15 ಕಾರ್ಮಿಕರು ಎರಡು ವಾರಗಳಿಂದ ಸಿಲುಕಿದ್ದಾರೆ. ಗಣಿಯೊಳಗೆ ನೀರು ನುಗ್ಗಿದ್ದು, ಅದನ್ನು ಹೊರಹಾಕಲಾಗುತ್ತಿದೆ. ನೀರು ತುಂಬಿರುವುದರಿಂದಲೇ ರಕ್ಷಣಾ ಕಾರ್ಯ ವಿಳಂಬವಾಗುತ್ತಿದೆ.
ಗಣಿಯಲ್ಲಿ ತುಂಬಿರುವ ಅಪಾರ ಪ್ರಮಾಣದ ನೀರನ್ನು ಹೊರ ಹಾಕಲು ಬೇಕಿರುವ ಅಧಿಕ ಸಾಮರ್ಥ್ಯದ ಪಂಪ್ಗಳನ್ನು ಒದಗಿಸಲು ಕಿರ್ಲೋಸ್ಕರ್ ಬ್ರದರ್ಸ್ ಲಿಮಿಟೆಡ್ ಮುಂದೆ ಬಂದಿದೆ. ಕಂಪನಿಯ ತಜ್ಞರ ತಂಡ ಈಗಾಗಲೇ ಸ್ಥಳಕ್ಕೆ ತೆರಳಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications