ಕೊರೊನಾ ಸಂಕಷ್ಟ: ಸಾಲ ತೀರಿಸಲು ಒಂದೇ ಊರಿನ ಹಲವು ಮಂದಿಯಿಂದ ಕಿಡ್ನಿ ಮಾರಾಟ
ಗುವಾಹಟಿ, ಜುಲೈ 13: ಸಾಲ ತೀರಿಸಲು, ಆಸ್ಪತ್ರೆ ಖರ್ಚು ಭರಿಸಲು ಒಂದೇ ಗ್ರಾಮದಲ್ಲಿ ಹಲವು ಮಂದಿ ತಮ್ಮ ಕಿಡ್ನಿ ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕೊರೋನಾ ಸಾಂಕ್ರಾಮಿಕದಿಂದ ಹಲವರ ಬಡತನದ ಸಂಕಷ್ಟ ತೀವ್ರಗೊಂಡಿದೆ. ಈ ನಡುವೆ ಬಡತನದ ಸಂಕಷ್ಟ ಎದುರಿಸಲು, ಬ್ಯಾಂಕ್ ಸಾಲವನ್ನು ಮರುಪಾವತಿ ಮಾಡಲು, ಚಿಕಿತ್ಸೆ ವೆಚ್ಚಗಳನ್ನು ಭರಿಸಲು ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ದಕ್ಷಿಣ ಧರಂತುಲ್ ಗ್ರಾಮದ ಹಲವು ಮಂದಿ ತಮ್ಮ ಕಿಡ್ನಿಗಳನ್ನು ಮಾರಾಟ ಮಾಡಿಕೊಂಡಿದ್ದಾರೆ.
ಕಿಡ್ನಿ ಮಾರಾಟ ಜಾಲದಲ್ಲಿದ್ದ ಓರ್ವ ಮಹಿಳೆ ಸೇರಿ ಒಟ್ಟು ಇಬ್ಬರನ್ನು ಬಂಧಿಸಲಾಗಿದೆ. ಮಹಿಳೆ ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಎಂದು ಎಸ್ ಪಿ ಅಪರ್ಣ ನಟರಾಜನ್ ಮಾಹಿತಿ ನೀಡಿದ್ದಾರೆ.
ಗುವಾಹಟಿ ಮೂಲದ ಏಜೆಂಟ್ ಲಿಲಿಮಾಯ್ ಬೋಡೋ ಕಿಡ್ನಿ ಮಾರಾಟ ಮಾಡಲು ಸಿದ್ಧವಿರುವವರನ್ನು ಹುಡುಕಿ ಗ್ರಾಮಕ್ಕೆ ಬಂದಿದ್ದಾಗ ಆಕೆಯನ್ನು ಬಂಧಿಸಲಾಗಿದೆ.
ಆಕೆ ಭರವಸೆ ನೀಡಿದ್ದರ ಪ್ರಕಾರ ಹಣವನ್ನು ಪಡೆಯದೇ ಅಸಮಾಧಾನಕ್ಕೆ ಒಳಗಾಗಿದ್ದ ಕುಟುಂಬವೊಂದು ಆಕೆಯನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದೆ.
ಕಿಡ್ನಿಯೊಂದಕ್ಕೆ 4-5 ಲಕ್ಷ ರೂಪಾಯಿ ನೀಡುವುದಾಗಿ ಆಮಿಷವೊಡ್ಡುತ್ತಿದ್ದ ಆಕೆ ಕಮಿಷನ್ ಲೆಕ್ಕದಲ್ಲಿ 1.5 ಲಕ್ಷ ಪಡೆಯುತ್ತಿದ್ದಳು ಎಂದು ಸ್ಥಳೀಯರು ತಿಳಿಸಿದ್ದಾರೆ.

ಕೊರೊನಾದಿಂದ ಸಂಕಷ್ಟ
ಗ್ರಾಮದಲ್ಲಿರುವ ಬಹುತೇಕ ಮಂದಿ ರೈತರು ಹಾಗೂ ದಿನ ನಿತ್ಯದ ವೇತನ ಪಡೆಯುವ ಕಾರ್ಮಿಕರಾಗಿದ್ದು, ಸಾಂಕ್ರಾಮಿಕದಿಂದ ತೀವ್ರವಾದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಿಡ್ನಿ ಮಾರಾಟ ಮಾಡಿರುವವರು ನೀಡಿರುವ ಮಾಹಿತಿಯ ಪ್ರಕಾರ ಅವರುಗಳನ್ನು ಕೋಲ್ಕತ್ತಾಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಅರ್ಧ ಡಜನ್ಗೂ ಹೆಚ್ಚಿನ ಗ್ರಾಮಸ್ಥರಿಂದ ಕಿಡ್ನಿ ಮಾರಾಟ
ವಿಚಾರಣೆ ವೇಳೆ ಅರ್ಧ ಡಜನ್ಗೂ ಹೆಚ್ಚಿನ ಗ್ರಾಮಸ್ಥರು ತಮ್ಮ ಕಿಡ್ನಿಯನ್ನು ಮಾರಾಟ ಮಾಡಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ. ಕೆಲವರು ಸಾಲ ಮರುಪಾವತಿ ಮಾಡಲು, ಇನ್ನೂ ಕೆಲವರು ತಮ್ಮ ಕುಟುಂಬ ಸದಸ್ಯರಿಗೆ ಚಿಕಿತ್ಸೆ ಕೊಡಿಸುವುದಕ್ಕಾಗಿ ಕಿಡ್ನಿ ಮಾರಾಟ ಮಾಡಿದ್ದಾರೆ.

ನಿಖರ ಮಾಹಿತಿ ಇಲ್ಲ
"ಕಿಡ್ನಿ ಮಾರಾಟ ಮಾಡಿದವರ ನಿಖರ ಮಾಹಿತಿ ಪೊಲೀಸರ ಬಳಿ ಇಲ್ಲ. ಗ್ರಾಮಸ್ಥರನ್ನು ಸಂಪರ್ಕಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಯಾವುದೇ ಅಂಗ ಕಸಿ ಮಾಡುವುದಕ್ಕೂ ಅನುಮೋದನೆ ನೀಡಲು ಅಧಿಕಾರ ಹೊಂದಿರುವ ರಾಜ್ಯ ಅಂಗಾಂಗ ಕಸಿಗಾಗಿ ಇರುವ ಅಧಿಕೃತ ಸಮಿತಿಯೊಂದಿಗೆ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದೇವೆ, ತನಿಖೆ ಪ್ರಗತಿಯಲ್ಲಿದೆ" ಎಂದು ಎಸ್ ಪಿ ತಿಳಿಸಿದ್ದಾರೆ.

ಏಜೆಂಟ್ ಸೇರಿ ಮೂವರ ಬಂಧನ
ಕಿಡ್ನಿ ಮಾರಾಟ ಜಾಲದ ಏಜೆಂಟ್ ಸೇರಿದಂತೆ ಮೂವರನ್ನು ಗ್ರಾಮದ ಕೆಲವು ಮಂದಿ ಪೊಲೀಸರ ವಶಕ್ಕೆ ಒಪ್ಪಿಸುವ ಮೂಲಕ ಈ ಅಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಈ ವರೆಗೂ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಗ್ರಾಮದ 30 ಮಂದಿ ಕಿಡ್ನಿ ಮಾರಾಟ ಮಾಡಿಕೊಂಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications