ಜಿನ್ನಾ ಹಾದಿ ಅನುಸರಿಸುತ್ತಿರುವ ರಾಹುಲ್ ಗಾಂಧಿ; ಶಿವರಾಜ್ ಸಿಂಗ್ ಚೌಹಾಣ್ ಟೀಕೆ
ಅಸ್ಸಾಂ, ಮಾರ್ಚ್ 15: ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜಿನ್ನಾ ಹೆಜ್ಜೆಯನ್ನು ಅನುಸರಿಸುತ್ತಿದ್ದಾರೆ. ಇದು ದೇಶವನ್ನು ನಾಶಪಡಿಸುವ ಹಾದಿಯಾಗಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆರೋಪಿಸಿದ್ದಾರೆ.
ಅಸ್ಸಾಂನ ನಹರ್ ಕಟಿಯಾದಲ್ಲಿ ಸೋಮವಾರ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, "ಕಾಂಗ್ರೆಸ್ ಮಹಾತ್ಮಾ ಗಾಂಧಿ ಅವರ ಹೆಜ್ಜೆಯಲ್ಲಿ ನಡೆಯುತ್ತಿಲ್ಲ. ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ಮೊಹಮದ್ ಅಲಿ ಜಿನ್ನಾ ಹೆಜ್ಜೆಯನ್ನು ಅನುಸರಿಸುತ್ತಿದ್ದಾರೆ. ಇದು ಅಸ್ಸಾಂ ಹಾಗೂ ಇಡೀ ಭಾರತವನ್ನೇ ನಾಶ ಮಾಡುತ್ತದೆ" ಎಂದು ಹೇಳಿದ್ದಾರೆ.
ಅಸ್ಸಾಂನಲ್ಲಿ ಕಾಂಗ್ರೆಸ್ ಎಐಯುಡಿಎಫ್ ಜೊತೆ, ಪಶ್ಚಿಮ ಬಂಗಾಳದಲ್ಲಿ ಐಎಸ್ಎಫ್ ಜೊತೆ ಹಾಗೂ ಕೇರಳದಲ್ಲಿ ಐಯುಎಂಎಲ್ ಜೊತೆ ಮೈತ್ರಿ ಮಾಡಿಕೊಂಡಿರುವುದರ ಕುರಿತು ದೂರಿದ್ದು, ಸ್ವಾತಂತ್ರ್ಯ ನಂತರದಲ್ಲಿ ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ನಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿದ್ದಾರೆ.

ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27 ರಂದು ಮೊದಲ ಹಂತ, ಏಪ್ರಿಲ್ 1ರಂದು ಎರಡನೇ ಹಂತ ಹಾಗೂ ಏಪ್ರಿಲ್ 6ರಂದು ಮೂರನೇ ಹಂತದ ಚುನಾವಣೆ ನಡೆಯಲಿರುವುದಾಗಿ ಆಯೋಗ ತಿಳಿಸಿದೆ. ಮೇ 2ರಂದು ಫಲಿತಾಂಶ ಹೊರಬೀಳಲಿದೆ. 126 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಪರಿಶಿಷ್ಟ ಜಾತಿಗೆ ಎಂಟು ಹಾಗೂ ಪರಿಶಿಷ್ಟ ಪಂಗಡಕ್ಕೆ 16 ಸೀಟುಗಳನ್ನು ಮೀಸಲಿರಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications