ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ನೆಪ, ಮುಸ್ಲಿಮರ ವಿರುದ್ಧ ಪಿತೂರಿ ಎಂದ ಅಸ್ಸಾಂ ಶಾಸಕನ ಬಂಧನ

|
Google Oneindia Kannada News

ಗುವಾಹಟಿ, ಏಪ್ರಿಲ್ 7: ಕೊರೊನಾ ಹೆಸರಲ್ಲಿ ಮುಸ್ಲಿಮರ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಅಸ್ಸಾಂ ಶಾಸಕ ಅಮಿನುಲ್ ಇಸ್ಲಾಂ ಅವರನ್ನು ಬಂಧಿಸಲಾಗಿದೆ.

ಶಾಸಕ ಅಮಿನುಲ್ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ತುಣುಕಿನ ಬಗ್ಗೆ ವಿಧಾನಸಭಾಧ್ಯಕ್ಷ ಗಮನಕ್ಕೆ ತರಲಾಗಿದೆ. ನಂತರದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸ್ ಮುಖ್ಯಸ್ಥ ಭಾಸ್ಕರ್ ಜ್ಯೋತಿ ಮಹಾಂತ ತಿಳಿಸಿದ್ದಾರೆ.

ಜಮಾತ್ ಮಸೀದಿಗೆ ಹೋಗಿದ್ದವರ ರಾಜ್ಯಾವಾರು ಅಂಕಿ-ಅಂಶ ಇಲ್ಲಿದೆಜಮಾತ್ ಮಸೀದಿಗೆ ಹೋಗಿದ್ದವರ ರಾಜ್ಯಾವಾರು ಅಂಕಿ-ಅಂಶ ಇಲ್ಲಿದೆ

ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖಂಡ ಅಮಿನುಲ್ ಇಸ್ಲಾಂ ತಮ್ಮ ಸಹಚರರೊಂದಿಗೆ ಮಾತನಾಡುತ್ತಾ , ಕೊರೊನಾ ಕ್ವಾರಂಟೈನ್ ವ್ಯವಸ್ಥೆ ಅಕ್ರಮ ನಿವಾಸಿಗಳನ್ನು ಬಂಧನದಲ್ಲಿಡುವ ವ್ಯವಸ್ಥೆಗಿಂತ ಕಡೆಯಾಗಿದೆ. ಈ ಕೇಂದ್ರಗಳು ಅತ್ಯಂತ ಕೊಳಕಾಗಿದೆ.

Sedition Case Against Assam MLA Arrested

ಕಳೆದ ತಿಂಗಳು ನವದೆಹಲಿಯ ನಿಜಾಮುದ್ದೀನ್ ಮರ್ಕಜ್‌ನಲ್ಲಿ ನಡೆದ ತಬ್ಲಿಘಿ ಜಮಾತ್ ಸಭೆಯಲ್ಲಿ ಪಾಲ್ಗೊಂಡಿದ್ದವರಿಗೆ ಈ ಕೇಂದ್ರಗಳಲ್ಲಿನ ವೈದ್ಯರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದಾರೆ. ಒಟ್ಟಾರೆ ಮುಸ್ಲಿಮರನ್ನು ಬಲಿಪಶು ಮಾಡಲು ಹೊರಟಿದ್ದಾರೆ ಎಂದು ಹೇಳಿದ್ದರು.

ಕೊರೊನಾ:ಆಸ್ಪತ್ರೆ ಸುತ್ತ ಅರೆಬೆತ್ತಲಾಗಿ ಓಡಾಡಿದ ಜಮಾತ್ ಕಾರ್ಯಕರ್ತರು ಕೊರೊನಾ:ಆಸ್ಪತ್ರೆ ಸುತ್ತ ಅರೆಬೆತ್ತಲಾಗಿ ಓಡಾಡಿದ ಜಮಾತ್ ಕಾರ್ಯಕರ್ತರು

ಕೊವಿಡ್ 19 ನೆಪದಲ್ಲಿ ಮುಸ್ಲಿಮರನ್ನು ಬಲಿಪಶು ಮಾಡಲು ಕೇಂದ್ರ ಸರ್ಕಾರ ಪಿತೂರಿ ನಡೆಸಿದೆ ಎಂದು ಹೇಳಿ ಸಾಮಾಜಿಕ ಸಾಮರಸ್ಯ ಕದಡಲು ಯತ್ನಿಸಿದ ಅಸ್ಸಾಂನ ನಾಗಾಂವ್ ಜಿಲ್ಲೆಯ ಡಿಂಗ್ ಕ್ಷೇತ್ರದ ಶಾಸಕನನ್ನು ಬಂಧಿಸಲಾಗಿದೆ.

English summary
An MLA of Opposition AIUDF in Assam was arrested on Tuesday on several charges including sedition for making and spreading an audio clip in which he allegedly said that people being quarantined could be killed with injections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X