ಅರುಣಾಚಲ ಪ್ರದೇಶದಲ್ಲಿ 6 ಮಂದಿ ಬಂಡುಕೋರರನ್ನು ಹತ್ಯೆಗೈದ ಯೋಧರು
ತಿರಪ್, ಜುಲೈ 11: ಅರುಣಾಚಲ ಪ್ರದೇಶದಲ್ಲಿ 6 ಮಂದಿ ಬಂಡುಕೋರರನ್ನು ಭಾರತೀಯ ಸೇನೆ ಹತ್ಯೆಗೈದಿದೆ.
Recommended Video
ಅರುಣಾಚಲಯಪ್ರದೇಶದಲ್ಲಿ ಶನಿವಾರ ಬೆಳಗಿನ ಜಾವ 4.30ರ ಸುಮಾರಿಗೆ ಗುಂಡಿನ ಮೊರೆತ ಆರಂಭವಾಗಿತ್ತು. ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿದೆ ಎಂದು ಗುಪ್ತಚರ ಮಾಹಿತಿ ನೀಡಿದೆ.
ಪುಲ್ವಾಮಾದಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ
ಕಾರ್ಯಾಚರಣೆಯಲ್ಲಿ ಅಸ್ಸಾಂನ ಸೈನಿಕರೊಬ್ಬರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭಾರತೀಯ ಸೇನೆ ಓರ್ವ ಉಗ್ರನನ್ನು ಸದೆಬಡಿದಿತ್ತು.
ಮಂಗಳವಾರ ಬೆಳಗ್ಗೆ ಪುಲ್ವಾಮಾದ ಗೂಸು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ಪಡೆದು ಭಾರತೀಯ ಸೇನಾ ಪಡೆ, ಕಾರ್ಯಾಚರಣೆಯನ್ನು ಆರಂಭಿಸಿತ್ತು.
ಇದೇ ಸಂದರ್ಭದಲ್ಲಿ ಯೋಧರ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು, ಇದಕ್ಕೆ ಪ್ರತಿಯಾಗಿ ಸೇನೆ ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿರುವ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದು ಎನ್ಕೌಂಟರ್ ನಡೆಸಿದ್ದರು.