ಅಸ್ಸಾಂ: ಒಎನ್ಜಿಸಿ ತೈಲ ಸಂಸ್ಕರಣಾ ಘಟಕದ 6 ಉದ್ಯೋಗಿಗಳ ಅಪಹರಣ
ಗುವಾಹಟಿ, ಏಪ್ರಿಲ್ 21: ಅಸ್ಸಾಂನ ಸರ್ಕಾರಿ ಸ್ವಾಮ್ಯದ ಒಎನ್ಜಿಸಿ ತೈಲ ಸಂಸ್ಕರಣಾ ಘಟಕದ ಆರು ಮಂದಿ ಉದ್ಯೋಗಿಗಳ ಅಪಹರಿಸಲಾಗಿದೆ ಎನ್ನುವ ಮಾಹಿತಿ ಕೇಳಿಬಂದಿದೆ.
ಸಿಬ್ಬಂದಿಯನ್ನು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ತನ್ನ ಸಿಬ್ಬಂದಿಗಳ ಅಪಹರಣದ ಕುರಿತು ಒಎನ್ ಜಿಸಿ ಕೂಡ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಇಂದು ಬೆಳಗಿನ ಜಾವ ಶಿವಸಾಗರ ಜಿಲ್ಲೆಯ ಲಖ್ವಾ ಒಎನ್ ಜಿಸಿ ಘಟಕದಲ್ಲಿ ಮೂವರು ಸಿಬ್ಬಂದಿಗಳನ್ನು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ. ಅಪಹರಣಕ್ಕೊಳಗಾದ ನೌಕರರನ್ನು ಒಎನ್ಜಿಸಿಗೆ ಸೇರಿದ ಕಾರ್ಯಾಚರಣಾ ವಾಹನದಲ್ಲಿಯೇ ದುಷ್ಕರ್ಮಿಗಳು ಕರೆದೊಯ್ದಿದ್ದಾರೆ.
ಅಸ್ಸಾಂ ಶಿವಸಾಗರ ಜಿಲ್ಲೆಯ ಲಖ್ವಾದಿಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ತೈಲ ಸಂಸ್ಕರಣಾ ಘಟಕದ ಇಬ್ಬರು ಸಹಾಯಕ ಜೂನಿಯರ್ ಇಂಜಿನಿಯರ್ಗಳು ಮತ್ತು ಓರ್ವ ಜೂನಿಯರ್ ಟೆಕ್ನಿಷಿಯನ್ನ್ನು ಅಪಹರಿಸಿದ್ದಾರೆ.
3 ONGC employees, 2 Junior Engineer Assistants (Production) & a Junior Technician (Production) have been abducted by unknown armed miscreants in the early hours of 21 April 2021. The abduction took place on a rig site of ONGC in Lakwa field of Sivasagar District.
— ONGC (@ONGC_) April 21, 2021
ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸ್ ದೂರು ದಾಖಲಿಸಲಾಗಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನು ವಿಚಾರ ತಿಳಿಯುತ್ತಿದ್ದಂತೆಯೇ ಅಸ್ಸಾಂ ರಾಜ್ಯ ಪೊಲೀಸರ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಘಟನೆಯ ಬಗ್ಗೆ ಸ್ಥಳೀಯ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಮತ್ತು ಒಎನ್ಜಿಸಿ ಉನ್ನತ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಂತರ, ಅಸ್ಸಾಂ-ನಾಗಾಲ್ಯಾಂಡ್ ಗಡಿಯ ಸಮೀಪವಿರುವ ನಿಮೋನಗಢ ಅರಣ್ಯದ ಬಳಿ ವಾಹನವನ್ನು ಬಿಟ್ಟು ಸಿಬ್ಬಂದಿಗಳೊಂದಿಗೆ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಸ್ಥಳೀಯ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಟ್ವೀಟ್ ಮಾಡಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications