ಗುವಾಹತಿ ಬಾಂಬ್ ಸ್ಫೋಟ: ಕಿರುತೆರೆ ನಟ ಸೇರಿ ಇಬ್ಬರ ಬಂಧನ
ಗುವಾಹತಿ, ಮೇ 17: ಇಲ್ಲಿನ ಶಾಪಿಂಗ್ ಮಾಲ್ ಎದುರು ಗ್ರೆನೇಡ್ ಸ್ಫೋಟ ಪ್ರಕರಣ ಆರೋಪದ ಮೇಲೆ ಆಸ್ಸಾಂ ಕಿರುತೆರೆ ನಟ ಹಾಗೂ ಉಲ್ಫಾ ಉಗ್ರ ಸಂಘಟನೆಯ ಹಿರಿಯ ಸದಸ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ದುಷ್ಕೃತ್ಯಗಳನ್ನು ಎಸಗಲು ಯತ್ನಿಸುವವರ ಪ್ರಯತ್ನವನ್ನು ಹತ್ತಿಕ್ಕಲಾಗುವುದು ಎಂದು ಸಿಎಂ ಸರ್ಬಾನಂದ್ ಸೋನೋವಾಲ ಹೇಳಿದ್ದಾರೆ.
ಗುವಾಹತಿಯಲ್ಲಿ ಬುಧವಾರ(ಮೇ15) ಸಂಜೆ ಶಾಪಿಂಗ್ ಮಾಲ್ ಬಳಿ ಝೂ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಸ್ಫೋಟದ ಪರಿಣಾಮ ಇಬ್ಬರು ಸಶಸ್ತ್ರ ಸೀಮಾ ಬಲದ ಸಿಬ್ಬಂದಿ ಸೇರಿದಂತೆ 11 ಮಂದಿಗೆ ತೀವ್ರಗಾಯಗಳಾಗಿವೆ.

ಪರೇಶ್ ಬರುವಾ ನೇತೃತ್ವದ ಉಲ್ಫಾ ಉಗ್ರ ಸಂಘಟನೆ ಈ ಘಟನೆಯ ಹೊಣೆ ಹೊತ್ತುಕೊಂಡಿತ್ತು. ಕೇಂದ್ರ ಅಸ್ಸಾಂನ ತೀನ್ ಸುಕಿಯಾದಲ್ಲಿ ಮೂವರು ಉಲ್ಫಾ ಉಗ್ರರನ್ನು ಬಂಧಿಸಲಾಗಿತ್ತು. ಅದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು.
ಉಲ್ಫಾ ಪರವಿದ್ದ ನಟ: ಖಚಿತ ಮಾಹಿತಿ ಮೇರೆಗೆ ನಟ ಜಹ್ನವಿ ಸೈಕಿಯಾ ಅವರು ಬಾಡಿಗೆ ಪಡೆದು ತಂಗಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದರು. ಉಲ್ಫಾ ಸಂಘಟನೆಯ ಪ್ರನೋಮೊಯ್ ರಾಜ್ ಗುರು ಕೂಡಾ ಸೆರೆ ಹಿಡಿಯಲಾಗಿದೆ. ಇವರಿಬ್ಬರು ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸ್ಸೋಂ(ULFA) ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಶಾಪಿಂಗ್ ಮಾಲ್ ಬಳಿ ಸ್ಫೋಟದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಪೊಲೀಸರು ಹೇಳಿದರು.
ದಾಳಿ ವೇಳೆ 20 ಕೆಜಿ ಗನ್ ಪೌಡರ್, ಬಾಂಬ್ ತಯಾರಿಕೆ ವಸ್ತುಗಳು, ಒಂದು ಪಿಸ್ತೂಲ್, 25 ರೌಂಡ್ ಗುಂಡುಗಳು ಪತ್ತೆಯಾಗಿದ್ದು, ಎಲ್ಲವನ್ನು ಜಪ್ತಿ ಮಾಡಲಾಗಿದೆ. 1986ರಲ್ಲಿ ಉಲ್ಫಾ ಸೇರಿದ ರಾಜ್ ಗುರು, ಗುವಾಹತಿ ಹೊರವಲಯದಲ್ಲಿ ಆತಂಕ ಸೃಷ್ಟಿಸುವ ಹೊಣೆ ಹೊತ್ತುಕೊಂಡಿದ್ದ. ಈತನ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಸೈಕಿಯಾ ನೋಡಿಕೊಳ್ಳುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications