ಅಸ್ಸಾಂ: ಮಾರ್ಕೆಟ್ನಲ್ಲಿ ಗ್ರೆನೇಡ್ ಸ್ಫೋಟದಿಂದ ಇಬ್ಬರ ಸಾವು
ಗುವಾಹಟಿ, ನವೆಂಬರ್ 22: ಅಸ್ಸಾಂನ ಶಿವಸಾಗರ್ ಜಿಲ್ಲೆಯಲ್ಲಿ ಗುರುವಾರ ಸಂಜೆ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ನಡೆದ ಗ್ರೆನೇಡ್ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಸರ್ಕಾರ ಮತ್ತು ಉಲ್ಫಾ ಉಗ್ರರ ಮಾತುಕತೆಯ ವಿರುದ್ಧ ಇರುವ ಗುಂಪು ಈ ದಾಳಿ ನಡೆಸಿದೆ ಎಂದು ಶಂಕಿಸಲಾಗಿದ್ದು, ಘಟನೆಯಲ್ಲಿ ಇನ್ನೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಸಾವಿಗೀಡಾದವರಲ್ಲಿ ಒಬ್ಬ ವ್ಯಕ್ತಿ ಸ್ಫೋಟ ಸಂಭವಿಸಿದ ಹಾರ್ಡ್ ವೇರ್ ಅಂಗಡಿಗೆ ಬಂದಿದ್ದ ಗ್ರಾಹಕ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಬ್ಬ ವ್ಯಕ್ತಿಯನ್ನು ಸ್ಥಳೀಯ ವ್ಯಾಪಾರಿ ಕಮಲ್ ಅಗರವಾಲ್ ಎಂದು ಗುರುತಿಸಲಾಗಿದೆ.

ಡೆಮೊವ್ ಚರಿಲಾಲ್ನಲ್ಲಿನ ನಿತಾಯಿ ರಸ್ತೆಯಲ್ಲಿ ಸಂಜೆ 5.30ರ ವೇಳೆಗೆ ಈ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಅಸ್ಸಾಂ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ತಿನ್ಸುಕಿಯಾ ಜಿಲ್ಲೆಯಲ್ಲಿ ಧೋಲಾದಲ್ಲಿ ಬಂಗಾಳಿ ಮಾತನಾಡುವ ಐವರನ್ನು ನ.1ರಂದು ಉಗ್ರರ ಸಂಘಟನೆ ಹತ್ಯೆ ಮಾಡಿತ್ತು.
ಕಳೆದ ಎರಡು ವಾರಗಳಲ್ಲಿ ಇಬ್ಬರು ಟೀ ಉದ್ಯಾನದ ಉದ್ಯೋಗಿಗಳನ್ನು ಸೇರಿದಂತೆ ಮೂವರು ವ್ಯಕ್ತಿಗಳನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇರಿಸಿದ್ದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications