Get Updates
Get notified of breaking news, exclusive insights, and must-see stories!

ಬಜೆಟ್‌; ಹಾಸನ-ಬೇಲೂರು-ಚಿಕ್ಕಮಗಳೂರು ಮಾರ್ಗಕ್ಕೆ ಅನುದಾನ

ಹಾಸನ, ಫೆಬ್ರವರಿ 5; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರೈಲ್ವೆ ಇಲಾಖೆಗೆ ನಿಗದಿ ಮಾಡಿರುವ ಅನುದಾನದ ವಿವರಗಳಿರುವ ಪಿಂಕ್ ಬುಕ್ ಅನ್ನು ಇಲಾಖೆ ಬಿಡುಗಡೆ ಮಾಡಿದೆ. ಬಹು ನಿರೀಕ್ಷಿತ ಚಿಕ್ಕಮಗಳೂರು-ಬೇಲೂರು-ಹಾಸನ ರೈಲು ಮಾರ್ಗಕ್ಕೆ 1000 ಕೋಟಿ ಅನುದಾನ ನೀಡಲಾಗಿದೆ.

ಹಾಸನ-ಬೇಲೂರು-ಚಿಕ್ಕಮಗಳೂರು ನೂತನ ರೈಲು ಮಾರ್ಗ ನಿರ್ಮಾಣಕ್ಕೆ 1000 ಕೋಟಿ ಅನುದಾನ ನೀಡಲಾಗಿದೆ. ಮಹತ್ವದ ರೈಲು ಮಾರ್ಗಕ್ಕೆ ಈ ಅನುದಾನ ಕಡಿಮೆಯಾಯಿತು ಎಂಬ ಆಕ್ಷೇಪಗಳು ಕೇಳಿ ಬಂದಿವೆ.

ಬೆಂಗಳೂರು ಮತ್ತು ಮೈಸೂರು ನಗರವನ್ನು ಸಂಪರ್ಕಿಸುವ ಚಿಕ್ಕಮಗಳೂರು ನೇರ ರೈಲು ಸಂಪರ್ಕ ಯೋಜನೆ ಮಹತ್ವದ್ದಾಗಿದೆ. ಈ ಮಾರ್ಗಕ್ಕೆ ಮಂಜೂರಾತಿ ದೊರೆತು ನಾಲ್ಕು ವರ್ಷಗಳು ಕಳೆದರೂ ಅನುದಾನ ಮಾತ್ರ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ ಎಂಬ ಆರೋಪವೂ ಇದೆ.

1000 Crore For Hassan Beluru Chikkamagaluru Railway Line

ಚಿಕ್ಕಮಗಳೂರು-ಬೇಲೂರು ನಡುವಿನ ಭೂ ಸ್ವಾಧೀನ ಕಾರ್ಯ ಪೂರ್ಣಗೊಂಡಿದೆ. ಹಾಸನ-ಬೇಲೂರು ನಡುವಿನ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿದೆ. ಆದರೂ ಬಜೆಟ್‌ನಲ್ಲಿ ಸರಿಯಾಗಿ ಅನುದಾನ ನಿಗದಿ ಮಾಡಿಲ್ಲ ಎಂದು ಆರೋಪಿಸಲಾಗುತ್ತಿದೆ.

ವಿದ್ಯುದೀಕರಣಕ್ಕೆ 162.6 ಕೋಟಿ; ಹಾಸನ ಜಿಲ್ಲೆಯನ್ನು ಸಂಪರ್ಕಿಸುವ ಒಟ್ಟು 2 ರೈಲು ಮಾರ್ಗಗಳ ವಿದ್ಯುದೀಕರಣಕ್ಕೆ ಒಟ್ಟು 162.6 ಕೋಟಿ ರೂ.ಗಳನ್ನು ನಿಗದಿ ಮಾಡಲಾಗಿದೆ. ಚಿಕ್ಕಬಣಾವರ-ಹಾಸನ ಮಾರ್ಗದ ವಿದ್ಯುದೀಕರಣಕ್ಕೆ 50.6 ಕೋಟಿ ರೂ.ಗಳು.

ಮೈಸೂರು-ಹಾಸನ-ಮಂಗಳೂರು ನಡುವಿನ 347 ಕಿ. ಮೀ. ವಿದ್ಯುದೀಕರಣಕ್ಕೆ 112 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+