ಹಾಸನ : ಚಿತ್ರಹಿಂಸೆ ಕೊಟ್ಟು ಜೀತಕ್ಕೆ ಬಿಟ್ಟಿದ್ದ 52 ಕಾರ್ಮಿಕರ ರಕ್ಷಣೆ
ಹಾಸನ, ಡಿಸೆಂಬರ್ 17 : ಹಾಸನ ಜಿಲ್ಲೆಯಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಜೀತಕ್ಕಿದ್ದ 52 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಮೂರು ವರ್ಷಗಳಿಂದ ವೇತನ ನೀಡದೆ, ಚಿತ್ರಹಿಂಸೆ ನೀಡಿ ಕಾರ್ಮಿಕರಿಂದ ಕೆಲಸ ಮಾಡಿಸಲಾಗುತ್ತಿತ್ತು.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಸಾವಂತಿಹಳ್ಳಿ ಗ್ರಾಮದಲ್ಲಿನ ಹೊಲದಲ್ಲಿ ಜೀತಕ್ಕಿದ್ದ 52 ಜನರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಈ ಮೃತ್ಯಕೂಪದಿಂದ ತಪ್ಪಿಸಿಕೊಂಡು ಬಂದ ವ್ಯಕ್ತಿ ನೀಡಿದ ಮಾಹಿತಿ ಅನ್ವಯ ದಾಳಿ ನಡೆಸಿ, ಎಲ್ಲರನ್ನು ರಕ್ಷಣೆ ಮಾಡಲಾಗಿದೆ.
ಸಾವಂತಿಹಳ್ಳಿಯಲ್ಲಿ ಬೆಂಗಳೂರಿನ ಕೃಷ್ಣೇಗೌಡ ಅವರು 8 ಎಕರೆ ಭೂಮಿ ಹೊಂದಿದ್ದರು. ಮುರಳಿ ಎನ್ನುವವರಿಗೆ ಹೊಲವನ್ನು ನೋಡಿಕೊಳ್ಳುವ ಜವಾಬ್ದಾರಿ ವಹಿಸಿದ್ದರು. ಜಮೀನಿನ ಕೂಲಿ ಕೆಲಸಕ್ಕೆ ಜನರನ್ನು ಕರೆತಂದ ಆತ ಅವರಿಗೆ ಚಿತ್ರಹಿಂಸೆ ಕೊಟ್ಟು, ವೇತನ ನೀಡಿದೆ ದುಡಿಸಿಕೊಳ್ಳುತ್ತಿದ್ದ.

ಆಟೋ ಚಾಲಕ ನಾಗಣ್ಣ ಮತ್ತು ಮುರಳಿ ಬಸ್ ಮತ್ತು ರೈಲ್ವೆ ನಿಲ್ದಾಣದಲ್ಲಿರುವ ಅನಾಥರಿಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆದುಕೊಂಡು ಬರುತ್ತಿದ್ದರು. ಇಲ್ಲಿಗೆ ಬಂದ ಬಳಿಕ ಅವರಿಂದ ಹೆಚ್ಚು ಕೆಲಸ ಮಾಡಿಸಿ, ಊಟ, ಮೂಲ ಸೌಕರ್ಯಗಳನ್ನು ನೀಡದೆ ಹಿಂಸಿಸಿ ಕೆಲಸ ಮಾಡಿಸಲಾಗುತ್ತಿತ್ತು.
ರಾತ್ರಿ 52 ಜನರನ್ನು ಪುಟ್ಟ ಗುಡಿಸಲಲ್ಲಿ ಕೂಡಿ ಬೀಗ ಹಾಕಿಕೊಂಡು ಹೋಗಲಾಗುತ್ತಿತ್ತು. ಮೂರು ವರ್ಷಗಳಿಂದ ಅವರಿಗೆ ಹೊರ ಜಗತ್ತಿನ ಸಂಪರ್ಕವೇ ಇರಲಿಲ್ಲ. ಮಾಲೀಕರು ನೀಡುವ ಹಿಂಸೆ ತಾಳಲಾರದೆ ಓಡಿ ಹೋದ ವ್ಯಕ್ತಿ ಜೀತ ಪದ್ಧತಿ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ.
3 ರಿಂದ 65 ವರ್ಷದ ಕಾರ್ಮಿಕರು ಇಲ್ಲಿ ಜೀತ ಮಾಡುತ್ತಿದ್ದರು. ಆಂಧ್ರಪ್ರದೇಶ, ರಾಯಚೂರು, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳ ಕಾರ್ಮಿಕರು ಜೀತಕ್ಕಿದ್ದರು. ಮಾಲೀಕ ಮುರಳಿ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications