ಹಾಸನ ಜಿಲ್ಲೆಯ ಈ ಮಾರ್ಗದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ₹576.22 ಕೋಟಿ ಮಂಜೂರು-ಮಾಹಿತಿ
ಹಾಸನ , ಮಾರ್ಚ್, 15: ರಾಜ್ಯದಲ್ಲಿ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇನ್ನು ಇದೀಗ ಹಾಸನ ಜಿಲ್ಲೆಯ ಎನ್ಎಚ್-373ರ ಯೆಡೇಗೌಡನಹಳ್ಳಿಯಿಂದ ಅರ್ಜುನಹಳ್ಳಿ ಭಾಗದ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 576.22 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಹಾಗಾದರೆ ಎಷ್ಟು ಕಿಲೋ ಮೀಟರ್ ರಸ್ತೆ ನಿರ್ಮಾಣ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
22.3 ಕಿಲೋ ಮೀಟರ್ ಉದ್ದದ ಈ ರಸ್ತೆಯು ಪ್ರಸಿದ್ಧ ಪ್ರವಾಸಿ ತಾಣಗಳಾದ ಚಿಕ್ಕಮಗಳೂರು, ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳಕ್ಕೆ ಸಂಪರ್ಕ ಕಲ್ಪಿಸುತ್ತದೆ. ಹೀಗೆ ಪ್ರವಾಸೋದ್ಯಮವನ್ನು ಉತ್ತೇಜಿಸಲಿದ್ದು, ಈ ಮೂಲಕ ಇದರಿಂದ ಹೆಚ್ಚಿನ ಸಂಪರ್ಕ ಸಾಧಿಸುವುದಲ್ಲದೇ, ಆರ್ಥಿಕತೆಯಲ್ಲಿ ಹೆಚ್ಚಿನ ಬೆಳೆವಣಿಗೆಯನ್ನು ಕಾಣಬಹುದಾಗಿದೆ.

ಎಕ್ಸಿಟ್ ಟೋಲ್ ನಿರ್ಮಾಣಕ್ಕೆ ಅನುಮತಿ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನ ಟೋಲ್ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಗಲಾಟೆಗಳು ಆಗಿವೆ. ನಂತರ ಹಲವು ಬದಲಾವಣೆಗಳು ಕೂಡ ಆಗಿವೆ. ಹೀಗೆ ಒಂದಲ್ಲ ಒಂದು ವಿಚಾರಲ್ಲಿ ಈ ಹೆದ್ದಾರಿ ಸುದ್ದಿಯಾಗುತ್ತಲೇ ಇದೆ. ಇದೀಗ ಎಕ್ಸ್ಪ್ರೆಸ್ ವೇನಲ್ಲಿ ಹೆದ್ದಾರಿ ಬಳಸಿದಷ್ಟೇ ಟೋಲ್ ಶುಲ್ಕ ನೀಡುವ ಎಕ್ಸಿಟ್ ಮತ್ತು ಎಂಟ್ರಿ ಟೋಲ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹಾಗಾದರೆ ಇದಕ್ಕೆ ಬಿಡುಗಡೆ ಮಾಡಿದ ಹಣ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಹೆದ್ದಾರಿಯಲ್ಲಿ ಎಕ್ಸಿಟ್ ಮತ್ತು ಎಂಟ್ರಿ ಟೋಲ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ದೊರೆತಿದೆ. ಹಾಗಾದರೆ ಈ ವ್ಯವಸ್ಥೆ ಎಲ್ಲೆಲ್ಲಿ ಜಾರಿಯಾಗಲಿದೆ ಹಾಗೂ ಇದಕ್ಕೆ ಪ್ರತಿಕ್ರಿಯೆಗಳು ಯಾವ ರೀತಿ ವ್ಯಕ್ತವಾಗುತ್ತಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇನ್ನು ಶೀಘ್ರವೇ ಪ್ರವೇಶ ಮತ್ತು ನಿರ್ಗಮನ ಟೋಲ್ ನಿರ್ಮಾಣ ಕಾಮಗಾರಿ ಆರಂಭ ಆಗಲಿದೆ. ಇದೀಗ ಎಕ್ಸ್ಪ್ರೆಸ್ವೇನಲ್ಲಿ ಓಪನ್ ಟೋಲ್ ಮಾದರಿಯಲ್ಲಿ ಹೆದ್ದಾರಿ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಇದರಿಂದ ಒಂದು ಕಿಲೋಮೀಟರ್ ಹೆದ್ದಾರಿ ಬಳಸಿದರೂ ಪೂರ್ಣ ಬಳಕೆಯ ಶುಲ್ಕ ಕೊಡಬೇಕಿದ್ದು, ಇದರ ವಿರುದ್ಧ ಸಾರ್ವಜನಿಕರು ಕೆಂಡಕಾರುತ್ತಿದ್ದಾರೆ.
ಎಕ್ಸ್ಪ್ರೆಸ್ವೇನ ಪ್ರಮುಖ ನಗರಗಳಿಗೆ ವ್ಯವಸ್ಥಿತವಾದ ಪ್ರವೇಶ ಹಾಗೂ ನಿರ್ಗಮನದ ವ್ಯವಸ್ಥೆಯಿಲ್ಲ. ಈ ಸಮಸ್ಯೆಯನ್ನು ನಿವಾರಣೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ 1,200 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತ್ಯೇಕ ಯೋಜನೆ ಪ್ರಸ್ತಾವನೆ ಸಲ್ಲಿಸಿದ್ದು, ಇದೀಗ ಇದಕ್ಕೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆ.
ಎಕ್ಸ್ಪ್ರೆಸ್ವೇ ಹಾದು ಹೋಗಲಿರುವ ಬಿಡದಿ, ರಾಮನಗರ, ಚನ್ನಟಪಟ್ಟಣ, ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣ ನಗರಗಳ ಬಳಿ ಪ್ರವೇಶ ಮತ್ತು ನಿರ್ಗಮನ ದ್ವಾರದ ನಿರ್ಮಾಣಕ್ಕೆ ಯೋಜನೆಯು ಅವಕಾಶ ಕಲ್ಪಿಸಿಕೊಡಲಿದೆ.
ಕುಂಬಳಗೂಡು ಟೋಲ್ ಪ್ಲಾಜಾ, ಬಿಡದಿ, ರಾಮನಗರದ ಕೆಂಪೇಗೌಡನದೊಡ್ಡಿ, ಚನ್ನಪಟ್ಟಣದ ತಿಟ್ಟಮಾರನಹಳ್ಳಿ ಅಥವಾ ಮತ್ತೀಕೆರೆ, ಶೆಟ್ಟಿಹಳ್ಳಿ, ಮದ್ದೂರಿನ ನಿಡಘಟ್ಟ, ಮಂಡ್ಯ ಬೈಪಾಸ್ ಟೋಲ್, ಶ್ರೀರಂಗಪಟ್ಟಣ ಟೋಲ್ ಸ್ಥಳದಲ್ಲಿ ವಾಹನ ಹೆದ್ದಾರಿಗೆ ಪ್ರವೇಶ ಪಡೆಯುವ ಅವಕಾಶ ಮಾಡಿಕೊಡುವ ನಿರ್ಧಾರ ಮಾಡಿದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications