ಹಾಸನ:ನಿಧಿ ಆಸೆ ತೋರಿಸಿ 5 ಲಕ್ಷ ಹಣ ಪಂಗನಾಮ ಹಾಕಿದ ಕಳ್ಳ ಸ್ಚಾಮೀಜಿ
ಹಾಸನ, ಆಗಸ್ಟ್ 18 : ಕಳ್ಳ ಸ್ವಾಮೀಜಿಯೊಬ್ಬ ನಿಮ್ಮ ಜಮೀನಿನಲ್ಲಿರೋ ನಿಧಿ ತೆಗೆಯುತ್ತೇನೆಂದು ದಂಪತಿಗೆ ನಂಬಿಸಿ, ಐದು ಲಕ್ಷ ಹಣ ಪೀಕಿ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ದೊಡ್ಡಮಗ್ಗೆ ಗ್ರಾಮದ ಮಂಜೇಗೌಡ ಹಾಗೂ ಲೀಲಾವತಿ ಎಂಬ ದಂಪತಿಗಳೇ ಮೋಸ ಹೋದವರು. ದೊಡ್ಡಹಳ್ಳಿ ಗ್ರಾಮದ ಮಂಜೇಗೌಡ ಎಂಬಾತ ಮೊದಲು ನನಗೆ ದೇವರು ಬರುತ್ತದೆ, ನನಗೆ ದೈವ ಶಕ್ತಿ ಇದೆ ಎಂದು ನಂಬಿಸಿದ್ದಾನೆ, ನಂತರ ನಿಮ್ಮ ಜಮೀನಿನಲ್ಲಿ ನಿಧಿ ಇದೆ, ಚಿನ್ನದ ದೇವರ ವಿಗ್ರಹ ಇದೆ ಎಂದು ಹೇಳಿ ಪುಸಲಾಯಿಸಿದ್ದಾನೆ. ಕಳ್ಳ ಸ್ವಾಮಿ ಮಾತಿಗೆ ಮರುಳಾದ ಚಿನ್ನದ ಆಸೆಯಿಂದ ದಂಪತಿ ನಿಧಿಯನ್ನು ತೆಗೆಸುವುದಕ್ಕೆ ಒಪ್ಪಿಕೊಂಡಿದ್ದಾರೆ.
ಆದರೆ ನಿಧಿ ತೆಗೆಯಬೇಕಾದರೆ ಸಾಕಷ್ಟು ಪೂಜೆ ಹಾಗೂ ಮನೆಯ ಹೆಂಗಸಿನ ರಕ್ತದ ಅಭಿಷೇಕ ಮಾಡಬೇಕಾಗುತ್ತದೆ, ಅದಕ್ಕೆ ಐದು ಲಕ್ಷ ಹಣ ಖರ್ಚಾಗುತ್ತದೆ ಎಂದು ಕಳ್ಳಸ್ವಾಮಿ ಹೇಳಿ ನಂಬಿಸಿದ್ದಾನೆ. ಅದಕ್ಕೆ ಮಂಜೇಗೌಡ ಹಾಗೂ ಲೀಲಾವತಿ ಒಪ್ಪಿಕೊಂಡು ಪೂಜೆ ಮಾಡಿಸಿದ್ದಾರೆ.

ಕಳ್ಳಸ್ವಾಮಿ ಮಂಜೇಗೌಡ ಜಮೀನಿನಲ್ಲಿ ಯಾರಿಗೂ ಗೊತ್ತಾಗದ ಹಾಗೆ ಮೊದಲೇ ಹೋಗಿ ಮೂರು ಕೆಜಿ ತೂಕದ ಚಿನ್ನ ಲೇಪಿತ ಬೆಳ್ಳಿಯ ವಿಗ್ರಹವನ್ನ ಹೂತಿಟ್ಟು ಬಂದಿರುತ್ತಾನೆ. ನಂತರ ದಂಪತಿಯನ್ನು ಆ ಜಾಗಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಸಾಕಷ್ಟು ಪೂಜೆಮಾಡಿದ ನಂತರ ಚಿನ್ನಲೇಪಿತ ಬೆಳ್ಳಿ ವಿಗ್ರಹವನ್ನ ಹೊರಗೆ ತೆಗೆದಿದ್ದಾನೆ. ಹೊರಗೆ ತೆಗೆಯುತ್ತಿದ್ದಂತೆ ಮಂಜೇಗೌಡ ಪತ್ನಿ ಲೀಲಾವತಿ ಅವರ ಕೈ ಕೊಯ್ದು ರಕ್ತದ ಅಭಿಷೇಕ ಮಾಡುತ್ತಾನೆ ವಿಗ್ರಹವನ್ನು ಕೊಟ್ಟು ದುಡ್ಡು ಪಡೆದು ಪರಾರಿಯಾಗಿದ್ದಾನೆ.
ಕೈ ಕೊಯ್ಯುವ ವೇಳೆ ಕೈ ನರವನ್ನ ಕಟ್ ಆಗಿದ್ದರೂ ಏನೋ ಮಿಸ್ಸಾಗಿ ಆಗಿರಬಹುದೆಂದು ದಂಪತಿ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದಾರೆ. ಘಟನೆ ನಡೆದು ಒಂದು ವಾರದ ಬಳಿಕ ಜುಯೆಲರಿ ಅಂಗಡಿಗೆ ಹೋಗಿ ಪರೀಕ್ಷೆ ಮಾಡಿಸಿದಾಗ ಆ ವಿಗ್ರಹ ಚಿನ್ನದ್ದಲ್ಲ ಬೆಳ್ಳಿಯದ್ದು, ನಾವು ಮೋಸ ಹೋಗಿದ್ದೇವೆ ಎಂದು ಮನೆಯವರಿಗೆ ಗೊತ್ತಾಗಿದೆ.
ಕಳ್ಳ ಸ್ವಾಮೀಜಿ ದಂಪತಿಗೆ ಮೋಸ ಮಾಡಿ, ಐದು ಲಕ್ಷ ಹಣದ ಸಮೇತ ಎಸ್ಕೇಪ್ ಆಗಿದ್ದಾನೆ. ಮೋಸದ ಬಗ್ಗೆ ಜನರಿಗೆ ತಿಳಿದು ನಮ್ಮ ಬಗ್ಗೆ ನಗುತ್ತಾರೆ ಎಂಬ ಕಾರಣಕ್ಕೆ ಮಂಜೇಗೌಡ ದಂಪತಿ ಪೊಲೀಸ್ ಠಾಣೆಗೆ ಯಾವುದೇ ನೀಡಿರಲಿಲ್ಲ. ಆದರೆ ಈ ವಿಗ್ರಹ ತೆಗೆಯುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದ್ದು ಮೋಸ ಮಾಡಿದ ಕಳ್ಳ ಸ್ವಾಮೀಜಿ ಮಂಜುನಾಥ್ ದೊಡ್ಡ ಹಳ್ಳಿ ಗ್ರಾಮದವನಾಗಿದ್ದು ವಿಡಿಯೋ ವೈರಲ್ ಆದ ಕೂಡಲೇ ತಲೆ ಮರೆಸಿಕೊಂಡಿದ್ದಾನೆ. ಈ ಕುರಿತು ಅರಕಲಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುನಾಥ್ ಇದೇ ರೀತಿ ಹಲವರಿಗೆ ಮೋಸ ಮಾಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications