ಬಿಜೆಪಿ ಸೇರುವ ಬಗ್ಗೆ ಮಾಜಿ ಸಚಿವ ಎ.ಮಂಜು ಹೇಳಿದ್ದೇನು?
Recommended Video

ಹಾಸನ, ಮಾರ್ಚ್ 11 : 'ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಕಣಕ್ಕಿಳಿದರೆ, ನಮ್ಮ ಹಿತೈಷಿಗಳು, ಕಾರ್ಯಕರ್ತರ ಜೊತೆ ಮಾತನಾಡಿದ ಬಳಿಕ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳುತ್ತೇನೆ' ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎ.ಮಂಜು ಹೇಳಿದರು.
ಎ.ಮಂಜು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈಗಾಗಲೇ ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಿದ್ದಾರೆ. ಹಾಸನ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿಯಂತೆ ಹಾಸನ ಕ್ಷೇತ್ರವನ್ನು ಕಾಂಗ್ರೆಸ್ ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಪ್ರಜ್ವಲ್ ರೇವಣ್ಣ ಅವರು ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಇದಕ್ಕೆ ಕಾಂಗ್ರೆಸ್ ನಾಯಕ ಎ.ಮಂಜು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಹಾಸನ ಕ್ಷೇತ್ರದ ಹಾಲಿ ಸಂಸದರು ಎಚ್.ಡಿ.ದೇವೇಗೌಡ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಆದರೆ, ಎ.ಮಂಜು ಅವರು ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ...

ದೇವೇಗೌಡರೇ ಕಣಕ್ಕಿಳಿಯಬೇಕು
'ನನಗೆ ಎಚ್.ಡಿ.ದೇವೇಗೌಡರೇ ಸ್ಪರ್ಧೆ ಮಾಡಬೇಕು ಎಂಬ ಆಸೆ ಇದೆ. ಹಾಗಾಗಿ ಅವರೇ ಅಭ್ಯರ್ಥಿಯಾಗಬೇಕು ಎಂದು ಹೇಳಿದ್ದೇನೆ. ರಾಜಕಾರಣ ಎಂದಿಗೂ ನಿಂತ ನೀರಲ್ಲ. ಬೇರೆಯವರು ಅಭ್ಯರ್ಥಿಯಾದರೆ ಮುಂದೆ ಆಲೋಚನೆ ಮಾಡೋಣ' ಎಂದು ಎ.ಮಂಜು ಹೇಳಿದರು.

ಬಿಜೆಪಿ ನಾಯಕರ ಜೊತೆ ಮಾತನಾಡಿದ್ದೇನೆ
'ಬಿಜೆಪಿ ನಾಯಕರ ಜೊತೆ ಈಗಾಗಲೇ ಮಾತನಾಡಿದ್ದೇನೆ. ದೋಸ್ತಿ ಅಭ್ಯರ್ಥಿಯಾಗಿ ದೇವೇಗೌಡರು ನಿಲ್ಲಲಿ ಎಂದು ಮನವಿ ಮಾಡಿದ್ದೇನೆ. ಒಂದು ವೇಳೆ ಪ್ರಜ್ವಲ್ ರೇವಣ್ಣ ಕಣಕ್ಕಿಳಿದರೆ ನನ್ನ ಕಾರ್ಯಕರ್ತರ ಜೊತೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ' ಎಂದು ಎ.ಮಂಜು ತಿಳಿಸಿದರು.

ಕಾರ್ಯಕರ್ತರು ಹೇಳಿದರೆ ಸಾಕು
'ನಮ್ಮ ಹಿತೈಷಿಗಳು ಕಾರ್ಯಕರ್ತರ ಜೊತೆ ಮಾತನಾಡಿ ನಾನು ಮುಂದಿನ ನಡೆ ಬಗ್ಗೆ ತೀರ್ಮಾನವನ್ನು ಕೈಗೊಳ್ಳುತ್ತೇನೆ. ನಮ್ಮ ಕಾರ್ಯಕರ್ತರು ಹೇಳಿದರೆ ಅದು ಪಕ್ಕಾ ಇರುತ್ತದೆ. ಅವರ ಸಲಹೆಯಂತೆಯೇ ಮುಂದುವರೆಯುವೆ' ಎಂದು ಎ.ಮಂಜು ಹೇಳಿದರು.

ಹಾಸನದಲ್ಲಿ ಬಿಜೆಪಿಗೆ ಶಕ್ತಿ
ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಬಿಜೆಪಿ ಸಂಘಟನೆಯ ಕೊರತೆಯನ್ನು ಎದುರಿಸುತ್ತಿದೆ. ಎಂ.ಮಂಜು ಅವರನ್ನು ಕರೆದುಕೊಂಡು ಬಂದರೆ ಬಿಜೆಪಿಗೆ ಶಕ್ತಿ ಸಿಗಲಿದೆ. ಮಾಜಿ ಸಚಿವ ಸಿ.ಟಿ.ರವಿ, ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ಮಂಜು ಅವರನ್ನು ಪಕ್ಷಕ್ಕೆ ಕರೆತರಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

ಬಿಜೆಪಿಗೆ ವಾಪಸ್
ಶನಿವಾರ ಎ.ಮಂಜು ಅವರು ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಂಜು ಅವರು ಹಿಂದೆ ಬಿಜೆಪಿಯಲ್ಲಿದ್ದರು. ವಿಜಯ್ ಮಲ್ಯ ಅವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ ಮಾಡಿದಾಗ ಅಡ್ಡಮತದಾನ ಮಾಡಿದರು ಎಂಬ ಕಾರಣಕ್ಕೆ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications