ಹಾಸನದಲ್ಲಿ ಭೀಕರ ಅಪಘಾತ; ಅಬಕಾರಿ ಅಧಿಕಾರಿ, 3 ಐಟಿ ಉದ್ಯೋಗಿಗಳ ಸಾವು
ಹಾಸನ, ಫೆಬ್ರವರಿ 13: ಚಲಿಸುತ್ತಿದ್ದ ಕಂಟೈನರ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ, ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ಹೋಗುತ್ತಿದ್ದ ಒಬ್ಬ ಅಬಕಾರಿ ಇಲಾಖೆಯ ಅಧಿಕಾರಿ ಸೇರಿದಂತೆ ಮೂವರು ಐಟಿ ಉದ್ಯೋಗಿಗಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಹಾಸನದಲ್ಲಿ ಪುಂಡ ಗಂಡಾನೆಗೆ ರೇಡಿಯೋ ಕಾಲರ್
ಈ ಭೀಕರ ರಸ್ತೆ ಅಪಘಾತದಲ್ಲಿ ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ದುರ್ದೈವಿಗಳಾಗಿದ್ದು, ಈ ನಾಲ್ವರೂ ಸ್ನೇಹಿತರಾಗಿದ್ದರು. ಅವರು ಒಂದೇ ಕಾರಿನಲ್ಲಿ ಪ್ರಯಾಣ ಬೆಳಸುವಾಗ ಕಾರು ಮತ್ತು ಕಂಟೈನರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
Recommended Video
ಮೌಂಟ್
ಎವರೆಸ್ಟ್
ಹತ್ತದೇ
ಸುಳ್ಳು
ದಾಖಲೆ
ಸಲ್ಲಿಕೆ-
ಇಬ್ಬರು
ಭಾರತೀಯ
ಪರ್ವತಾರೋಹಿಗಳಿಗೆ
ನೇಪಾಳ
ನಿಷೇಧ
|
Oneindia
Kannada
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಹಾಸನ ಕಡೆಗೆ ನಾಲ್ವರು ಸ್ನೇಹಿತರು ಪ್ರಯಾಣಿಸುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಸಮೀಪ ಕಂಟೈನರ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಇದರ ಪರಿಣಾಮ ನಾಲ್ವರು ಸ್ನೇಹಿತರು ಅಪಘಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
accident road accident death employees channarayapatna hassan ಅಪಘಾತ ರಸ್ತೆ ಅಪಘಾತ ಸಾವು ಚನ್ನರಾಯಪಟ್ಟಣ ಹಾಸನ
English summary
The Accident occurred in Channarayapatna, Hassan district, where an Excise department official and three IT employees were killed after a car collided with a Container.