ಶ್ರವಣಬೆಳಗೊಳ : ಜನಿವಾರ ಕೆರೆಯಲ್ಲಿ ಸಾಹಸ ಕ್ರೀಡೆಗೆ ಚಾಲನೆ
ಹಾಸನ, ಫೆಬ್ರವರಿ 13 : ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕದ ಅಂಗವಾಗಿ ಜಲ ಸಾಹಸ ಕ್ರೀಡೆಯನ್ನು ಆರಂಭಿಸಲಾಗಿದೆ. ಶ್ರವಣಬೆಳಗೊಳಕ್ಕೆ ಆಗಮಿಸುವ ಪ್ರವಾಸಿಗರು ಜನಿವಾರ ಕೆರೆಯಲ್ಲಿ ಜಲ ಸಾಹಸ ಕ್ರೀಡೆಯ ಅನುಭವ ಪಡೆಯಬಹುದಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅವರು ಜಲ ಸಾಹಸ ಕ್ರೀಡೆಗೆ ಸೋಮವಾರ ಚಾಲನೆ ನೀಡಿದರು. ಜನಿವಾರ ಕೆರೆಯಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಕ್ರೀಡೆಯನ್ನು ಆಯೋಜನೆ ಮಾಡಲಾಗಿದೆ.
ನಂತರ ಮತಾಡನಾಡಿದ ಸಚಿವರು, 'ರಾಜ್ಯ ಸರ್ಕಾರ ಸುಮಾರು 50 ಲಕ್ಷ ವೆಚ್ಚದಲ್ಲಿ ಜನಿವಾರ ಕೆರೆಯಲ್ಲಿ ಇಂದಿನಿಂದ ಬೋಟಿಂಗ್ ವ್ಯವಸ್ಥೆಯನ್ನ ಮಾಡಿದೆ. ಕೆರೆಗೆ ಹೇಮಾವತಿ ನದಿ ಸಂಪರ್ಕ ಇರುವುದರಿಂದ ವರ್ಷ ಪೂರ್ತಿ ಕೆರೆಯಲ್ಲಿ ನೀರು ಇರುತ್ತದೆ' ಎಂದರು.

600 ಎಕರೆ ಪ್ರದೇಶದ ಕೆರೆ ಅಚ್ಚುಕಟ್ಟನ್ನು ಜನಿವಾರ ಕೆರೆ ಒಳಗೊಂಡಿದೆ. ಇದರಲ್ಲಿ ಸದ್ಯ 355 ಎಕರೆ ಪ್ರದೇಶವನ್ನು ಕ್ರೀಡಾ ಚಟುವಟಿಕೆಗೆ ಬಳಸಿಕೊಳ್ಳಲಾಗುತ್ತಿದೆ. ದೋಣಿ ವಿಹಾರ, ಬಂಪ್ರೈಡ್, ಬನಾನಾ ಬೋಟ್ರೈಡ್, ಪವರ್ಬೋಟ್ರೈಡ್, ಪೆಡ್ಲಿಂಗ್ ಬೋಟ್ ಮುಂತಾದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
In Pics: ಬಾಹುಬಲಿ ಮಹಾಮಜ್ಜನಕ್ಕೆ ರಾಷ್ಟ್ರಪತಿ ಕೋವಿಂದ್ ಚಾಲನೆ
ಕೆರೆಯಲ್ಲಿ ಕ್ರೀಡೆ ನಡೆಯುವ ಸ್ಥಳದ ಸುತ್ತಲೂ ಬೇಲಿ, ತಡೆಗೋಡೆ ನಿರ್ಮಾಣ, ರಸ್ತೆ ವಿಸ್ತರಣೆ, ಜಲಸಾಹಸ ಕ್ರೀಡೆ ಹಾಗೂ ಪ್ರವಾಸಿಗರ ಮೂಲ ಸೌಲಭ್ಯ ಕಲ್ಪಿಸಲು 5 ಕೋಟಿ ರೂ.ವೆಚ್ಚದ ಯೋಜನೆ ಸಿದ್ಧಪಡಿಸಲಾಗಿದೆ.
ಶಾಶ್ವತವಾಗಿ ಜಲಕ್ರೀಡೆ ಆಯೋಜಿಸುವ ಸಲುವಾಗಿ ಸಂಬಂಧಪಟ್ಟ ಕೆಲ ಸಂಸ್ಥೆಗಳ ಜತೆ ಮಾತುಕತೆ ನಡೆಸಲಾಗಿದ್ದು, ರಿಯಾಯಿತಿ ದರದಲ್ಲಿ ಶಾಶ್ವತವಾಗಿ ಕ್ರೀಡಾ ಚಟುವಟಿಕೆ ನಡೆಯಲಿದೆ.

ಮಾಹಿತಿ ಕೈಪಿಡಿ ಬಿಡುಗಡೆ : ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸಿಗರಿಗಾಗಿ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.
ಬೈಕ್ ಟೂರಿಸಂ : ಶ್ರವಣಬೆಳಗೊಳದಲ್ಲಿ ಪ್ರವಾಸಿಗರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಲ್ಪಿಸಿರುವ ಬಾಡಿಗೆ ಆಧಾರಿತ ಬೈಕ್ಗಳನ್ನು ಸ್ವತಹ ಜಿಲ್ಲಾ ಉಸ್ತುವಾರಿ ಸಚಿವರು ಚಾಲಯಿಸುವ ಮೂಲಕ ಹಸಿರು ನಿಶಾನೆ ತೋರಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications