ಬೇಲೂರು: ಸೂಕ್ತ ಸಮಯಕ್ಕೆ ಸಿಗದ ಆಂಬ್ಯುಲೆನ್ಸ್, ತಾಯಿ ಹೊಟ್ಟೆಯಲ್ಲೇ ಮಗು ಸಾವು
ಹಾಸನ, ಆಗಸ್ಟ್ 09: ಹಾಸನ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದೇ ಒಂಭತ್ತು ತಿಂಗಳ ಹಸುಗೂಸು ತಾಯಿ ಹೊಟ್ಟೆಯಲ್ಲಿಯೇ ಸಾವನ್ನಪ್ಪಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬೇಲೂರು ಪಟ್ಟಣದಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ಗ್ರಾಮದ ನಿವಾಸಿ ಆಶಾ ಎನ್ನುವವರಿಗೆ ಕಳೆದ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಶಾ ಅವರ ಪತಿ ಹಾಸನದಲ್ಲಿದ್ದು, ಸಹೋದರ ಹೊರಗೆ ಹೋಗಿದ್ದರು. ಹೀಗಾಗಿ ಹೆರಿಗೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಆಶಾ ಪೋಷಕರು ನಗುಮಗು ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದರು.

ಬೇಲೂರು ಪಟ್ಟಣದಲ್ಲಿದ್ದ ನಗುಮಗು ಆಂಬ್ಯುಲೆನ್ಸ್ಗೆ ಎಷ್ಟೇ ಕರೆ ಮಾಡಿದರೂ ಆಂಬ್ಯುಲೆನ್ಸ್ ಸಿಬ್ಬಂದಿ ಕರೆ ಸ್ವೀಕರಿಸಿಲ್ಲ. ಅಷ್ಟರಲ್ಲಾಗಲೇ ಆಶಾ ಅವರಿಗೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೊನೆಗೆ ಬೇರೆ ದಾರಿ ಇಲ್ಲದೇ ಹಾಸನದಲ್ಲಿರುವ ಆಂಬ್ಯುಲೆನ್ಸ್ಗೆ ಕರೆ ಮಾಡಲಾಗಿದೆ.
ಹಾಸನದಿಂದ ಆಂಬ್ಯುಲೆನ್ಸ್ ಬರುವುದರೊಳಗೆ ಖಾಸಗಿ ವಾಹನದಲ್ಲಿ ಕರೆ ತಂದು ಆಶಾ ಅವರನ್ನು ಬೇಲೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಮಗು ತಾಯಿ ಹೊಟ್ಟೆಯಲ್ಲೇ ಸಾವನ್ನಪ್ಪಿದೆ. ಆಶಾ ಅವರಿಗೆ ಆಗಸ್ಟ್15 ರಂದು ಹೆರಿಗೆ ದಿನಾಂಕ ನೀಡಲಾಗಿತ್ತು. ಹೀಗಾಗಿ ಮನೆಯಲ್ಲೇ ಇದ್ದರು. ಆದರೆ ತಡರಾತ್ರಿ ಏಕಾಏಕಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

ಆಂಬ್ಯುಲೆನ್ಸ್ ಚಾಲಕರು ಹಾಗೂ ಬೇಲೂರು ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ಬೇಜವಾಬ್ದಾರಿಯಿಂದ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ಆರೋಗ್ಯ ಇಲಾಖೆ ವಿರುದ್ಧ ಮಹಿಳೆ ಕುಟುಂಬದ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications