ಡಿಪ್ಲೋಮಾ ಇನ್ ಕೋ-ಅಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಹಾಸನ ನವೆಂಬರ್ 08: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಡೆಸುತ್ತಿರುವ ಸಹಕಾರ ತರಬೇತಿ ಕೇಂದ್ರದ ವತಿಯಿಂದ ನೂತನವಾಗಿ "ಕರ್ನಾಟಕ ಇನ್ಸ್ಸಿಟ್ಯೂಟ್ ಆಫ್ ಕೋ-ಅಪರೇಟಿವ್ ಮ್ಯಾಜ್ಮೆಂಟ್" ಸಂಸ್ಥೆಯ ಮೂಲಕ "6 ತಿಂಗಳು/180 ದಿನಗಳ" ಅವಧಿಯ "ಡಿಪ್ಲೋಮಾ ಇನ್ ಕೋ-ಅಪರೇಟಿವ್ ಮ್ಯಾನಜ್ಮೆಂಟ್" (ಈ ಮೊದಲಿನ ಹೆಸರು ಜಿ.ಡಿ.ಸಿ) ತರಬೇತಿಯನ್ನು ನೀಡಲಿದೆ. ಈ ತರಬೇತಿಯನ್ನು ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಸಹಕಾರ ಸಂಘ ಸಂಸ್ಥೆಗಳಲ್ಲಿ, ಸಹಕಾರ ಇಲಾಖೆಯಲ್ಲಿ ಹಾಗೂ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ನಿಯಮಿತವಾಗಿ ಖಾಸಗಿ ಅಭ್ಯರ್ಥಿಗಳಿಗೂ ಸದರಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಹಕಾರ ಸಂಘ ಸಂಸ್ಥೆಗಳಲ್ಲಿ ಕನಿಷ್ಟ 1 ವರ್ಷ ಕಾಲಾವಾದರೂ ಸೇವೆ ಸಲ್ಲಿಸಿರಬೇಕು. ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಇಂತಹ ಅಭ್ಯರ್ಥಿಗಳು ಮಾತ್ರ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದು.

ತರಬೇತಿಯನ್ನು ಪಡೆಯಲು ಇಚ್ಚೆಯುಳ್ಳ ಅಭ್ಯರ್ಥಿಗಳು ನಿಗದಿತ ಅರ್ಜಿಗಳನ್ನು ಮಡಿಕೇರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಂದ ಪಡೆದು ಭರ್ತಿ ಮಾಡಿ ನ. 30ರೊಳಗಾಗಿ ಪ್ರಾಶುಂಪಾಲರಿಗೆ ತಲಪುವಂತೆ ಕಳುಹಿಸಬೇಕು.
ಸಹಕಾರ ತರಬೇತಿ ಕೇಂದ್ರದಲ್ಲಿ 6 ತಿಂಗಳ ವಿಶೇಷ ಡಿಪ್ಲೋಮಾ ಇನ್ ಕೋ-ಅಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ನಿರುದ್ಯೋಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರಾರಂಭಿಸಲಾಗುವುದು. ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. ವಯೋಮಿತಿ ಕನಿಷ್ಟ 18 ವರ್ಷದವರಾಗಿದ್ದು, ಗರಿಷ್ಟ 30 ವರ್ಷಗಳು ಮೀರಿರಬಾರದು. ಸದರಿ ತರಬೇತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/11/2018.
ಸಾಮಾನ್ಯ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 400ಗಳ ಶಿಷ್ಯ ವೇತನವನ್ನು ನೀಡಲಾಗುವುದು (ಖಾಸಗೀ ಅಭ್ಯಥಿಗಳನ್ನು ಹೊರತುಪಡಿಸಿ) ಎಸ್.ಸಿ/ಎಸ್.ಟಿ. ಅಭ್ಯರ್ಥಿಗಳಿಗೆ ರೂ.500ಗಳ ಶಿಷ್ಯವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ ಇದೆ (ಊಟ, ತಿಂಡಿಗೆ ತಗಲುವ ವೆಚ್ಚವನ್ನು ಪ್ರವೇಶ ಪಡೆದ ಶಿಕ್ಷಣಾರ್ಥಿಗಳೇ ಭರಿಸಬೇಕು.)
ಹೆಚ್ಚಿನ ವಿವರಗಳಿಗೆ ಮುಖ್ಯಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಸಹಕಾರ ಯೂನಿಯನ್ ನಿ., 'ಸಹಕಾರ ಭವನ' ಹಳೇ ಬಸ್ಸ್ಟ್ಯಾಂಡ್ ಸಮೀಪ, ಹಾಸನ - 573201 ಇವರನ್ನು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಮತ್ತು ಅರ್ಜಿ ಫಾರಂಗಳು ಹಾಸನ ಜಿಲ್ಲಾ ಸಹಕಾರ ಯೂನಿಯನ್ ನಿ., ಹಾಸನ ಇಲ್ಲಿ ದೊರೆಯುತ್ತವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications