ಅರಸೀಕೆರೆಯಲ್ಲಿ ಪಕ್ಷಾಂತರಿಗಳ ಪೈಪೋಟಿ, ಯಾರಿಗೆ ಗೆಲುವು?
ಹಾಸನ, ಮೇ 03; ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕುತೂಹಲ ಮೂಡಿಸಿರುವ ಕ್ಷೇತ್ರದಲ್ಲಿ ಅರಸೀಕೆರೆಯೂ ಒಂದು. ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಿರೀಕ್ಷೆ ಮಾಡಲಾಗಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.
ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಚುನಾವಣೆ ಪಕ್ಷಾಂತರಿಗಳ ಪೈಪೋಟಿ ಎಂದರೆ ತಪ್ಪಿಲ್ಲ. ಚುನಾವಣಾ ಕಣದಲ್ಲಿ ಬಿಜೆಪಿಯಿಂದ ಜಿ. ವಿ. ಬಸವರಾಜು, ಕಾಂಗ್ರೆಸ್ನಿಂದ ಕೆ. ಎಂ. ಶಿವಲಿಂಗೇಗೌಡ ಮತ್ತು ಜೆಡಿಎಸ್ನಿಂದ ಎನ್. ಆರ್. ಸಂತೋಷ್ ಅಭ್ಯರ್ಥಿಗಳು. ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಸೇರಿದರೆ, ಬಿಜೆಪಿ ಟಿಕೆಟ್ ಸಿಗದ ಎನ್. ಆರ್. ಸಂತೋಷ್ ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

ಕೆ. ಎಂ. ಶಿವಲಿಂಗೇಗೌಡ 2008, 2023 ಮತ್ತು 2018ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಆದರೆ ಪಕ್ಷದ ವರಿಷ್ಠರ ಮೇಲೆ ಅಸಮಾಧಾನಗೊಂಡು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಸಿದ್ದರಾಮಯ್ಯ ಆಪ್ತರಾದ ಅವರು ವಿಧಾನಸಭೆ ಕಲಾಪಪದಲ್ಲಿ ತಮ್ಮ ಭಾಷಣದ ಮೂಲಕ ಗಮನ ಸೆಳೆದವರು. ಯಾವುದೇ ಸರ್ಕಾರವಿದ್ದರೂ ಅನುದಾನ ತರುವಷ್ಟು ಎಲ್ಲಾ ಪಕ್ಷಗಳಲ್ಲೂ ಸ್ನೇಹ ಹೊಂದಿದ್ದಾರೆ.
ಜೆಡಿಎಸ್ಗೆ ಸವಾಲು ಹಾಕಿ ನಿಂತಿದ್ದಾರೆ; ಮೂರು ಬಾರಿ ಜೆಡಿಎಸ್ನಿಂದ ಗೆದ್ದಿರುವ ಶಿವಲಿಂಗೇಗೌಡ ಮೊದಲ ಬಾರಿಗೆ ಜೆಡಿಎಸ್ ನಾಯಕರಿಗೆ ಸವಾಲು ಹಾಕಿ ಕಾಂಗ್ರೆಸ್ನಿಂದ ಅಭ್ಯರ್ಥಿಯಾಗಿದ್ದಾರೆ. ಅವರನ್ನೂ ಸೋಲಿಸಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್ ಪಕ್ಷ ಎನ್. ಆರ್. ಸಂತೋಷ್ ಕಣಕ್ಕಿಳಿಸಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಎಚ್. ಡಿ. ರೇವಣ್ಣ ಕೆ. ಎಂ. ಶಿವಲಿಂಗೇಗೌಡ ಸೋಲಿಸುವುದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಬಂಧಿಯೂ ಆಗಿರುವ ಎನ್. ಆರ್. ಸಂತೋಷ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನು ಕೈಗೊಂಡಿದ್ದರು. ಆದರೆ ಬಿಜೆಪಿ ಜಿ. ವಿ. ಬಸವರಾಜು ಅಭ್ಯರ್ಥಿ ಎಂದು ಘೋಷಣೆ ಮಾಡಿತು. ಅಸಮಾಧಾನಗೊಂಡ ಅವರು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಭೇಟಿಯಾದರು. ಬಳಿಕ ಪಕ್ಷ ಸೇರಿದರು. ಎಚ್. ಡಿ. ಕುಮಾರಸ್ವಾಮಿ ಅರಸೀಕೆರೆಗೆ ಎನ್. ಆರ್. ಸಂತೋಷ್ ಅಭ್ಯರ್ಥಿ ಎಂದು ಘೋಷಣೆ ಮಾಡಿದರು.
ಅರಸೀಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ 2018ರಲ್ಲಿ ಪಡೆದ ಮತಗಳು 50,297, ಬಿಜೆಪಿ 25,258. ಜೆಡಿಎಸ್ನ ಶಿವಲಿಂಗೇಗೌಡ 93,986 ಮತಗಳನ್ನು ಪಡೆದು ಜಯಗಳಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎದುರಾಳಿಗಳಾಗಿದ್ದವು.
2013ರ ಚುನಾವಣೆಯಲ್ಲಿ ಕೆ. ಎಂ. ಶಿವಲಿಂಗೇಗೌಡ 76,579 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿ ಪಡೆದ ಮತಗಳು ಕೇವಲ 2,464. ಕಾಂಗ್ರೆಸ್ 46,948. ಕೆಜೆಪಿ ಅಭ್ಯರ್ಥಿ 26,312 ಮತ ಪಡೆದಿದ್ದರು. ಬಿಜೆಪಿ, ಕೆಜೆಪಿ ಗೊಂದಲದ ಕಾರಣ ಬಿಜೆಪಿಗೆ ತೀವ್ರವಾದ ಹಿನ್ನಡೆ ಉಂಟಾಗಿತ್ತು.
2008ರಲ್ಲಿ ಕೆ. ಎಂ. ಶಿವಲಿಂಗೇಗೌಡ 74,025 ಮತಗಳನ್ನು ಪಡೆದು ಗೆದ್ದರು. ಬಿಜೆಪಿ 19,824 ಮತಗಳನ್ನು ಪಡೆದರು. ಕಾಂಗ್ರೆಸ್ 39,799 ಮತಗಳನ್ನು ಪಡೆದಿತ್ತು. ಕ್ಷೇತ್ರದಲ್ಲಿ ಶಿವಲಿಂಗೇಗೌಡರು ಪಕ್ಷವನ್ನೂ ಮೀರಿ ವೈಯಕ್ತಿಕ ವರ್ಚಸ್ಸು ಹೊಂದಿದ್ದಾರೆ. ಆದ್ದರಿಂದ ಅವರನ್ನು ಕಟ್ಟಿ ಹಾಕುವುದು ಸುಲಭದ ಮಾತಲ್ಲ ಎಂಬ ಮಾತುಗಳಿವೆ.
ಬಿಜೆಪಿ ಜಿ. ವಿ. ಬಸವರಾಜು ಪಕ್ಷಕ್ಕೆ ನಿಷ್ಠರು. ಪಕ್ಷದ ಬಲ ಅವರಗೆ ಇದೆ. ಆದರೆ ಕ್ಷೇತ್ರದಲ್ಲಿ ಬಿಜೆಪಿಯ ಪ್ರಭಾವವಿಲ್ಲ. ಆದ್ದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಡೆಯುವ ನಿರೀಕ್ಷೆ ಇದೆ. ಪ್ರಚಾರ ಮಾಡುವಾಗ ಜೆಡಿಎಸ್ ನಾಯಕರ ವಿರುದ್ಧ ಟೀಕೆ ಮಾಡುತ್ತಿದ್ದ ಸಂತೋಷ್ ಅದೇ ಪಕ್ಷದಿಂದ ಅಭ್ಯರ್ಥಿಯಾಗಿದ್ದಾರೆ. ಆದ್ದರಿಂದ ಕೆಲವು ನಾಯಕರು ಚುನಾವಣೆಯಲ್ಲಿ ತಟಸ್ಥವಾಗಿ ಉಳಿದರೆ ಸಂತೋಷ್ ಗೆಲುವು ಕಷ್ಟವಾಗಬಹುದು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications