ಅಮಾವಾಸ್ಯೆಯಂದು ಅರಸೀಕರೆ ಪೊಲೀಸ್ ಠಾಣೆಯಲ್ಲಿ ಕೋಳಿ ಬಲಿ!
ಹಾಸನ,ಜು1: ಗ್ರಾಮೀಣ ಭಾಗದಲ್ಲಿ ಮಕ್ಕಳು, ಯುವಕರು ಅಥವಾ ದೊಡ್ಡವರು ನಡೆಯುವಾಗ ಅಥವಾ ಒಂದೇ ಸ್ಥಳದಲ್ಲಿ 2-3 ಬಾರಿ ಎಡವಿ ಬಿದ್ದಾಗ ಅಥವಾ ಗ್ರಾಮಕ್ಕೆ ಹೊಸಬರು ಯಾರಾದರೂ ಬಂದರೇ ಕೋಳಿ ಅಥವಾ ಕುರಿ ಬಲಿಕೊಟ್ಟು ಶಾಂತಿ ಮಾಡಿಸುವ ಪದ್ಧತಿಯಿದೆ.
ಹಾಸನ ಜಿಲ್ಲೆಯ ಅರಸೀಕೆರೆಯ ಗ್ರಾಮೀಣ ಠಾಣೆ ಪೊಲೀಸರು ಪೊಲೀಸ್ ಠಾಣೆಯಲ್ಲಿ ಕೋಳಿ ಬಲಿ ನೀಡಿರುವುದು ಈಗ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಬಲಿ ಯಾಕೆ ಕೊಟ್ಟರು?, ಯಾರಾದರೂ ಎಡವಿ ಬಿದ್ದಿದ್ದಾರ?, ಅಥವಾ ಜಿಲ್ಲೆಗೆ ಯಾರಾದರೂ ಹೊಸಬರು ಬಂದರಾ? ಎಂದು ಜನ ಕೇಳುತ್ತಿದ್ದಾರೆ.
ಕಪ್ಪು ಕೋಳಿಯನ್ನು ಬಲಿಕೊಟ್ಟ ಪೊಲೀಸರ ಮೌಢ್ಯತೆ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಣ್ಣೆತ್ತಿನ ಅಮಾವಾಸ್ಯೆಯ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಈ ರೀತಿಯ ಕೋಳಿ ಬಲಿ ನಡೆದಿದೆ.

ಮೂಢನಂಬಿಕೆ ಜೀವಂತ; ಗ್ರಾಮೀಣ ಭಾಗದಲ್ಲಿ ಇಂದಿಗೂ ಮೂಢನಂಬಿಕೆ ಜೀವಂತವಾಗಿದೆ. ಇದನ್ನು ಕೆಲವರು ಸಂಪ್ರದಾಯ ಎಂದು ನಡೆಸಿಕೊಂಡು ಬರುತ್ತಿದ್ದರೆ, ಕೆಲವರು ಮಾತ್ರ ಇಂತಹ ಪದ್ಧತಿ ಆಚರಿಸದಿದ್ದರೆ ಗ್ರಾಮಕ್ಕೆ ಕೆಡುಕಾಗುತ್ತದೆ ಎಂದು ನಂಬಿದ್ದಾರೆ.
ಊರಿಗೆ ಮಾರಿ ಬರುತ್ತದೆ ಎಂಬ ನಂಬಿಕೆ ಇಟ್ಟುಕೊಂಡಿದ್ದಾರೆ. ಆದರೆ ಪೊಲೀಸ್ ಠಾಣೆಗೆ ಅದೇನು ಬಂತು? ಎಂದು ಜನರಿಗೆ ಗೊತ್ತಿಲ್ಲ. ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೌಢ್ಯತೆಗೆ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದ ಕಪ್ಪು ಕೋಳಿಯ ಬಲಿ ಘಟನೆಯೇ ಸಾಕ್ಷಿ. ಈ ಕುರಿತ ವಿಡಿಯೋವೊಂದು ಸಹ ಹರಿದಾಡುತ್ತಿದೆ.

ಅರಸೀಕೆರೆ ಪಟ್ಟಣದ ಡಿವೈಎಸ್ಪಿ ಕಚೇರಿಯ ಕಟ್ಟಡದಲ್ಲಿರುವ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಭಾನಾಮತಿ ಮಾಡಿಸೋ ವ್ಯಕ್ತಿಯನ್ನು ಕರೆಸಿ ಕರಿ ಕೋಳಿಯನ್ನು ಬಾಗಿಲಿಗೆ ಮೂರು ಬಾರಿ ನೀವಳಿಸಿ, ನಿಂಬೆಹಣ್ಣು, ಒಣ ಮೆಣಸಿನಕಾಯಿ, ಇದ್ದಿಲುಗಳ ಮೂಲಕ ದೃಷ್ಟಿ ತೆಗೆದು ಬಾಗಿಲಿನಲ್ಲಿಯೇ ಕೋಳಿ ಬಲಿಕೊಟ್ಟಿದ್ದಾರೆ ಎಂಬ ಸುದ್ದಿ ಇದೆ. ಇದು ನಿಜವೋ?. ಇಲ್ಲವೋ? ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಬೇಕಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications