ಅರಸೀಕೆರೆ-ತುಮಕೂರು-ಮೈಸೂರು ಪುಷ್-ಪುಲ್ ರೈಲು ಸಂಚಾರದಲ್ಲಿ ಬದಲಾವಣೆ
ಹಾಸನ, ಅಕ್ಟೋಬರ್ 24 : ಅರಸೀಕೆರೆ-ತುಮಕೂರು-ಮೈಸೂರು ನಡುವೆ ಸಂಚಾರ ನಡೆಸುವ ಪುಷ್-ಪುಲ್ ಪ್ಯಾಸೆಂಜರ್ ರೈಲು ಸಂಚಾರದಲ್ಲಿ ಬದಲಾವಣೆಯಾಗಿದೆ. ನವೆಂಬರ್ 3ರ ತನಕ ಈ ವೇಳಾಪಟ್ಟಿ ಜಾರಿಯಲ್ಲಿರುತ್ತದೆ.
ಅರಸೀಕೆರೆ-ತುಮಕೂರು ನಡುವೆ ಜೋಡಿ ರೈಲ್ವೆ ಹಳಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿ ಪುಷ್-ಪುಲ್ ಪ್ಯಾಸೆಂಜರ್ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ನೂತನ ವೇಳಾಪಟ್ಟಿಯಂತೆ ಸೋಮವಾರ, ಮಂಗಳವಾರ, ಬುಧವಾರ ಮತ್ತು ಗುರುವಾರದಂದು ಪುಷ್-ಪುಲ್ ಪ್ಯಾಸೆಂಜರ್ ರೈಲು ತಿಪಟೂರು ರೈಲ್ವೆ ನಿಲ್ದಾಣದಿಂದ ಬೆಳಗ್ಗೆ 5 ಗಂಟೆಗೆ ಹೊರಡಲಿದೆ.

ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಅರಸೀಕೆರೆ ರೈಲು ನಿಲ್ದಾಣದಿಂದ ಬೆಳಗ್ಗೆ 5 ಗಂಟೆಗೆ ಸಂಚಾರ ನಡೆಸುತ್ತದೆ. ನವೆಂಬರ್ 3ರ ಬಳಿಕ ಎಂದಿನಂತೆ ಪ್ರತಿದಿನ ಬೆಳಗ್ಗೆ 5 ಗಂಟೆಗೆ ಅರಸೀಕೆರೆಯಿಂದ ರೈಲು ಹೊರಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
347 ಕೋಟಿ ರೂ. ವೆಚ್ಚದಲ್ಲಿ ಸುಮಾರು 96 ಕಿ.ಮೀ. ಅರಸೀಕೆರೆ-ತುಮಕೂರು ನಡುವೆ ಜೋಡಿ ರೈಲ್ವೆ ಹಳಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗ ಈ ಕಾಮಗಾರಿಯನ್ನು ನಡೆಸುತ್ತಿದೆ.
ಅರಸೀಕೆರೆ-ತುಮಕೂರು ನಡುವೆ ಹಲವು ರೈಲುಗಳು ಸಂಚಾರ ನಡೆಸುತ್ತವೆ. ಈ ಮಾರ್ಗದಲ್ಲಿ ಜೋಡಿ ರೈಲ್ವೆ ಹಳಿ ಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. 2016ರಲ್ಲಿ ಕಾಮಗಾರಿ ಆರಂಭವಾಗಿದ್ದು, ಈಗ ಅಂತಿಮ ಹಂತದಲ್ಲಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications