Krishnegowda Withdraw Nomination: ಬಿಜೆಪಿ ನಾಮಪತ್ರ ವಾಪಸ್ ಪಡೆದ ಕೃಷ್ಣೇಗೌಡ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ
ಹಾಸನ, ಏಪ್ರಿಲ್ 21: ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆ ತೆರೆಮರೆಯಲ್ಲಿ ನಡೆದಿದ್ದ ಅಚ್ಚರಿಯ ರಾಜಕೀಯ ಬೆಳವಣಿಗೆ ಹಾಗೆಯೇ ತಣ್ಣಗಾಗಿದೆ. ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದ ಎಂ.ಟಿ.ಕೃಷ್ಣೇಗೌಡ ಅವರು, ಶುಕ್ರವಾರ ಸ್ಪರ್ಧೆಯಿಂದ ಹಿಂದೆ ಸರಿದು ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದುಕೊಂಡಿದ್ದಾರೆ.
ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಎಂ.ಟಿ.ಕೃಷ್ಣೇಗೌಡ ಅವರು ಕಡೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮೊದಲು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಅದಾದ ಕೆಲವೇ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ಬಿ ಮತ್ತು ಸಿ ಫಾರಂ ನೀಡಿದ್ದರಿಂದ ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಕೃಷ್ಣೇಗೌಡ ಉಮೇದುವಾರಿಕೆ ಸಲ್ಲಿಸಿದ್ದರು.

ಇಮೇಲ್ ಮೂಲಕ ಬಿ ಮತ್ತು ಸಿ ಫಾರಂ ಕಳುಹಿಸಲಾಗಿತ್ತು. ಆದರೆ ಅದಕ್ಕೂ ಮುನ್ನವೇ ಬಿಜೆಪಿಯಿಂದ ಎಚ್.ಯೋಗಾ ರಮೇಶ್ ನಾಮಪತ್ರ ಸಲ್ಲಿಸಿದ್ದರು. ಯೋಗಾ ರಮೇಶ್ ಮಾತ್ರವಲ್ಲದೆ ಕೃಷ್ಣೇಗೌಡ ಸಹ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದರಿಂದ ಯಾರು ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ ಎಂಬ ಅನುಮಾನ ಮೂಡಿತ್ತು.
ಆದರೆ ಶುಕ್ರವಾರ ನಡೆದ ನಾಮಪತ್ರ ಪರಿಶೀಲನೆ ವೇಳೆ, ಕೃಷ್ಣೇಗೌಡ ಬಿಜೆಪಿಯಿಂದ ಸಲ್ಲಿಸಿದ್ದ ಉಮೇದುವಾರಿಕೆ ವಾಪಸ್ ಪಡೆದಿದ್ದಾರೆ. ಆದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿದ್ದಾರೆ. ಹೀಗಾಗಿ ಎಚ್.ಯೋಗಾ ರಮೇಶ್ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿದ್ದಾರೆ.
ಅಭ್ಯರ್ಥಿಗಳ ಬಳಿ ಹಣ ಪಡೆದು ಹಣ ಕೊಡದ ಮುಖಂಡನಿಗೆ ಮಹಿಳೆಯಿಂದ ಕ್ಲಾಸ್
ಚಿಕ್ಕಮಗಳೂರು: ಚುನಾವಣಾ ಪ್ರಚಾರಕ್ಕಾಗಿ ಅಭ್ಯರ್ಥಿಗಳ ಬಳಿ ಹಣ ಪಡೆದು ಕಾರ್ಯಕರ್ತರಿಗೆ ಹಣ ಕೊಡದ ಮುಖಂಡನನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಪಿರಮೇನಹಳ್ಳಿ ತಾಂಡ್ಯ ಗ್ರಾಮದಲ್ಲಿ ನಡೆದಿದೆ.
ಅಭ್ಯರ್ಥಿಗಳ ಬಳಿ ಹಣ ಪಡೆದು ಕಾರ್ಯಕರ್ತರಿಗೆ ಹಣ ಕೊಡದ ಮುಖಂಡ ಬೈಕ್ ಮೇಲೆ ಕುಳಿತಿರುವಾಗಲೇ ಮಹಿಳೆ ಕೆನ್ನೆಗೆ ಭಾರಿಸಿದ್ದಾರೆ. ಹಣ ಕೊಡುವುದಾಗಿ ನಂಬಿಸಿ ರೋಡ್ ಶೋಗೆ ಕರೆದುಕೊಂಡು ಹೋಗಿದ್ದ ಪಿರಮೇನಹಳ್ಳಿ ತಾಂಡ್ಯದ ಮುಖಂಡ ಮಂಜುನಾಥ್ ಅಭ್ಯರ್ಥಿಗಳ ಬಳಿ ಹಣ ಪಡೆದು ಹಣ ಕೊಡದ ಹಿನ್ನೆಲೆ ಮುಖಂಡನಿಗೆ ಮಹಿಳೆ ಧರ್ಮದೇಟು ನೀಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಸುರೇಶ್ ಹಾಗೂ ಪಕ್ಷೇತರ ಅಭ್ಯರ್ಥಿ ಹೆಚ್.ಎಂ. ಗೋಪಿಕೃಷ್ಣ ನಾಮಪತ್ರ ಸಲ್ಲಿಕೆಗೂ ಮೊದಲು ನಡೆದ ರೋಡ್ ಶೋನಲ್ಲಿ ಪಿರಮೇನಹಳ್ಳಿ ತಾಂಡ್ಯ ಗ್ರಾಮದ ನೂರಾರು ಜನ ಭಾಗಿಯಾಗಿದ್ದರು. ಆದರೆ ಕಾರ್ಯಕ್ರಮದ ನಂತರ ಹಣ ಕೊಡದ ಮಂಜುನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications