Krishnegowda Withdraw Nomination: ಬಿಜೆಪಿ ನಾಮಪತ್ರ ವಾಪಸ್ ಪಡೆದ ಕೃಷ್ಣೇಗೌಡ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ
ಹಾಸನ, ಏಪ್ರಿಲ್ 21: ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆ ತೆರೆಮರೆಯಲ್ಲಿ ನಡೆದಿದ್ದ ಅಚ್ಚರಿಯ ರಾಜಕೀಯ ಬೆಳವಣಿಗೆ ಹಾಗೆಯೇ ತಣ್ಣಗಾಗಿದೆ. ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದ ಎಂ.ಟಿ.ಕೃಷ್ಣೇಗೌಡ ಅವರು, ಶುಕ್ರವಾರ ಸ್ಪರ್ಧೆಯಿಂದ ಹಿಂದೆ ಸರಿದು ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದುಕೊಂಡಿದ್ದಾರೆ.
ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಎಂ.ಟಿ.ಕೃಷ್ಣೇಗೌಡ ಅವರು ಕಡೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮೊದಲು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಅದಾದ ಕೆಲವೇ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ಬಿ ಮತ್ತು ಸಿ ಫಾರಂ ನೀಡಿದ್ದರಿಂದ ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಕೃಷ್ಣೇಗೌಡ ಉಮೇದುವಾರಿಕೆ ಸಲ್ಲಿಸಿದ್ದರು.

ಇಮೇಲ್ ಮೂಲಕ ಬಿ ಮತ್ತು ಸಿ ಫಾರಂ ಕಳುಹಿಸಲಾಗಿತ್ತು. ಆದರೆ ಅದಕ್ಕೂ ಮುನ್ನವೇ ಬಿಜೆಪಿಯಿಂದ ಎಚ್.ಯೋಗಾ ರಮೇಶ್ ನಾಮಪತ್ರ ಸಲ್ಲಿಸಿದ್ದರು. ಯೋಗಾ ರಮೇಶ್ ಮಾತ್ರವಲ್ಲದೆ ಕೃಷ್ಣೇಗೌಡ ಸಹ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದರಿಂದ ಯಾರು ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ ಎಂಬ ಅನುಮಾನ ಮೂಡಿತ್ತು.
ಆದರೆ ಶುಕ್ರವಾರ ನಡೆದ ನಾಮಪತ್ರ ಪರಿಶೀಲನೆ ವೇಳೆ, ಕೃಷ್ಣೇಗೌಡ ಬಿಜೆಪಿಯಿಂದ ಸಲ್ಲಿಸಿದ್ದ ಉಮೇದುವಾರಿಕೆ ವಾಪಸ್ ಪಡೆದಿದ್ದಾರೆ. ಆದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿದ್ದಾರೆ. ಹೀಗಾಗಿ ಎಚ್.ಯೋಗಾ ರಮೇಶ್ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿದ್ದಾರೆ.
ಅಭ್ಯರ್ಥಿಗಳ ಬಳಿ ಹಣ ಪಡೆದು ಹಣ ಕೊಡದ ಮುಖಂಡನಿಗೆ ಮಹಿಳೆಯಿಂದ ಕ್ಲಾಸ್
ಚಿಕ್ಕಮಗಳೂರು: ಚುನಾವಣಾ ಪ್ರಚಾರಕ್ಕಾಗಿ ಅಭ್ಯರ್ಥಿಗಳ ಬಳಿ ಹಣ ಪಡೆದು ಕಾರ್ಯಕರ್ತರಿಗೆ ಹಣ ಕೊಡದ ಮುಖಂಡನನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಪಿರಮೇನಹಳ್ಳಿ ತಾಂಡ್ಯ ಗ್ರಾಮದಲ್ಲಿ ನಡೆದಿದೆ.
ಅಭ್ಯರ್ಥಿಗಳ ಬಳಿ ಹಣ ಪಡೆದು ಕಾರ್ಯಕರ್ತರಿಗೆ ಹಣ ಕೊಡದ ಮುಖಂಡ ಬೈಕ್ ಮೇಲೆ ಕುಳಿತಿರುವಾಗಲೇ ಮಹಿಳೆ ಕೆನ್ನೆಗೆ ಭಾರಿಸಿದ್ದಾರೆ. ಹಣ ಕೊಡುವುದಾಗಿ ನಂಬಿಸಿ ರೋಡ್ ಶೋಗೆ ಕರೆದುಕೊಂಡು ಹೋಗಿದ್ದ ಪಿರಮೇನಹಳ್ಳಿ ತಾಂಡ್ಯದ ಮುಖಂಡ ಮಂಜುನಾಥ್ ಅಭ್ಯರ್ಥಿಗಳ ಬಳಿ ಹಣ ಪಡೆದು ಹಣ ಕೊಡದ ಹಿನ್ನೆಲೆ ಮುಖಂಡನಿಗೆ ಮಹಿಳೆ ಧರ್ಮದೇಟು ನೀಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಸುರೇಶ್ ಹಾಗೂ ಪಕ್ಷೇತರ ಅಭ್ಯರ್ಥಿ ಹೆಚ್.ಎಂ. ಗೋಪಿಕೃಷ್ಣ ನಾಮಪತ್ರ ಸಲ್ಲಿಕೆಗೂ ಮೊದಲು ನಡೆದ ರೋಡ್ ಶೋನಲ್ಲಿ ಪಿರಮೇನಹಳ್ಳಿ ತಾಂಡ್ಯ ಗ್ರಾಮದ ನೂರಾರು ಜನ ಭಾಗಿಯಾಗಿದ್ದರು. ಆದರೆ ಕಾರ್ಯಕ್ರಮದ ನಂತರ ಹಣ ಕೊಡದ ಮಂಜುನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications