ಅರಸೀಕೆರೆ ಚುನಾವಣೆ ಫಲಿತಾಂಶ 2023: ಶಿವಲಿಂಗೇ ಗೌಡ Vs ಸಂತೋಷ್
ಹಳೇ ಮೈಸೂರು ಭಾಗದಲ್ಲಿ ಗುರುತಿಸಲ್ಪಡುವ ಹಾಸನ ಜಿಲ್ಲಾ ವ್ಯಾಪ್ತಿಯ ಅರಸೀಕೆರೆ ವಿಧಾನಸಭಾ ಕ್ಷೇತ್ರ ಜಾತ್ಯಾತೀತ ಜನತಾದಳದ (JDS) ಭದ್ರಕೋಟೆಯೆಂದೇ ಗುರುತಿಸಲ್ಪಟ್ಟಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಬಹುತೇಕ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿ ನಡೆಯಲಿದೆ.
ಕ್ಷೇತ್ರದಲ್ಲಿ ಬಿಜೆಪಿಯಿಂದ ಜಿ.ವಿ ಬಸವರಾಜು, ಜೆಡಿಎಸ್ನಿಂದ ಎನ್.ಆರ್. ಸಂತೋಷ್, ಕಾಂಗ್ರೆಸ್ಸಿನಿಂದ ಕೆ.ಎಂ.ಶಿವಲಿಂಗೇಗೌಡ, ಆಪ್ ನಿಂದ ರಾಜೇಶ್ವರಿ ಬಿ.ಎಚ್ ಕಣದಲ್ಲಿದ್ದಾರೆ. ಅರಸೀಕೆರೆಯಲ್ಲಿ ಒಟ್ಟು 2,14,020 ಮತದಾರರು ಇದ್ದಾರೆ. ಮೊನ್ನೆ ನಡೆದ ಚುನಾವಣೆಯಲ್ಲಿ ಇಲ್ಲಿ ಶೇ. 84.97 ಮತದಾನವಾಗಿತ್ತು.

2018ರಲ್ಲಿ ಆಗ ಜೆಡಿಎಸ್ನಲ್ಲಿದ್ದ ಎಂ.ಕೆ. ಶಿವಲಿಂಗೇಗೌಡ ಅವರು ಬರೊಬ್ಬರಿ 93,986 ಮತಗಳಿಂದ ಗೆದ್ದಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಜೆ.ಮರಿಸ್ವಾಮಿಯವರು ಕೇವಲ 25,258 ಮತ ಪಡೆದು ಭಾರೀ ಅಂತರದಿಂದ ಸೋಲುಂಡಿದ್ದರು.
ಈ ಬಾರಿ ಸಹ ಜೆಡಿಎಸ್ ಬಿಟ್ಟು ಶಿವಲಿಂಗೇಗೌಡರು ಕಾಂಗ್ರೆಸ್ ಸೇರಿ ಅಲ್ಲಿಂದ ಸ್ಪರ್ಧಿಸಿದ್ದಾರೆ. ಇದು ಕೈ ಬಣಕ್ಕೆ ವರದಾನವಾಗುವ ಸಾಧ್ಯತೆ ಇದೆಯೇ ಎನ್ನುವುದು ಫಲಿತಾಂಶ ಹೊರಬಿದ್ದ ನಂತರ ಗೊತ್ತಾಗಲಿದೆ.
ಜೆಡಿಎಸ್ ಭದ್ರಕೋಟೆ ಈ ಬಾರಿ ಕಾರಣಾಂತರಗಳಿಂದ ಅಲುಗಾಡಿದ ಪರಿಣಾಮವೇ ಗೆಲುವಿನ ಕುದುರೆ ಶಿವಲಿಂಗೇಗೌಡ ಅವರು ಕಾಂಗ್ರೆಸ್ ಪಾಲಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ, ಈ ಭಾಗದಲ್ಲಿ ಪಂಚರತ್ನ ಯಾತ್ರ ಕೈ ಹಿಡಯಬಹುದು ಎಂದು ಜೆಡಿಎಸ್ ವರಿಷ್ಠರ ಲೆಕ್ಕಾಚಾರ. ಇದಕ್ಕೆ ಕೆಲವೇ ಗಂಟೆಯಲ್ಲಿ ಉತ್ತರ ಸಿಗಲಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications