ಸಕಲೇಶಪುರ: ಅಂಗನವಾಡಿಗೆ ತೆರಳುವಾಗ ಹಾವು ಕಡಿದುಬಾಲಕ ಸಾವು
ಹಾಸನ, ಡಿಸೆಂಬರ್ 24: ಅಂಗನವಾಡಿಗೆ ತೆರಳುವಾಗ ಹಾವು ಕಡಿದು ಬಾಲಕ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ.
ದೊಡ್ಡಕಲ್ಲೂರು ಗ್ರಾಮದ ಯಶವಂತ್ ಹಾಗೂ ಗೌರಿ ದಂಪತಿಯ ಪುತ್ರ ರೋಷನ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.
ಬಾಲಕ ಅಂಗನವಾಡಿಗೆ ತೆರಳುವಾಗ ಹಾವು ಕಚ್ಚಿದ್ದು, ಪೋಷಕರು ಕೂಡಲೇ ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ವಂತ ವಾಹನದಲ್ಲಿ ಕರೆತಂದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರಕ್ಕೆ ತೆರಳು ಆಂಬ್ಯುಲೆನ್ಸ್ ಸಿಗದೇ ಬಾಲಕನ ಪೋಷಕರು ಪರದಾಡಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಬಾಲಕ ಸಾವನ್ನಪ್ಪಿದ್ದಾನೆ.

ಸಕಲೇಶಪುರ ತಾಲೂಕಿನಾದ್ಯಂತ ಕೇವಲ ಒಂದೇ ಒಂದು ಆಂಬ್ಯುಲೆನ್ಸ್ ಓಡಾಟ ನಡೆಸುತ್ತಿದೆ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಸಿಗದೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವೈದ್ಯರು ಚುಚ್ಚುಮದ್ದು ನೀಡಿದ ಒಂದೇ ರಾತ್ರಿಯಲ್ಲಿ ಎತ್ತುಗಳು ಸಾವು
ಪಶುವೈದ್ಯರು ಗಂಟಲುಬೇನೆ ಚುಚ್ಚುಮದ್ದು ನೀಡಿದ ಮರುದಿನವೇ ಲಕ್ಷಾಂತರ ಮೌಲ್ಯದ ಎರಡು ಎತ್ತುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.
ಎತ್ತುಗಳಿಗೆ ಆರೋಗ್ಯ ಹದಗೆಟ್ಟಿದೆ ಎಂದು ರೈತ ಶಂಕರ್ ಎತ್ತುಗಳನ್ನು ಲಿಂಗದಹಳ್ಳಿಯ ಪಶು ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯರು ಪರೀಕ್ಷಿಸಿ ಇಂಜೆಕ್ಷನ್ ನೀಡಿ ಕಳುಹಿಸಿದ್ದರು. ಆದರೆ, ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ರಾಸುಗಳು ಬೆಳಗಾವಷ್ಟರಲ್ಲಿ ಸಾವನ್ನಪ್ಪಿದ್ದವು. ವೈದ್ಯರು ಬೇಜವಾಬ್ದಾರಿಯಿಂದ ಯಾವುದೋ ಚುಚ್ಚುಮದ್ದು ನೀಡಿ ಎತ್ತುಗಳನ್ನು ಕೊಂದಿದ್ದಾರೆ ಎಂದು ಆರೋಪಿಸಿರುವ ರೈತರು, ಸೂಕ್ತ ನ್ಯಾಯ ಹಾಗೂ ಪರಿಹಾರಕ್ಕಾಗಿ ಎತ್ತುಗಳನ ಮೃತದೇಹವನ್ನು ಆಸ್ಪತ್ರೆ ಮುಂಭಾಗ ಇಟ್ಟು ವೈದ್ಯರು ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಭಟನೆ ವೇಳೆ ಲಕ್ಷಾಂತರ ಮೌಲ್ಯದ ಎರಡು ಎತ್ತುಗಳನ್ನ ಕಳೆದುಕೊಂಡ ರೈತ ಶಂಕರ್ ಕಣ್ಣೀರಿಟ್ಟಿದ್ದು, ವೈದ್ಯ ಬಸವರಾಜ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ವೈದ್ಯ ಬಸವರಾಜ್ ಮಾತನಾಡಿದ್ದು, ಈ ರೀತಿ ರಾಸುಗಳು ಸಾವನ್ನಪ್ಪುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ದನಕರುಗಳು ಸಾವನ್ನಪ್ಪಿವೆ. ಲಿಂಗದಹಳ್ಳಿ ಸುತ್ತಮುತ್ತ 10ಕ್ಕೂ ಹೆಚ್ಚು ರಾಸುಗಳು ಸಾವನ್ನಪ್ಪಿವೆ ಎಂದು ತಿಳಿಸಿದ್ದಾರೆ
ಲಿಂಗದಹಳ್ಳಿಯ ಪಶು ಆಸ್ಪತ್ರೆ ಹಾಗೂ ರೈತರ ವಿರುದ್ಧ ಆಕ್ರೋಶ ಹೊರಹಾಕಿದ ರೈತರು, ಆಸ್ಪತ್ರೆಯಲ್ಲಿ ಒಂದೇ ಒಂದು ಔಷಧಿ ಇಲ್ಲ. ಪ್ರತಿಯೊಂದನ್ನೂ ಹೊರಗಡೆಯಿಂದ ತನ್ನಿ ಎಂದು ಬರೆದುಕೊಡುತ್ತಾರೆ. ವೈದ್ಯರಿಗೆ ಹಣ ಕೊಟ್ಟರಷ್ಟೆ ಚಿಕಿತ್ಸೆ ಇಲ್ಲವಾದರೆ ಚಿಕಿತ್ಸೆ ನೀಡುವುದಿಲ್ಲ. 500 ರೂಪಾಯಿ ಕೈಗಿಟ್ಟರೆ ಚಿಕಿತ್ಸೆ ನೀಡುತ್ತಾರೆ ಎಂದು ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಲಕ್ಷಾಂತರ ಮೌಲ್ಯದ ರಾಸುಗಳನ್ನ ಕಳೆದುಕೊಂಡಿದ್ದೇವೆ. ಸರ್ಕಾರ ನಮಗೆ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬಳಿಕ ರೈತರು ಎತ್ತುಗಳನ್ನ ಗ್ರಾಮದಲ್ಲಿ ಮೆರವಣಿಗೆ ಮಾಡಿ ಅಂತ್ಯಸಂಸ್ಕಾರ ನಡೆಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications