ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಗುವಿನ ಹೃದಯಕ್ಕೆ ಸ್ಪಂದಿಸಿದ ಜನ; ಮಂಗಳೂರಿನಿಂದ ಝೀರೊ ಟ್ರಾಫಿಕ್

By ಹಾಸನ ಪ್ರತಿನಿಧಿ
|
Google Oneindia Kannada News

Recommended Video

Public creates Zero traffic from Mangaluru to Bengaluru to save child | Ambulance | Mangaluru

ಹಾಸನ, ಫೆಬ್ರವರಿ 06: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಮಗುವನ್ನು ಇಂದು ಮಂಗಳೂರಿನಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ನಲ್ಲಿ ಕರೆದುಕೊಂಡು ಬರಲಾಗುತ್ತಿದೆ.

40 ದಿನದ ಸೈಫುಲ್ ಅಝ್ಮಾನ್ ಎಂಬ ಮಗು ಹೃದಯ ಕಾಯಿಲೆಯಿಂದ ಬಳಲುತ್ತಿತ್ತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಆ ಮಗುವಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಶಸ್ತ್ರ ಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಐಸಿಯು ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಬರಲಾಗುತ್ತಿದೆ.

ಮಗುವಿನ ಜೀವ ರಕ್ಷಣೆಗೆ ಬೆಳಗಾವಿಯಲ್ಲಿ ಝೀರೋ ಟ್ರಾಫಿಕ್ಮಗುವಿನ ಜೀವ ರಕ್ಷಣೆಗೆ ಬೆಳಗಾವಿಯಲ್ಲಿ ಝೀರೋ ಟ್ರಾಫಿಕ್

ಇಂದು ಬೆಳಿಗ್ಗೆ 11.30ಕ್ಕೆ ಮಂಗಳೂರಿನಿಂದ ಬೆಂಗಳೂರಿನ ಜಯದೇವ ಆಸ್ಪತ್ರೆ ಕಡೆಗೆ ಝೀರೊ ಟ್ರಾಫಿಕ್ ನಲ್ಲಿ ಮಗುವನ್ನು ಕರೆದುಕೊಂಡು ಬರಲಾಗುತ್ತಿದೆ. ಆಂಬುಲೆನ್ಸ್ ಗೆ ಸರಾಗ ದಾರಿ ಮಾಡಿಕೊಡುವಂತೆ ಸಾರ್ವಜನಿಕರಲ್ಲಿ ಈ ಮುನ್ನವೇ ಮನವಿ ಮಾಡಿಕೊಳ್ಳಲಾಗಿತ್ತು. ಸಕಲೇಶಪುರ, ಹಾಸನದ ಯುವಕರಿಗೆ ಆಂಬುಲೆನ್ಸ್ ತೆರಳಲು ನೆರವಾಗುವಂತೆ ಕೇಳಿಕೊಳ್ಳಲಾಗಿದ್ದು, ಯುವಕರು ಸ್ವಯಂ ಸೇವಕರಾಗಿ ನಿಂತು ಆಂಬುಲೆನ್ಸ್ ಸರಾಗವಾಗಿ ಸಾಗಲು ದಾರಿ ಮಾಡಿಕೊಡುತ್ತಿದ್ದಾರೆ.

Baby With Heart Disease Being Brought From Mangaluru To Bengaluru

ಮಂಗಳೂರಿನ ಫಾ. ಮುಲ್ಲರ್ ನಿಂದ ಹೊರಟು ದೋಣಿಗಲ್ ಸಕಲೇಶಪುರ-ಹಾಸನ, ತಣ್ಣೀರುಹಳ್ಳ ಬೈಪಾಸ್, ಬಿಟ್ಟಗೌಡನಹಳ್ಳಿ ಬೈಪಾಸ್, ಚನ್ನಪಟ್ಟಣ ಬೈಪಾಸ್, ಗವೇನಹಳ್ಳಿ, ಭೂವನಹಳ್ಳಿ ಬೈಪಾಸ್ ಮತ್ತು ಬೆಂಗಳೂರು ಮಾರ್ಗವಾಗಿ ಜೀರೋ ಟ್ರಾಫಿಕ್ ನಲ್ಲಿ ಆಂಬುಲೆನ್ಸ್ ಬರಲಿದೆ. ಮಂಗಳೂರಿನಿಂದ ಹೊರಟ ಆಂಬುಲೆನ್ಸ್ 1.20ಕ್ಕೆ ಶಿರಾಡಿ ಪಾಸ್ ಅಗಿದ್ದು, ಸಕಲೇಶಪುರಕ್ಕೆ ತಲುಪಿದೆ. ಹಾಸನ ಬೈಪಾಸ್ ಗೆ 2.15ಕ್ಕೆ ಬರಲಿದ್ದು, ಎಲ್ಲಾ ಕಡೆ ಜೀರೋ ಟ್ರಾಫಿಕ್ ನಲ್ಲಿ ಕರೆದುಕೊಂಡು ಹೋಗಲು ಯುವಕರು ಸ್ವಯಂ ಆಗಿ ದಾರಿಯುದ್ದಕ್ಕೂ ನಿಂತು ನೆರವಾಗುತ್ತಿದ್ದಾರೆ.

English summary
A baby suffering from a heart problem is being brought from Mangaluru to Bengaluru in Zero Traffic today, Youths volunteerly clearing path to ambulance,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X