ಬೇಲೂರು; ಆಧಾರ್ ಕಾರ್ಡ್ ಮಾಡಿಕೊಡಲು ಬೇಕಾಬಿಟ್ಟಿ ಹಣ ವಸೂಲಿ, ಸಾರ್ವಜನಿಕರ ಆಕ್ರೋಶ
ಹಾಸನ, ಅಕ್ಟೋಬರ್, 11: ಬೇಲೂರಿನ ಅಂಚೆ ಕಛೇರಿಯಲ್ಲಿ ಆಧಾರ್ ಕಾರ್ಡ್ ಮಾಡಿಕೊಡುವ ನೆಪದಲ್ಲಿ ಭ್ರಷ್ಟಾಚಾರ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸಾರ್ವಜನಿಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ನೌಕರನಿಗೆ ಸ್ಥಳಿಯರು ತರಾಟೆಗೆ ತೆಗದುಕೊಂಡಿದ್ದಾರೆ.
ಅಂಚೆ ಇಲಾಖೆಯ ಬೇಲೂರು ಶಾಖೆ ನೌಕರ ಮಿಥುನ್ ವಿರುದ್ದ ಅಕ್ರಮ ಹಣ ವಸೂಲಿ ಆರೋಪ ಕೇಳಿಬಂದಿದೆ. ಆಕ್ರಮ ಹಣ ವಸೂಲಿ ಬಗ್ಗೆ ಪ್ರಶ್ನಿಸಿದಾಗ ಮಿಥುನ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಫೋನ್ ನಂಬರ್ ಅಪ್ಡೇಟ್ ಮಾಡಲು ಈತ 50 ರೂಪಾಯಿ ಬದಲಾಗಿ 120 ರೂಪಾಯಿ ವಸೂಲಿ ಮಾಡುತ್ತಿದ್ದ. ನಿಯಮದ ಪ್ರಕಾರ ಉಚಿತವಾಗಿ ಜನರಿಗೆ ಆಧಾರ್ ಕಾರ್ಡ್ ಮಾಡಿಕೊಡಬೇಕು. ಆದರೆ ಇವನು ಜನರ ಬಳಿ ಅನಧಿಕೃತವಾಗಿ 200 ರೂಪಾಯಿ ಹಣವನ್ನು ವಸೂಲಿ ಮಾಡುತ್ತಿದ್ದ.

ಜನರ ಬಳಿ ಬೇಕಾಬಿಟ್ಟಿಯಾಗಿ ಹಣ ವಸೂಲಿ
ಇನ್ನು ಬಯೊಮೆಟ್ರಿಕ್ ಅಪ್ಡೇಟ್ಗೆ 100 ರೂಪಾಯಿ ಬದಲಾಗಿ 200 ರೂಪಾಯಿ ವಸೂಲಿ ಮಾಡುತ್ತಿದ್ದ. ಆದರೆ, ಯಾವುದಕ್ಕೂ ರಶೀದಿ ನೀಡದೆ ಜನರನ್ನು ವಂಚಿಸುತ್ತಿದ್ದ. ಈ ದಂಧೆಯನ್ನು ಖಂಡಿಸಿದ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಅಧಿಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ ಆರೋಪಿ ಮಿಥುನ್ ಎಲ್ಲರ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಮಿಥುನ್ ಕಳೆದ ಹಲವು ತಿಂಗಳಿನಿಂದ ಇದೇ ರೀತಿ ಹಣ ವಸೂಲಿ ಮಾಡುತ್ತಿದ್ದು, ಇವನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಆಧಾರ್ ಕಾರ್ಡ್ ಮಾಡಿಕೊಡುವ ನೆಪದಲ್ಲಿ ಜನರ ಬಳಿ ಹಣ ಕೀಳುವವರ ಸಂಖ್ಯೆ ಹೆಚ್ಚಾಗಿದೆ. ಬರೀ ಹಾಸನ ಜಿಲ್ಲೆಯೊಂದರ ಕತೆಯಲ್ಲ ಇದು. ಹಲವು ಜಿಲ್ಲೆಗಳ ಹಳ್ಳಿಗಳಲ್ಲಿ ಜನಸಾಮಾನ್ಯರಿಗೆ ಗೊತ್ತಾಗದಂತೆ ಇಲ್ಲಸಲ್ಲದ ಕಾರಣಗಳನ್ನು ಹೇಳಿ ಹಣವನ್ನು ಕೀಳುವವರ ಸಂಖ್ಯೆ ಹೆಚ್ಚಾಗಿಬಿಟ್ಟಿದೆ. ಹೀಗೆ ದಂಧೆ ನಡೆಸಿದ ಸಾಕಷ್ಟು ಪ್ರಕರಣಗಳು ಬಯಲಿಗೆ ಬಂದಿವೆ. ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳದಿರುವುದೇ ದಂಧೆಗಳು ಹೆಚ್ಚಾಗಲು ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications