ಇನ್ನೆರಡು ತಿಂಗಳಲ್ಲಿ ಹಾಸನ- ಬೆಂಗಳೂರು ರೈಲು ಸಂಚಾರ ಶುರು
ಹಾಸನ, ಫೆಬ್ರವರಿ 1: ಎರಡು ತಿಂಗಳಲ್ಲಿ ಹಾಸನ- ಬೆಂಗಳೂರು ನಡುವೆ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಬೆಂಗಳೂರು ವಿಭಾಗೀಯ ಮಟ್ಟದ ರೈಲ್ವೆ ಅಧಿಕಾರಿ ಗೋಪಿನಾಥ್ ತಿಳಿಸಿದರು.
ಹಾಸನ- ಬೆಂಗಳೂರು ರೈಲ್ವೆ ಮಾರ್ಗಮಧ್ಯದಲ್ಲಿರುವ ಚನ್ನರಾಯಪಟ್ಟಣದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಅವರು ರೈಲು ಮಾರ್ಗ, ಕಚೇರಿ ಸೇರಿದಂತೆ ವಲಯವನ್ನು ಪರಿಶೀಲಿಸಿ ಮಾತನಾಡಿದರು.[2016ರಲ್ಲಿ ಹಾಸನ-ಬೆಂಗಳೂರು ನಡುವೆ ರೈಲು ಸಂಚಾರ]

ಫೆಬ್ರವರಿ 15ರಿಂದ 28ರ ವರೆಗೆ ಹಾಸನ ಮತ್ತು ಬೆಂಗಳೂರಿಗೆ ಪ್ರಾಯೋಗಿಕ ರೈಲು ಸಂಚಾರ ನಡೆಸಲಾಗುವುದು. ನಂತರ ಎರಡು ತಿಂಗಳಲ್ಲಿ ರೈಲು ಸಂಚಾರ ಶುರುವಾಗಲಿದೆ. ಇದರಿಂದ ಬೆಂಗಳೂರು ಹಾಸನದ ಜನತೆಯ ಸುಖಕರ ಪ್ರಯಾಣಕ್ಕೆ ಅನುಕೂಲವಾಗಲಿದೆ. ಅಲ್ಲದೆ 2018ರಲ್ಲಿ ನಡೆಯುವ ಶ್ರವಣಬೆಳಗೊಳದ ಮಹಾ ಮಸ್ತಕಾಭಿಷೇಕ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗಲಿದೆ ಎಂದರು.
ಈ ರೈಲು ಮಾರ್ಗ 2016ರಲ್ಲೇ ಪ್ರಾರಂಭವಾಗಬೇಕಿತ್ತು. ನಿಧಾನಗತಿಯ ಕೆಲಸದಿಂದಾಗಿ ಮುಂದಿನ ಎರಡು ತಿಂಗಳಲ್ಲಿ ಸಂಚಾರ ಪ್ರಾರಂಭವಾಗಲಿದೆ. ಅಲ್ಲದೆ ಬೆಂಗಳೂರು-ಹಾಸನ ನಡುವೆ 12 ರೈಲು ನಿಲ್ದಾಣಗಳಿವೆ. ಇನ್ನು ಕೆಲ ರೈಲು ನಿಲ್ದಾಣಗಳ ಕಾರ್ಯಚಾಲನೆಯಲ್ಲಿದೆ. ಅದನ್ನು ಅದಷ್ಟು ಬೇಗ ಪೂರ್ಣಗೊಳಿಸುವಂತೆ ಸೂಚಿಸಲಾಗಿದ್ದು, ಇನ್ನು ಆಗಬೇಕಿರುವ ಕೆಲಸಗಳನ್ನು ಪಟ್ಟಿಮಾಡಿ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಗುವುದ ಎಂದು ಗೋಪಿನಾಥ್ ತಿಳಿಸಿದರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications