ಶ್ರವಣಬೆಳಗೊಳ ಮೂಲಕ ಬೆಂಗಳೂರು-ಮಂಗಳೂರು ರೈಲು ಸಂಚಾರ
ಹಾಸನ, ನವೆಂಬರ್ 12 : ಶ್ರವಣಬೆಳಗೊಳ ಮೂಲಕ ಮಂಗಳೂರಿಗೆ ರೈಲು ಸಂಚಾರ ನಡೆಸಲು ಅನುಮತಿ ಸಿಕ್ಕಿದೆ. 2018ರ ಫೆಬ್ರವರಿಯಲ್ಲಿ ಬೆಂಗಳೂರು-ಶ್ರವಣಬೆಳಗೊಳ-ಮಂಗಳೂರು ರೈಲು ಸಂಚಾರ ಆರಂಭವಾಗಲಿದೆ.
ಶಿವಮೊಗ್ಗ : ಇಂಟರ್ಸಿಟಿ ರೈಲು ವೇಳಾಪಟ್ಟಿ, ದರ ಬದಲಾವಣೆ
ಬೆಂಗಳೂರು-ಹಾಸನ ಮಾರ್ಗದಲ್ಲಿ ಈಗಾಗಲೇ ರೈಲು ಸಂಚಾರ ಆರಂಭವಾಗಿದೆ. ಶ್ರವಣಬೆಳಗೊಳ ಮೂಲಕ ಮಂಗಳೂರಿಗೆ ರೈಲು ಸಂಚಾರ ಆರಂಭವಾದರೆ ಪ್ರಯಾಣದ ಅವಧಿ 85 ರಿಂದ 45 ನಿಮಿಷಕ್ಕೆ ಕಡಿಯೆಯಾಗಲಿದೆ.
ಫೆಬ್ರವರಿ 10ರಿಂದ ವಾರದಲ್ಲಿ 4 ಬಾರಿ ಶ್ರವಣಬೆಳಗೊಳ ಮಾರ್ಗವಾಗಿ ರೈಲು ಸಂಚಾರ ನಡೆಸಲು ನೈಋತ್ಯ ರೈಲ್ವೆ ಒಪ್ಪಿಗೆ ನೀಡಿದೆ. ಸದ್ಯ, ಬೆಂಗಳೂರು-ಮಂಗಳೂರು ನಡುವಿನ ರೈಲು ಮೈಸೂರು ಮಾರ್ಗದ ಮೂಲಕ ಸಂಚಾರ ನಡೆಸುತ್ತಿದೆ.
ಹಾಸನ- ಬೆಂಗಳೂರು ರೈಲಿನ ವೇಳಾಪಟ್ಟಿ, ಏನೆಂದು ಹೆಸರು?
ಬೆಂಗಳೂರಿನಿಂದ ಹೊರಡುವ ರೈಲು ಯಶವಂತಪುರ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರಸ್ತೆ, ಬಂಟ್ವಾಳ ನಿಲ್ದಾಣದಲ್ಲಿ ನಿಂತು ಮಂಗಳೂರು ತಲುಪಲಿದೆ.
ವೇಳಾಪಟ್ಟಿ : ಫೆಬ್ರವರಿ 10ರಿಂದ ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಿಂದ ಸಂಜೆ 7.15ಕ್ಕೆ ಹೊರಡುವ ರೈಲು, ಮರುದಿನ ಬೆಳಗ್ಗೆ 6.20ಕ್ಕೆ ಮಂಗಳೂರನ್ನು ತಲುಪಲಿದೆ.