ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು-ಸಕಲೇಶಪುರ ರೈಲು ಸಂಚಾರ ಆರಂಭ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 25 : ಭಾರಿ ಮಳೆ ಮತ್ತು ಭೂ ಕುಸಿತದ ಕಾರಣ ಬೆಂಗಳೂರು-ಸಕಲೇಶಪುರ ನಡುವಿನ ರೈಲು ಸಂಚಾರ ಸ್ಥಗಿತಗೊಂಡಿತ್ತು. ಈಗ ರೈಲು ಸಂಚಾರ ಆರಂಭವಾಗಿದ್ದು, ಕಲವೇ ದಿನಗಳಲ್ಲಿ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರವೂ ಆರಂಭವಾಗುವ ನಿರೀಕ್ಷೆ ಇದೆ.

ಗುಡ್ಡ ಕುಸಿತದಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರಲ್ಲಿ ರೈಲ್ವೆ ಹಳಿಯ ಮೇಲೆ ಕಲ್ಲುಗಳು ಕುಸಿದು ಬಿದ್ದಿದ್ದವು. ರೈಲ್ವೆ ಇಲಾಖೆ ಸಿಬ್ಬಂದಿಗಳು ಕಲ್ಲು ಮತ್ತು ಮಣ್ಣನ್ನು ತೆರವುಗೊಳಿಸಿ ರೈಲ್ವೆ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಯಡಕುಮರಿ ರೈಲು ನಿಲ್ದಾಣದಲ್ಲಿ ಸಿಲುಕಿದ್ದ 16 ಸಿಬ್ಬಂದಿ ರಕ್ಷಣೆಯಡಕುಮರಿ ರೈಲು ನಿಲ್ದಾಣದಲ್ಲಿ ಸಿಲುಕಿದ್ದ 16 ಸಿಬ್ಬಂದಿ ರಕ್ಷಣೆ

ಸೋಮವಾರ ರಾತ್ರಿ ಒಂದು ರೈಲು ಬೆಂಗಳೂರಿನಿಂದ ಸಕಲೇಶಪುರಕ್ಕೆ ಆಗಮಿಸಿದೆ. ಮಂಗಳವಾರ ಮತ್ತೊಂದು ರೈಲು ಸಕಲೇಶಪುರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದೆ.

ಕೊಡಗಿನಲ್ಲಿ ಜಲಪ್ರಳಯ, ಕಣ್ಣೆದುರೇ ಕುಸಿಯುತ್ತಿವೆ ಮನೆ, ಗುಡ್ಡ, ಕಾಫಿತೋಟಕೊಡಗಿನಲ್ಲಿ ಜಲಪ್ರಳಯ, ಕಣ್ಣೆದುರೇ ಕುಸಿಯುತ್ತಿವೆ ಮನೆ, ಗುಡ್ಡ, ಕಾಫಿತೋಟ

Bengaluru-Sakleshpur train service resumed

ಸಕಲೇಶಪುರದಿಂದ ಸುಬ್ರಮಣ್ಯ ರೈಲ್ವೆ ನಿಲ್ದಾಣದ ತನಕ ರೈಲ್ವೆ ಹಳಿಯ ಮೇಲೆ ಬಾರಿ ಮಣ್ಣು ಕುಸಿದು ಬಿದ್ದಿದೆ. ಅದನ್ನು ತೆರವುಗೊಳಿಸುವ ಕಾರ್ಯ ಇನ್ನೂ ನಡೆಯುತ್ತಿದೆ. ಆದ್ದರಿಂದ, ಇನ್ನೂ ಕೆಲವು ದಿನಗಳ ಕಾಲ ಬೆಂಗಳೂರು-ಮಂಗಳೂರು ರೈಲು ಸಂಚಾರ ಆರಂಭವಾಗುವುದಿಲ್ಲ.

ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಸಕಲೇಶಪುರದಲ್ಲಿ ಅಪಾರ ಹಾನಿಯಾಗಿತ್ತು. ಯಡಕುಮರಿ ರೈಲು ನಿಲ್ದಾಣದ ಸಮೀಪ ಭೂ ಕುಸಿತ ಉಂಟಾಗಿತ್ತು. ರೈಲ್ವೆ ಇಲಾಖೆಯ ಸಿಬ್ಬಂದಿಗಳು ಅಪಾಯಕ್ಕೆ ಸಿಲುಕಿದ್ದರು.

English summary
Bengaluru-Sakleshpur train service stopped after after heavy rain and landslide. Now train service resumed. Bengaluru-Mangaluru railway service also excepted to start soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X