Bhagavad Gita: ಭಗವದ್ಗೀತೆ ಮನೇಲಿ ಹೇಳಿಕೊಡ್ತಾರೆ, ಮಕ್ಕಳಿಗೆ ಮೊದಲು ಬದುಕು ಕಟ್ಟಿಕೊಡಿ; ಎಚ್ಡಿಕೆ
ಹಾಸನ, ಮಾರ್ಚ್ 18: "ಭಗವದ್ಗೀತೆಯನ್ನು ಅವರವರ ಕುಟುಂಬದಲ್ಲಿ ಹೇಳಿಕೊಡುತ್ತಾರೆ, ಮಕ್ಕಳ ಬದುಕನ್ನು ಕಟ್ಟಿಕೊಡಲು ಸರ್ಕಾರ ಇದೆ," ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಟಿ. ಮಾಯಗೌಡನಹಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
"ಮಕ್ಕಳ ಭವಿಷ್ಯ ನಿರ್ಮಾಣ ಮಾಡುವ ವಿಷಯಗಳು ಶಾಲೆಗಳಲ್ಲಿ ಇರಬೇಕು, ಈ ಕುರಿತು ಹಿಂದೂ ಸಮಾಜದ ಎಲ್ಲಾ ಬಂಧುಗಳಿಗೂ ಮನವಿ ಮಾಡುತ್ತೇನೆ," ಎಂದರು.

"ನಾನೂ ಹುಟ್ಟಿರುವುದು ಹಿಂದೂ ಸಮಾಜವೇ, ನಮ್ಮ ಕುಟುಂಬ ದೇವರ ಮೇಲೆ ಅಪಾರ ನಂಬಿಕೆ ಇಟ್ಟಿದೆ. ದೇವರ ಭಯದ ಹಿನ್ನೆಲೆಯಲ್ಲಿ ನಾವು ನಡೆದುಕೊಳ್ಳುವ ರೀತಿ, ನಮ್ಮ ಕುಟುಂಬದವರಷ್ಟು ಯಾವ ಕುಟುಂಬಗಳೂ ರಾಜ್ಯ ಹಾಗೂ ರಾಷ್ಟ್ರದಲ್ಲಿ ದೇವರನ್ನು ನಂಬಿವರು ಇಲ್ಲ. ಕೇವಲ ಮತ ಬ್ಯಾಂಕ್ಗಾಗಿ ಈ ರೀತಿ ಘಟನೆಗಳು ನಡೆಯುತ್ತಿವೆ," ಎಂದು ಎಚ್ಡಿಕೆ ತಿಳಿಸಿದರು.
"ಒಂದು ಕಾಲದಲ್ಲಿ ವಿದ್ಯೆ ಒಂದು ವರ್ಗಕ್ಕೆ ಸೇರಿದ್ದು ಎನ್ನುವ ವಾತಾವರಣವಿತ್ತು. ಅದೇ ಒಂದು ವರ್ಗದ ಜನ, ಈ ರೀತಿಯ ವಾತಾವರಣ ಎಲ್ಲರ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ನ್ಯೂನತೆಗಳನ್ನು ಇಟ್ಟುಕೊಂಡಿದ್ದೇವೆ. ಇಂತಹ ಸಂದರ್ಭದಲ್ಲಿ ಈ ರೀತಿಯ ವಿಷಯಗಳನ್ನು ಕೆದಕಿ, ಸಮಾಜದಲ್ಲಿ ಕಲುಷಿತ ವಾತಾವರಣ ನಿರ್ಮಾಣ ಮಾಡಿ ಅಂಥ ಭಗವದ್ಗೀತೆಯಲ್ಲಿ ಹೇಳಿದ್ದಾರಾ? ಭಗವದ್ಗೀತೆಯಲ್ಲಿ ಇರುವುದು ಧರ್ಮೋ ರಕ್ಷಿತ ರಕ್ಷಿತಃ ಹಾಲಿನ ರೀತಿ ಪರಿಶುದ್ಧವಾದ ಮನಸ್ಸನ್ನು ಒಡೆಯಬೇಡಿ," ಎಂದು ಮನವಿ ಮಾಡಿದರು.

ಹಿಜಾಬ್ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪನ್ನು ಕೆಲವರು ವಿರೋಧಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ನನ್ನ ಹೇಳಿಯನ್ನು ವ್ಯಾಟ್ಸಪ್ನಲ್ಲಿ ತಿರುಚಿದ್ದಾರೆ. ನಾನು ಎಲ್ಲೂ ಸಹ ವೈಯಕ್ತಿಕವಾಗಿ ಹಿಜಾಬ್ ಬಗ್ಗೆ ಚರ್ಚೆ ಮಾಡಿಲ್ಲ. ಹೈಕೋರ್ಟ್ ತೀರ್ಪನ್ನು ನಾವೆಲ್ಲರೂ ತಲೆ ಭಾಗಿ ಸ್ವೀಕರಿಸಬೇಕು ಎಂದು ಹೇಳಿದ್ದೇನೆ. ಇದೇ ವೇಳೆ ಪಿಯುಸಿವರೆಗೂ ಸಮವಸ್ತ್ರ ಇದೆ ಎಂದರು.
ಹಿಂದಿನ ಕಾಲದಲ್ಲಿ ಒಂದು ವರ್ಗದ ಯಾರಾದರೂ ತೀರಿಕೊಂಡರೆ ತಲೆ ಬೋಳಿಸಿ, ಬಳೆ ಒಡೆದು, ತಲೆಗೆ ಸೆರಗು ಹಾಕಿಕೊಂಡು ಇರಬೇಕು ಎಂಬ ಮೌಢ್ಯ ತಂದಿದ್ದರು. ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಟ್ಟಾಗ ಆ ಮೌಲ್ಯಗಳೆಲ್ಲ ಹೋದವು. ಈಗ ಹಿಜಾಬ್ ವಿಷಯ ಇಟ್ಟುಕೊಂಡು ಕೆಲವರು ರಾಜಕಾರಣ ಮಾಡಲು ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಿದರು.
''ಮುಸ್ಲಿಂ ಸಮಾಜದ ಹೆಣ್ಣುಮಕ್ಕಳಿಗೆ ಹೆಚ್ಚಿನ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಸರ್ಕಾರದ ನಡವಳಿಕೆಗಳಿದ್ದರೆ ಈ ಮೌಡ್ಯಗಳು ತನಗೆ ತಾನೇ ಹೊರಟು ಹೋಗುತ್ತವೆ. ಇವತ್ತು ದೊಡ್ಡ ಘರ್ಷಣೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಶಾಲಾ ಮಕ್ಕಳು ಮನಸ್ಸು ಪರಿಶುದ್ಧ ಹಾಲಿನಂತಹದ್ದು, ಆ ಮನಸ್ಸನ್ನು ಕಲುಷಿತಗೊಳಿಸಬೇಡಿ. ಅದು ಯಾವುದೇ ಸಮಾಜವಿರಲಿ,'' ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications