ಜೂನ್ 24 ರಿಂದ ಶ್ರವಣಬೆಳಗೊಳದಲ್ಲಿ ಅಖಿಲ ಭಾರತ ಹಳಗನ್ನಡ ಸಾಹಿತ್ಯ ಸಮ್ಮೇಳನ
ಹಾಸನ ಜೂ.21: ಜೈನಕಾಶಿ ಶ್ರವಣಬೆಳಗೊಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ಅಖಿಲ ಭಾರತ ಹಳಗನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ.
ಜೂನ್ 24, 25 ಹಾಗೂ 26 ರಂದು ಚಾವುಂಡರಾಯ ಸಭಾಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಜಿಯವರ ಸಾನಿಧ್ಯದಲ್ಲಿ ಹಾಗೂ ಡಾ.ಷ.ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ಗೋಷ್ಠಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಜೂನ್ 24 ರಂದು ಬೆಳಗ್ಗೆ 9.30 ರಿಂದ 12.30ರ ವರೆಗೆ ವಿಶೇಷ ಅಹ್ವಾನಿತರಿಂದ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ನೆರವೇರಲಿದೆ. ಸಂಜೆ 4 ರಿಂದ 6 ರವರೆಗೆ ಪ್ರೊ. ಎಸ್.ಜಿ.ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬಾಹುಬಲಿ ವಿಶ್ವಶಾಂತಿ ಸಂದೇಶ ಕವಿಗೋಷ್ಠಿ ಜರುಗಲಿದೆ.

25 ರಂದು ಬೆಳಗ್ಗೆ 9.15 ಕ್ಕೆ ಚಂದ್ರಗಿರಿ ಬೆಟ್ಟ ಮಹಾದ್ವಾರದಿಂದ ಶ್ರವಣಬೆಳಗೊಳ ಮುಖ್ಯರಸ್ತೆ, ವಿಂಧ್ಯಗಿರಿ ಮಹಾದ್ವಾರ ಮಾರ್ಗವಾಗಿ ಚಾವುಂಡರಾಯ ಸಭಾಮಂಟಪದ ವರೆಗೆ ಸಮ್ಮೇಳಾನಾಧ್ಯಕ್ಷರ ಮೆರವಣಿಗೆ ನಡೆಯಲಿದೆ.
10.30ಕ್ಕೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಸಾನಿಧ್ಯದಲ್ಲಿ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೆಗೌಡರು ಉದ್ಘಾಟನೆ ನೆರವೇರಿಸುವರು. ಡಾ.ಷ.ಶೆಟ್ಟರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಪದ್ಮರಾಜ ದಂಡಾವತಿ, ಹಂಪ ನಾಗರಾಜಯ್ಯ, ಡಾ.ಸಿ.ಪಿ.ಕೃಷ್ಣಕುಮಾರ್, ಹಿರಿಯ ಸಾಹಿತಿ ಚಂದ್ರಶೇಖರ ಪಾಡೀಲ, ಪ್ರೊ ಮಲ್ಲೇಪುರಂ ಜಿ.ವೆಂಕಟೇಶ್, ಶಾಸಕ ಸಿ.ಎನ್.ಬಾಲಕೃಷ್ಣ, ವಿಧಾನ ಪರಿಷತ್ತು ಸದಸ್ಯ ಎಂ.ಎ.ಗೋಪಾಲಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2.00 ಗಂಟೆಗೆ ಡಾ.ಪುರೋಷತ್ತಮ ಬಿಳಿಮಲೆ ಅವರ ಅಧ್ಯಕ್ಷತೆಯಲ್ಲಿ ಹಳೆಗನ್ನಡ ಸಾಹಿತ್ಯ : ಮರುಸೃಷ್ಠಿಯ ಸವಾಲುಗಳು ಇದರ ಬಗ್ಗೆ ಗೋಷ್ಠಿ ನಡೆಯಲಿದ್ದು, ಸಂಜೆ 4.15 ಕ್ಕೆ ಡಾ.ಪಿ.ವಿ.ನಾರಾಯಣ ಅವರ ಅಧ್ಯಕ್ಷತೆಯಲ್ಲಿ 9 ಮತ್ತು 10 ನೇ ಶತಮಾನದ ಸಾಹಿತ್ಯದ ಅನನ್ಯತೆ ಇದರ ಬಗ್ಗೆ ಗೋಷ್ಠಿ ನಡೆಯಲಿದೆ.
ನಂತರ 6.15 ರಿಂದ ರೋಹನ್ ಅಯ್ಯರ್ ಅವರಿಂದ ಭಾವಗೀತೆಗಳು ಮತ್ತು ಬೆಂಗಳೂರಿನ ಸಮುದಾಯ ತಂಡದಿಂದ ಪ್ರಮೋದ್ ಶಿಗ್ಗಾಂವ ಅವರ ನಿರ್ದೇಶನದಲ್ಲಿ ಪಂಪ ಭಾರತ ನಾಟಕ ನಡೆಯಲಿದೆ.
26 ರಂದು ಬೆಳಗ್ಗೆ 10 ಗಂಟೆಗೆ ಡಾ.ಶ್ರೀಕಂಠ ಕೂಡಿಗೆ ಅವರ ಅಧ್ಯಕ್ಷತೆಯಲ್ಲಿ 11 ನೇ ಶತಮಾನದ ಸಾಹಿತ್ಯ:ಹಿಂಸೆ ಅಹಿಂಸೆಗಳ ನಿರ್ವಹಣೆ ವಿಷಯದ ಕುರಿತು ಗೋಷ್ಠಿ ಜರುಗಲಿದೆ. 12 ಕ್ಕೆ ಡಾ.ಎಸ್.ಪಿ.ಪದ್ಮಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಕನ್ನಡ ಶಾಸ್ತ್ರ ಕೃತಿಗಳು : ಮರು ಓದು ವಿಷಯದ ಕುರಿತು ಗೋಷ್ಠಿ ಜರುಗಲಿದೆ.
ಮಧ್ಯಾಹ್ನ 2.30 ಕ್ಕೆ ಡಾ.ಎಂ.ಎಸ್.ಆಶಾದೇವಿ ಅವರ ಅಧ್ಯಕ್ಷತೆಯಲ್ಲಿ ಹಳಗನ್ನಡ ಸಾಹಿತ್ಯದ ಪ್ರಸ್ತುತತೆ ಕುರಿತು ವಿಷಯ ಮಂಡನೆಯಾಗಲಿದ್ದು, ಸಂಜೆ 4 ಕ್ಕೆ ಪಂಪ, ರನ್ನ ಇವರ ಹಳಗನ್ನಡವನ್ನು ಡಾ.ಶಾಂತಿನಾಥ ದಿಬ್ಬದ ಓದಲಿದ್ದಾರೆ.
4.30 ಕ್ಕೆ ಡಾ.ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನೆರವೇರಲಿದೆ.
ಲೋಕೊಪಯೋಗಿ ಸಚಿವ ಎಚ್.ಡಿ.ರೇವಣ್ಣ, ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ, ಸಮ್ಮೇಳನಾಧ್ಯಕ್ಷ ಡಾ.ಷ.ಶೆಟ್ಟರ್ ಮತ್ತು ಡಾ.ಸಿದ್ದಲಿಂಗಯ್ಯ ಭಾಗವಹಿಸಲಿದ್ದಾರೆ.
ಸಂಜೆ 6.30 ರಿಂದ ಶಿಗ್ಗಾವಿಯ ಶ್ರೀ ಸನ್ಮತಿ ಮಹಿಳಾ ಜಾನಪದ ಕಲಾ ತಂಡ ಮತ್ತು ಶ್ರವಣಬೆಳಗೊಳ ಅಂಬಿಕಾ ಜಾನಪದ ಕಲಾತಂಡದ ವತಿಯಿಂದ ಜಾನಪದ ಗೀತ ಗಾಯನ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications