ಲೋಕಸಭಾ ಚುನಾವಣೆ 2024: ಹಾಸನದಲ್ಲಿ ಪುತ್ರನ ಪರ ಮತಯಾಚನೆಗಿಳಿದ ಭವಾನಿ ರೇವಣ್ಣ
ಹಾಸನ, ಮಾರ್ಚ್ 19: ಹಾಸನದಲ್ಲಿ ಲೋಕಸಭಾ ಚುನಾವಣೆಯ ಕಣ ರಂಗೇರಿದೆ. ಕಾಂಗ್ರೆಸ್ ಮಣಿಸಲು ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು, ಹಾಸನ, ಮಂಡ್ಯ ಹಾಗೂ ಕೋಲಾರ ಲೋಕಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಸ್ಪರ್ಧೆಗಳಿಸುವ ಬಗ್ಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹೀಗಾಗಿ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಆರಂಭವಾಗಿದೆ.
ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ, ಭವಾನಿ ರೇವಣ್ಣ ಮತಯಾಚನೆ ಗಿಳಿದಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಭವಾನಿ ರೇವಣ್ಣ 'ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ರೇವಣ್ಣ ಅಭ್ಯರ್ಥಿಯಾಗಿದ್ದಾರೆ. ಹಾಸನದಲ್ಲಿ ವಕೀಲರ ಸಂಘದಲ್ಲಿ ವಕೀಲರನ್ನು ಭೇಟಿ ಮಾಡಿ ಪ್ರಚಾರ ಮಾಡಿದ್ದೇವೆ. ಎಲ್ಲರಿಗೂ ಮತ ಕೊಡಿ ಎಂದು ಕೇಳಿದ್ದೇವೆ' ಎಂದರು.

'ಕಳೆದ ಐದು ವರ್ಷದಿಂದ ಸಾಕಷ್ಟು ಅನುದಾನ ತಂದಿದ್ದಾರೆ. ಕೊರೊನಾ ಕಾರಣದಿಂದ ಎರಡು ವರ್ಷ ಕೇಂದ್ರ ಸರ್ಕಾರ ಅನುಧಾನ ಕೊಡಲಿಲ್ಲ. ಆಮೇಲೆ ಎಲ್ಲಾ ಕೆಲಸಗಳಿಗೂ ಅನುದಾನ ಕೊಟ್ಟಿದ್ದಾರೆ. ರೇವಣ್ಣ ಮಾಡಿರುವ ಕೆಲಸ ಕಣ್ಮುಂದೆ ನಿದರ್ಶನವಾಗಿ ನಿಂತಿದೆ. ಕೋರ್ಟ್, ಸಾರಿಗೆ ಬಸ್ ನಿಲ್ದಾಣ ರೇವಣ್ಣ ಅವರ ಕೊಡುಗೆ' ಎಂದು ಹೇಳಿದರು.
'ಕಳೆದ ವಾರ ನಿತಿನ್ ಗಡ್ಕರಿ ಬಂದಾಗ ರೇವಣ್ಣ ಅವರಿಗೆ ಕರೆ ಮಾಡಿ ಕಾರ್ಯಕ್ರಮಕ್ಕೆ ಕರೆಸಿಕೊಂಡಿದ್ದರು. ಹಾಸನ ಜಿಲ್ಲೆಗೆ 4,500 ಕೋಟಿ ಅನುದಾನ ಕೊಟ್ಟಿದ್ದಾರೆ. ದೇವೇಗೌಡರು, ರೇವಣ್ಣ ಅವರು ಖುದ್ದಾಗಿ ಹೋಗಿ ಗಡ್ಕರಿ ಅವರನ್ನು ಭೇಟಿ ಮಾಡಲಾಗಿ ಹಾಸನಕ್ಕೆ ಅನುದಾನ ಕೊಟ್ಟಿದ್ದಾರೆ. ಅದು ಬಹಳ ಸಂತೋಷದ ವಿಷಯ' ಎಂದರು.
'ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ದಿನ ನಿತ್ಯ ನೋಡುತ್ತಿದ್ದೇವೆ. ಮೋದಿಯವರ, ದೇವೇಗೌಡರ, ಜನಗಳ ಆಶೀರ್ವಾದ ಬೇಡುತ್ತಾ, ಪ್ರಜ್ವಲ್ ರೇವಣ್ಣ ಅವರಿಗೆ ಮತ ಕೇಳುತ್ತಿದ್ದೇನೆ. ನಾನು ಎಲ್ಲಿಲ್ಲಿ ಹೋಗಲು ಸಾಧ್ಯವಾಗುತ್ತದೆ, ಅಲ್ಲಿ ಹೋಗಿ ಪ್ರಚಾರ ಮಾಡುತ್ತೇನೆ' ಎಂದು ಹಾಸನ ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಭವಾನಿ ರೇವಣ್ಣ ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications