ಮಾಳೆಕೊಪ್ಪಲು ಗ್ರಾಮದಲ್ಲಿ ಬೃಹತ್ ಮರ ಉರುಳಿ ಬೈಕ್ ಸವಾರ ಸಾವು
ಹಾಸನ, ಆಗಸ್ಟ್ 07: ಭಾರೀ ಗಾಳಿ, ಮಳೆಯಿಂದಾಗಿ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದಿದ್ದು, 40 ವರ್ಷದ ರಂಗಶೆಟ್ಟಿ ಎಂಬುವವರು ನರಳಾಡಿ ಪ್ರಾಣ ಬಿಟ್ಟಿದ್ದಾರೆ.
ಚನ್ನರಾಯಪಟ್ಟಣದಿಂದ ಬೈಕ್ನಲ್ಲಿ ತೆರಳುತ್ತಿದ್ದಾಗ ಬೃಹತ್ ಮರ ಬಿದ್ದಿದ್ದು, ಕಲ್ಲೇಸೋಮನಹಳ್ಳಿ ಗ್ರಾಮದ 40 ವರ್ಷದ ರಂಗಶೆಟ್ಟಿ ಎಂಬಾತ ಸ್ಥಳದಲ್ಲೇ ನರಳಾಡಿ ಸಾವನಪ್ಪಿದ್ದಾನೆ. ರಂಗಶೆಟ್ಟಿ ಎಂಬುವರು ಚನ್ನರಾಯಪಟ್ಟಣದಿಂದ ಬೈಕ್ನಲ್ಲಿ ಕಲ್ಲೇಸೋಮನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಬೃಹತ್ ಗಾತ್ರದ ಮರವೊಂದು ಆತನ ಮೇಲೆ ಬಿದ್ದಿದೆ. ಬೈಕ್ ಹಾಗೂ ಮರದ ನಡುವೆ ಸಿಲುಕಿದ ರಂಗಶೆಟ್ಟಿ ಅರ್ಧಗಂಟೆಗೂ ಹೆಚ್ಚು ಹೊತ್ತು ನರಳಾಡಿ ತನ್ನನ್ನ ರಕ್ಷಿಸುವಂತೆ ಅಂಗಲಾಚಿದ್ದಾರೆ.
ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿದ್ದು, ರಂಗಶೆಟ್ಟಿಯನ್ನು ರಕ್ಷಿಸಲು ಮಾತ್ರ ಸಾಧ್ಯವಾಗಿಲ್ಲ. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಂದು ಪ್ರಥಮ ಚಿಕಿತ್ಸೆ ನೀಡಿದರೂ ಆತನನ್ನು ಜೀವಂತವಾಗಿ ಉಳಿಸಲು ಸಾಧ್ಯವಾಗಲಿಲ್ಲ. ರಂಗಶೆಟ್ಟಿ ನರಳಾಡುತ್ತಿದ್ದ, ದೃಶ್ಯ ಕಂಡು ಸ್ಥಳದಲ್ಲಿದ್ದವರು ಮರುಗಿದರು. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ 2 ಜೆಸಿಬಿ, ಹಿಟಾಚಿ ಯಂತ್ರ ಬಳಸಿ ರಂಗಶೆಟ್ಟಿ ಮೃತದೇಹವನ್ನು ಹೊರತೆಗೆದರು. ನಂತರ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ರವಾನಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮರದ ಕೆಳಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಲು ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಕೆಲಕಾಲ ರಸ್ತೆ ತಡೆದು, ಮರ ತೆರವುಗೊಳಿಸಲು ಬಿಡದೆ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಳೇ ಕಾಲದ ಮರವನ್ನು ತೆರವುಗೊಳಿಸುವಂತೆ ಕೆಲ ದಿನಗಳ ಹಿಂದೆ ಅರಣ್ಯ ಇಲಾಖೆಗೆ ಗ್ರಾಮ ಪಂಚಾಯಿತಿ ವತಿಯಿಂದ ಮನವಿ ಸಲ್ಲಿಸಿದ್ದರೂ ಕೂಡ ಇದುವರೆಗೂ ತೆರವುಗೊಳಿಸಿಲ್ಲ.
ಪ್ರತಿನಿತ್ಯ ಬಸ್ ಸೇರಿದಂತೆ ಇತರೆ ವಾಹನಗಳನ್ನು ಹತ್ತಲು ಇದೇ ಮರದ ಕೆಳಗೆ ನೂರಾರು ವಿದ್ಯಾರ್ಥಿಗಳು ನಿಲ್ಲುತ್ತಾರೆ. ಇಂದು ಭಾನುವಾರವಾಗಿದ್ದರಿಂದ ಮಕ್ಕಳು ಶಾಲಾ-ಕಾಲೇಜಿಗೆ ಹೋಗಿಲ್ಲ. ಈ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರು ಆಗಮಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದು ಕುಳಿತಿದ್ದರು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications