ಜೆಡಿಎಸ್ ಭದ್ರಕೋಟೆ ಕೆಡವಿದ ಸಿಮೆಂಟ್ ಮಂಜು... ಸಕಲೇಶಪುರದಲ್ಲಿ ಅರಳಿದ ಕಮಲ
ಬೆಂಗಳೂರು: ಜೆಡಿಎಸ್ ಭದ್ರಕೋಟೆಗಳು ಒಂದೊಂದಾಗಿ ಕೈ ಜಾರುತ್ತಿವೆ. ಸಕಲೇಶಪುರದಲ್ಲಿ ಜೆಡಿಎಸ್ಗೆ ಈ ಬಾರಿ ಸೆಡ್ಡು ಹೊಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಕಳೆದ ಮೂರು ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣೆ ಹಿಡಿದ ಜೆಡಿಎಸ್ಗೆ ಇದು ದೊಡ್ಡ ಆಘಾತವೆಂದೇ ಹೇಳಬಹುದು.
ಜೆಡಿಎಸ್ನ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ಕೆ ಕುಮಾರಸ್ವಾಮಿ ಅವರ ವಿರುದ್ಧ ಬಿಜೆಪಿಯ ಸಿಮೆಂಟ್ ಮಂಜು ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣೆಗೂ ಮುನ್ನ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿದ್ದವು. ಅಭಿವೃದ್ಧಿಯನ್ನೇ ಕಾರಣವಾಗಿ ಇಟ್ಟುಕೊಂಡೇ ಜೆಡಿಎಸ್ ಅನ್ನು ಸೋಲಿಸಲು ಮಾಡಿದ ತಂತ್ರಗಳು ಈಗ ಬಿಜೆಪಿಗೆ ಫಲ ನೀಡಿವೆ.

ಭರ್ಜರಿ ಗೆಲುವಿಗೆ ಸಂಭ್ರಾಮಾಚರಣೆ ಮಾಡುತ್ತಿರುವ ಸಿಮೆಂಟ್ ಮಂಜು, ಈ ಗೆಲುವು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಜನತೆಯ ಪಾದಕ್ಕೆ ಅರ್ಪಣೆ. ಇಂತಿ ನಿಮ್ಮ ಮನೆ ಮಗ ಸಿಮೆಂಟ್ ಮಂಜು ಎಂದು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ. ಒಟ್ಟಾರೆ ಕಳೆದ 2018 ರ ಚುನಾವಣೆಯಲ್ಲಿ ಸೋತರೂ ಈಗ ಬಿಜೆಪಿ ಸಕಲೇಶಪುರವನ್ನು ತನ್ನದಾಗಿಸಿಕೊಂಡಿದೆ.
ಕಳೆದ ಚುನಾವಣೆಯಲ್ಲಿ ಬಿಜೆಪಿಯ ಸೋಮಶೇಖರ್ ನಾರ್ವೇ ಅವರು ಸೋತಿದ್ದರು. ಜೆಡಿಎಸ್ನ ಎಚ್.ಕೆ ಕುಮಾರಸ್ವಾಮಿ ಅವರು 62,262 ಬಹುಮತಗಳಿಂದ ಗೆದ್ದಿದ್ದರು. 2008 ರಿಂದ ಮೂರು ಬಾರಿ ಜೆಡಿಎಸ್ ಅನ್ನು ಅಧಿಕಾರಕ್ಕೆ ತರುವಲ್ಲಿ ಎಚ್.ಕೆ ಕುಮಾರಸ್ವಾಮಿ ಪಾತ್ರ ಮಹತ್ವದ್ದು. ಅವರ ಈ ವರ್ಚಸ್ಸೆ ಈ ಬಾರಿಯು ಕೈ ಹಿಡಿಯಲಿದೆ ಎಂದು ಜೆಡಿಎಸ್ ನಂಬಲಾಗಿತ್ತು. ಆದರೆ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿವೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications