'ಮಾತು ಕೊಟ್ರೆ ದೇವಸ್ಥಾನ ಕಟ್ಟಿಸಿಕೊಡ್ತೇನೆ' ಗ್ರಾಮಸ್ಥರಿಗೆ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಆಮಿಷ
ಹಾಸನ, ಏಪ್ರಿಲ್ 28: ಹಾಸನದಲ್ಲಿ ಚುನಾವಣಾ ಕಣ ರಂಗೇರಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಹಾಗೂ ಜೆಡಿಎಸ್ ಎಚ್.ಪಿ ಸ್ವರೂಪ್ ನಡುವೆ ಜಿದ್ದಾಜಿದ್ದಿಯ ಪೈಪೋಟಿ ಇದ್ದು, ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಶತ ಪ್ರಯತ್ನ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಮತದಾರರಿಗೆ ಆಮಿಷವೊಡ್ಡಿರುವ ಆರೋಪ ಕೇಳಿ ಬಂದಿದೆ.
ಹಾಸನ ತಾಲೂಕಿನ ಸಾಲಗಾಮೆ ಹೋಬಳಿಯ ಮಲ್ಲನಾಯಕನಹಳ್ಳಿಯಲ್ಲಿ ಬುಧವಾರ ನಡೆದ ಬಿಜೆಪಿ ರೋಡ್ ಶೋನಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಮುಂದೆ ಗ್ರಾಮಸ್ಥರು ದೇವಸ್ಥಾನ ಕಟ್ಟಿಸಿಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಗ್ರಾಮಸ್ಥರ ಬೇಡಿಕೆ ಆಲಿಸಿ ಮಾತನಾಡಿದ ಶಾಸಕ ಪ್ರೀತಂ ಗೌಡ, 'ಊರಲ್ಲಿ ಎಷ್ಟು ಓಟು ಇದೆಯಣ್ಣ, ನಿಮ್ಮೂರಿನಲ್ಲಿ ಹೇಳಿ ಬೂತ್ನಲ್ಲಿ ಬೇಡ' ಎಂದಿದ್ದಾರೆ. ಈ ವೇಳೆ ಯುವಕನೊಬ್ಬ 150 ಮತ ಇದೆ ಎಂದಿದ್ದಾನೆ.

ಮಾತು ಮುಂದುವರಿಸಿದ ಪ್ರೀತಂ ಗೌಡ, 150 ಮತಗಳಲ್ಲಿ ಓಟಿಂಗ್ ಆಗೋದು 120, 130 ಅಲ್ವೇನಣ್ಣ, 120, 130ಕ್ಕೆ ಎಷ್ಟು ಓಟು ಹಾಕ್ತಿರಾ ಹೇಳಿ, ಒಂದು ಲೆಕ್ಕಾ ಇರಲಿ. 65- 70 ಓಟು ಹಾಕುತ್ತೇವೆ ಎಂದು ನಮ್ಮ ಹಿರಿಯರು, ನಮ್ಮ ತಾಯಂದಿರು ಎಲ್ಲಾ ಸೇರಿ ಹೇಳುತ್ತಿದ್ದಾರೆ. ದೇವಸ್ಥಾನದ ವಿಚಾರದಲ್ಲಿ ಯಾರು ಸುಳ್ಳು ಹೇಳುವುದಿಲ್ಲ. 70 ಜನ ಯಾರು, ಯಾರು ಮತ ಹಾಕುವವರು ಬಂದು ದೇವಸ್ಥಾನದ ಮುಂದೆ ಮಂಗಳಾರತಿ ಮಾಡಿಸಿ, ಗುದ್ದಲಿ ಪೂಜೆ ಮಾಡಿ ಕೆಲಸ ಪ್ರಾರಂಭ ಮಾಡಿಸಿ, ದೇವಸ್ಥಾನ ಮಾಡಿಕೊಡುವುದು ನನ್ನ ಜವಾಬ್ದಾರಿ ಎಂದಿದ್ದಾರೆ.
ಆ ಎಪ್ಪತ್ತು ಜನ ಬಂದು ಪೂಜೆ ಮಾಡಿಸಿ ಪ್ರೀತಂ ಗೌಡರ ಜೊತೆ ಇರುತ್ತೇವೆ. ಓಟು ಹಾಕುತ್ತೇವೆ ಅಂತ ಮಾತು ಕೊಡಿ. ಉಳಿದಿದ್ದು ಕೆಲಸ ನಾನು ಮಾಡುತ್ತೇನೆ. ಎಪ್ಪತ್ತಕ್ಕಿಂತ ಕಡಿಮೆ ಓಟು ಬಂದರೆ ಚುನಾವಣೆ ಆದ ಮೇಲೆ ಮಾತಾಡುತ್ತೇನೆ. ಯಾರು ಎಪ್ಪತ್ತು ಜನ ಅಂತ ಈಗ ಕರೆದು ಪೂಜೆ ಮಾಡಿಸಿ ಏಕೆಂದರೆ ನನಗೆ ನೆಂಟಸ್ಥನದ್ದು ಕಾಟ ಜಾಸ್ತಿ ನನಗೆ ಎಂದಿದ್ದಾರೆ.

ಹಾಸನದಲ್ಲಿ ಇರುತ್ತಾರೆ ಚುನಾವಣೆ ಬಂದ ತಕ್ಷಣ ಇಲ್ಲಿ ಬಂದು ನೆಂಟಸ್ಥನ ಮಾಡಿಕೊಂಡು, ನಮ್ಮ ಅಣ್ಣ ತಮ್ಮ, ಅವರು ನನಗೆ, ನೆಂಟರು, ಇವರು ನನಗೆ ನೆಂಟರು ಅಂತ ಬೇರೆ ಪಕ್ಷದ ಕಡೆಗೆ ಮುಖ ಮಾಡಿದರೆ. ನಾನು ಮಾಡಿದ ಕೆಲಸಕ್ಕೆ ಕೂಲಿ ಕೊಡುವುದು ಯಾರು ಎಂದು ಪ್ರಶ್ನಿಸಿದ್ದಾರೆ.
ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಎಪ್ಪತ್ತು ಜನನು ಮಂಗಳಾರತಿ ಮಾಡಿ. ಪ್ರೀತಂ ಗೌಡಂಗೆ ಓಟು ಹಾಕುತ್ತೇವೆ ಅಂತ ತೀರ್ಮಾನ ಮಾಡಿ ಕೆಲಸ ಮಾಡಿಕೊಡುವುದು ನನ್ನ ಜವಾಬ್ದಾರಿ ಎಂದು ಮತದಾರರಿಗೆ ಆಮಿಷವೊಡ್ಡಿದ್ದಾರೆ ಎನ್ನಲಾಗಿದೆ. ಮಲ್ಲನಾಯಕನಹಳ್ಳಿಯು ದಿ.ಎಚ್.ಎಸ್.ಪ್ರಕಾಶ್ ಅವರ ಸಂಬಂಧಿಕರು ಹೆಚ್ಚಿರುವ ಊರು ಹೀಗಾಗಿ ಗ್ರಾಮದಲ್ಲಿ ಪ್ರಚಾರ ಮಾಡುವ ವೇಳೆ ಸ್ವರೂಪ್ ಹೆಸರು ಹೇಳದೆ ಪರೋಕ್ಷವಾಗಿ ಅವರ ಸಂಬಂಧಿಕರು ಎನ್ನುವ ಕಾರಣಕ್ಕೆ ಮತ ಹಾಕಬೇಡಿ ಎಂದು ಪ್ರೀತಂ ಗೌಡ ಹೇಳಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications