ಅರಕಲಗೂಡಿನ ಅಂಗನವಾಡಿ ಬಳಿ ವಾಮಾಚಾರ; ಮಕ್ಕಳನ್ನು ಕಳಿಸಲು ಹಿಂದೇಟು
ಅರಕಲಗೂಡು, ಜುಲೈ 4: ಅಂಗನವಾಡಿ ಸಮೀಪ ಕಿಡಿಗೇಡಿಗಳು ವಾಮಾಚಾರ ಮಾಡಿರುವ ಘಟನೆ ಅರಕಲಗೂಡಿನ ನಯ ನಕ್ಷತ್ರ ಬೀದಿಯಲ್ಲಿ ನಡೆದಿದೆ.
ಅಮಾವಾಸ್ಯೆ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಪಟ್ಟಣದ 5ನೇ ವಾರ್ಡ್ ನ ನಯ ನಕ್ಷತ್ರ ಬೀದಿ ಮತ್ತು ಜನತಾ ಕ್ವಾಟ್ರಸ್ ಗೆ ಹೊಂದಿಕೊಂಡಿರುವ ಅಂಗನವಾಡಿ ಕೇಂದ್ರದ ಪಕ್ಕದಲ್ಲಿ ನಿಂಬೆ ಹಣ್ಣು, ಅನ್ನ ಹಾಕಿ ಕೋಳಿಯನ್ನು ವಾಮಾಚಾರ ಮಾಡಿ ಸ್ಥಳದಲ್ಲೇ ಬಿಟ್ಟು ಹೋಗಿದ್ದಾರೆ. ಬೆಳಿಗ್ಗೆ ಅಂಗನವಾಡಿಗೆ ತೆರಳಿದ ಸಂದರ್ಭ ಇದು ಕಂಡು ಬಂದಿದ್ದು, ಅಂಗನವಾಡಿ ಶಿಕ್ಷಕಿ ಮತ್ತು ಮಕ್ಕಳು ಭಯಗೊಂಡಿದ್ದಾರೆ. ತಕ್ಷಣ ಸುತ್ತಮುತ್ತಲಿನ ಜನ ಅಲ್ಲಿ ನೆರೆದಿದ್ದಾರೆ.
ಇದರಿಂದ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಕ್ಕೆ ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಅಂಗನವಾಡಿ ಕೇಂದ್ರದ ಸುತ್ತ ಸ್ವಚ್ಛತೆ ಇಲ್ಲದ ಕಾರಣದಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು ದೂರಿರುವ ಪೋಷಕರು, ಚರಂಡಿಯನ್ನು ಸ್ವಚ್ಛಗೊಳಿಸುವಂತೆ ಆಗ್ರಹಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪ್ರಭಾರಿ ಸಿಡಿಪಿಒ ಶಿವಕುಮಾರ್ ಮತ್ತು ಪಟ್ಟಣ ಪಂಚಾಯಿತಿ ಆರೋಗ್ಯ ಅಧಿಕಾರಿ ನಿಂಗರಾಜ್, ಸ್ಥಳದಲ್ಲಿದ್ದ ವಾಮಾಚಾರದ ವಸ್ತುಗಳನ್ನು ತೆರವುಗೊಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಸಿಡಿಪಿಒ ಶಿವಕುಮಾರ್, ವಾಮಾಚಾರದಂತಹ ಕೃತ್ಯಗಳನ್ನು ಮಾಡುತ್ತಿರುವುದು ಸರಿಯಲ್ಲ, ಇದು ಮೂಢನಂಬಿಕೆ. ಯಾರೂ ನಂಬಬಾರದು. ಅಲ್ಲದೇ ಪೋಷಕರು ಇವುಗಳಿಗೆ ಕಿವಿ ಕೊಡದೆ ಎಂದಿನಂತೆ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವಂತೆ ಮನವಿ ಮಾಡಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications