Suraj Revanna: ಎಂಎಲ್ಸಿ ಸೂರಜ್ ರೇವಣ್ಣ ಕೇಸ್ ಸಿಐಡಿಗೆ ಹಸ್ತಾಂತರ
ಹಾಸನ, ಜೂನ್ 23: ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಪುತ್ರ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧಿಸಲಾಗಿದೆ. ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿದೆ.
ಭಾನುವಾರ ಮುಂಜಾನೆ ಹಾಸನದ ಹೊಳೆನರಸೀಪುರದ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರರಕಣದ ಸಂಬಂಧ ಸೂರಜ್ ರೇವಣ್ಣ ಬಂಧಿಸಲಾಗಿದೆ. ಸದ್ಯ ಆರೋಪಿಯ ವೈದ್ಯಕೀಯ ಪರೀಕ್ಷೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆಯುತ್ತಿದೆ.

ಈ ನಡುವೆ ಕರ್ನಾಟಕ ಸರ್ಕಾರ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶಿಸಿದೆ. ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 377, 342, 506 ಅಡಿ ಕೇಸ್ ದಾಖಲಾಗಿದ್ದು, ಸದ್ಯ ಆರೋಪಿ ಹಾಸನ ಪೊಲೀಸರ ವಶದಲ್ಲಿದ್ದಾರೆ.
ಸಿಐಡಿ ತನಿಖೆಗೆ ಆದೇಶ: ಜೆಡಿಎಸ್ ನಾಯಕ, ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವ ಕುರಿತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್. ಹಿತೇಂದ್ರ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಖ್ಯೆ 92/2024 ಅನ್ನು ಮುಂದಿನ ತನಿಖೆಗಾಗಿ ತಕ್ಷಣದಿಂದಲೇ ಸಿಐಡಿಗೆ ವಹಿಸಲಾಗಿದೆ. ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ವಹಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗೆ ಕಡತಗಳನ್ನುಸಿಐಡಿಗೆ ಖುದ್ದಾಗಿ ಹಸ್ತಾಂತರ ಮಾಡಲು ಸೂಚನೆ ನೀಡಬೇಕು. ಸಿಐಡಿ ಡಿಜಿಪಿ ಪ್ರಕರಣದ ತನಿಖೆಗೆ ಅಗತ್ಯವಿರುವ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹಾಸನ ಪೊಲೀಸರು ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ವಿಚಾರಣೆಗಾಗಿ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿದ್ದರು.
ಶನಿವಾರ ಸಂಜೆಯಿಂದ ಭಾನುವಾರ ಮುಂಜಾನೆ 4 ಗಂಟೆವರೆಗೂ ತನಿಖಾಧಿಕಾರಿ ಹಾಸನ ನಗರದ ಸೆನ್ ಠಾಣೆಯಲ್ಲಿ ಸೂರಜ್ ರೇವಣ್ಣ ವಿಚಾರಣೆ ನಡೆಸಿದ್ದರು. ಬಳಿಕ ಅಲ್ಲೇ ಅವರಿಗೆ ಮಲಗಲು ವ್ಯವಸ್ಥೆ ಮಾಡಿದ್ದರು. ಭಾನುವಾರ ಮುಂಜಾನೆ 8 ಗಂಟೆಗೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಯುವಕ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಸೂರಜ್ ರೇವಣ್ಣ ಆಪ್ತ ದೂರು ದಾಖಲು ಮಾಡಿದ್ದಾರೆ. ಈ ಕುರಿತು ವಿವರಣೆ ನೀಡಲು ಠಾಣೆಗೆ ಬಂದಿದ್ದ ಸೂರಜ್ ರೇವಣ್ಣರನ್ನು ಪೊಲೀಸರು ಶನಿವಾರ ತಮ್ಮ ವಶಕ್ಕೆ ಪಡೆದಿದ್ದರು. ಭಾನುವಾರ ಬಂಧಿಸಿದ್ದಾರೆ.
ಸೂರಜ್ ರೇವಣ್ಣ ಹಾಲಿ ವಿಧಾನ ಪರಿಷತ್ ಸದಸ್ಯರು. ಆದ್ದರಿಂದ ಅವರ ವಿರುದ್ಧದ ಪ್ರಕರಣದ ವಿಚಾರಣೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ನಡೆಯಲಿದೆ. ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಧೀಶರ ಮುಂದೆ ಆರೋಪಿಯನ್ನು ಹಾಜರುಪಡಿಸಿ ಬಳಿಕ ಹಾಸನ ಪೊಲೀಸರು ಅವರನ್ನು ಬೆಂಗಳೂರಿಗೆ ಕರೆದುಕೊಂಡು ಬರಲಿದ್ದಾರೆ.
ಬೆಂಗಳೂರಿನ ಸಿಐಡಿ ಕಛೇರಿಗೆ ಸಂಜೆ ಸೂರಜ್ ರೇವಣ್ಣರನ್ನು ಕರೆದುಕೊಂಡು ಬಂದು ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರ ಮಾಡಲಾಗುತ್ತದೆ. ಸೋಮವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಸೂರಜ್ ರೇವಣ್ಣರನ್ನು ಸಿಐಡಿ ಪೊಲೀಸರು ಹಾಜರುಪಡಿಸುವ ಸಾಧ್ಯತೆ ಇದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications