ಎತ್ತಿನಹೊಳೆ ಯೋಜನೆ ಪೂರ್ಣಮಾಡಿಯೇ ತಿರುತ್ತೇವೆ: ಸಿಎಂ

ಹಾಸನ, ಜನವರಿ 04: ಹಾಸನದ ಅರಸೀಕೆರೆಯಲ್ಲಿ 1004 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ರಾಜ್ಯದ ಎಲ್ಲ ವರ್ಗದ, ಜಾತಿಯ ಜನರನ್ನೂ ಒಂದಲ್ಲಾ ಒಂದು ಯೋಜನೆಯ ಮೂಲಕ ತಲುಪಿದ್ದೇವೆ ಎಂದರು.

ಹಿಂದಿನ ಭಾಷಣಗಳಿಗೆ ಹೋಲಿಸಿದರೆ ಬಿಜೆಪಿಯನ್ನು ಕಡಿಮೆ ಟೀಕಿಸಿದ ಸಿದ್ದರಾಮಯ್ಯ ಅವರು ಸರ್ಕಾರದ ಸಾಧನೆ, ಅಭಿವೃದ್ಧಿ ಕಾರ್ಯಗಳು, ರಾಜ್ಯ ಸಾಧಿಸಿರುವ ಉನ್ನತಿಯ ಬಗ್ಗೆ ಹೆಚ್ಚು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಶಿವಲಿಂಗೇಗೌಡ, ಕಾಂಗ್ರೆಸ್ ಶಾಸಕ ಎ ಮಂಜು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅರಸಿಕೆರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಶಿವಪ್ಪ ಹಾಜರಿದ್ದರು.

ಸಿದ್ದರಾಮಯ್ಯ ಅವರ ಭಾಷಣದ ಮುಖ್ಯಾಂಶಗಳು ತಿಳಿಯಲು ಮುಂದೆ ಓದಿರಿ...

ಎತ್ತಿನಹೊಳೆ ಯೋಜನೆ ಪೂರ್ತಿ ಮಾಡಿಯೇ ತೀರುತ್ತೇವೆ

ಎತ್ತಿನಹೊಳೆ ಯೋಜನೆ ಪೂರ್ತಿ ಮಾಡಿಯೇ ತೀರುತ್ತೇವೆ

ಎತ್ತಿನ ಹೊಳೆ ಯೋಜನೆಯ ಬಗ್ಗೆ ಜೆಡಿಎಸ್ ಅಪಪ್ರಚಾರ ಮಾಡುತ್ತಿದೆ, ಅದು ವೈಜ್ಞಾನಿಕವಾಗಿಲ್ಲ ಯೋಜನೆಯಿಂದ ನೀರು ಸಿಗುವುದಿಲ್ಲ ಎಂದು ಕುಮಾರಸ್ವಾಮಿ ತೋಚಿದ್ದು ಹೇಳುತ್ತಿದ್ದಾರೆ. ಕೇಂದ್ರ ನೀರಾವರಿ ಆಯೋಗದಿಂದ ಹಿಡಿದು, ವಿವಿಧ ಜವಾಬ್ದಾರಿಯುತ ಇಲಾಖೆಗಳು ಅಧ್ಯಯನ ನಡೆಸಿ ವರದಿ ಸಲ್ಲಿಸಿದ ಬಳಿಕವೇ ನಾವು ಯೋಜನೆಗೆ ಕೈಹಾಕಿರುವುದು, ಎತ್ತಿನ ಹೊಳೆ ಯೋಜನೆ ಪೂರ್ಣ ಮಾಡಿಯೇ ತೀರುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಹೇಳ್ರಿ ನಿಮ್ಮ ಪಕ್ಷದವರಿಗೆ

ಹೇಳ್ರಿ ನಿಮ್ಮ ಪಕ್ಷದವರಿಗೆ

ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಸಾಧನೆಯ ಬಗ್ಗೆ ಹೇಳಿದಾಗಲೆಲ್ಲಾ 'ಏನ್ರಿ ಶಿವಲಿಂಗೇಗೌಡ ನಾನು ಹೇಳ್ತಿರೋದು ಸರೀನಾ' ಎಂದು ವೇದಿಕೆ ಮೇಲಿದ್ದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರ ಅನುಮೋದನೆ ಪಡೆದುಕೊಳ್ಳುತ್ತಿದ್ದರು. ನಿಮ್ಮ ಪಕ್ಷದವರಿಗೂ ಸ್ವಲ್ಪ ಹೇಳ್ರಿ ಸರ್ಕಾರದ ಸಾಧನೆಗಳ ಬಗ್ಗೆ ಸುಮ್ಮನೇ ಟೀಕೆ ಮಾಡ್ತಾರೆ ಎಂದು ಶಿವಲಿಂಗೇಗೌಡರ ಕಾಲೆಳೆದರು.

ಯಡಿಯೂರಪ್ಪ ಹಸಿರು ಶಾಲು ಬಗ್ಗೆ ವ್ಯಂಗ್ಯ

ಯಡಿಯೂರಪ್ಪ ಹಸಿರು ಶಾಲು ಬಗ್ಗೆ ವ್ಯಂಗ್ಯ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಯಡಿಯೂರಪ್ಪ, ಕಟ್ಟಾ ಸುಬ್ರಹ್ಮಣ್ಯನಾಯ್ಡು, ಕೃಷ್ಣಯ್ಯ ಶೆಟ್ಟಿ ಮುಂತಾ ಭ್ರಷ್ಟರನ್ನು ಪಕ್ಕದಲ್ಲೇ ಕೂರಿಸಿಕೊಂಡು ನನ್ನನ್ನು ಭ್ರಷ್ಟಾ ಎನ್ನುತ್ತಾರೆ ನಾಚಿಕೆ ಆಗಬೇಕು ಅವರಿಗೆ ಎಂದರು. ಯಡಿಯೂರಪ್ಪ ಹಸಿರು ಶಾಲು ಹಾಕಿಕೊಂಡು ಪ್ರಮಾಣವಚನ ಸ್ವೀಕರಿಸಿ ಕೊನೆಗೆ ರೈತರ ಮೇಲೆ ಗುಂಡು ಹಾರಿದರು, ಇವರು ರೈತರ ಬಗ್ಗೆ ಮಾತನಾಡುತ್ತಾರೆ ಎಂದು ಜರಿದರೂ. ತಾವೂ ಮುಂಚೆ ಹಸಿರು ಶಾಲು ಹಾಕುತ್ತಿದ್ದುದನ್ನು ನೆನಪಿಸಿಕೊಂಡ ಸಿದ್ದರಾಮಯ್ಯ ಅವರು ನಾನು ಮೈಸೂರಿನಲ್ಲಿ ಮೂರು ವರ್ಷ ರೈತ ಸಂಘದಲ್ಲಿ ಮೂರು ವರ್ಷ ಕಾರ್ಯದರ್ಶಿ ಆಗಿದ್ದೆ ಎಂದರು.

ಮೋದಿ ಅವರನ್ನು ಬೇಡಿಕೊಂಡರೂ ಕರಗಲಿಲ್ಲ

ಮೋದಿ ಅವರನ್ನು ಬೇಡಿಕೊಂಡರೂ ಕರಗಲಿಲ್ಲ

ರಾಜ್ಯದಲ್ಲಿ 16 ವರ್ಷಗಳಲ್ಲಿ 13 ವರ್ಷಗಳು ಬರಗಾಲವಿದೆ ರಾಜ್ಯದ ನೆರವಿಗೆ ಬನ್ನಿ ಎಂದು ಕೇಂದ್ರವನ್ನು ಪರಿಪರಿಯಾಗಿ ಕೇಳಿಕೊಂಡರೂ ಮೋದಿ ಮನಸ್ಸು ಕರಗಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ರೈತರ ಸಾಲ ಮನ್ನಾ ಮಾಡುವ ಬಗ್ಗೆಯೂ ಮೋದಿ ಮನಸ್ಸು ಮಾಡಲಿಲ್ಲ ಎಂದ ಅವರು, ಒಮ್ಮೆ ಬಿಜೆಪಿಯ ಜಗದೀಶ್ ಶೆಟ್ಟರ್, ಸದಾನಂದಗೌಡ, ಈಶ್ವರಪ್ಪ, ಜೆಡಿಎಸ್ ನ ರೇವಣ್ಣ ಎಲ್ಲರ ನಿಯೋಗವನ್ನು ಮೋದಿ ಬಳಿಗೆ ಕರೆದುಕೊಂಡು ಹೋಗಿ ರೈತರ ರಾಷ್ಟ್ರೀಯ ಬ್ಯಾಂಕ್ ಗಳ ಸಾಲ ಮನ್ನಾ ಮಾಡುವಂತೆ ಕೋರಿದ್ದೆ ಆದರೆ ಅವರು ಅದಕ್ಕೆ ಮನಸ್ಸು ಮಾಡಲಿಲ್ಲ ಎಂದರು.

ಅವ್ನು ಅಲ್ಲೇ ಇರ್ಲಿ, ನಾನು ಇಲ್ಲೇ ಇರ್ತೀನಿ

ಅವ್ನು ಅಲ್ಲೇ ಇರ್ಲಿ, ನಾನು ಇಲ್ಲೇ ಇರ್ತೀನಿ

ಜೆಡಿಎಸ್ ಶಿವಲಿಂಗೇಗೌಡ ಅವರನ್ನು ಹೊಗಳಿದ ಸಿದ್ದರಾಮಯ್ಯ ಅವರು, ಶಿವಲಿಂಗೇಗೌಡ ನನ್ನ ಆತ್ಮೀಯ ಗೆಳೆಯ ಆತ ಒಳ್ಳೆ ಮನುಷ್ಯ, ನನ್ನ ಮಾತು ಕೇಳುತ್ತಾನೆ, ಒಳ್ಳೆ ಕೆಲಸಗಾರ ಎಂದು ಹೊಗಳಿದರು. ಆಗ ವೇದಿಕೆ ಮುಂದಿದ್ದ ಜನರು ಶಿವಲಿಂಗೇಗೌಡರನ್ನು ಕಾಂಗ್ರೆಸ್ ಗೆ ಕರೆಯಿರಿ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಬೇಡ ಬೇಡ ಆತ ಈಗ ಎಲ್ಲಿದ್ದಾನೊ ಅಲ್ಲೇ ಇರಲಿ ನಾನು ಎಲ್ಲಿದ್ದೀನೊ ಅಲ್ಲೇ ಇರ್ತೀನಿ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+