ಸಕಲೇಶಪುರದಲ್ಲೂ ಕಾಫಿ ಕೊಯ್ಲಿಗೆ ಭಾರೀ ಸಮಸ್ಯೆ: ಏನೇ ಆಫರ್ ನೀಡಿದ್ರೂ ಸಿಗ್ತಿಲ್ಲ ಕಾರ್ಮಿಕರು
ಹಾಸನ, ಜನವರಿ 31: ರಾಜ್ಯದಲ್ಲಿ ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕಾಫಿ ಬೆಳೆಯಲಾಗುತ್ತದೆ. ಅಕಾಲಿಕ ಮಳೆ, ಕಾಡಾನೆಗಳ ಕಾಟ ಹಾಗೂ ಇತರ ಸಮಸ್ಯೆಗಳನ್ನು ದಾಟಿ ಒಂದಿಷ್ಟು ಬೆಳೆ ಉಳಿಸಿಕೊಂಡ ಕಾಫಿ ತೋಟದ ಮಾಲೀಕರಿಗೆ ಈ ವರ್ಷ ಮತ್ತೊಂದು ಬಹುದೊಡ್ಡ ಸವಾಲು ಎದುರಾಗಿದೆ. ಉತ್ತಮ ಬೆಲೆ ಇದ್ದರೂ ಕೂಡ ಕಾಫಿ ಕೊಯ್ಲು ಮಾಡಿ ಮಾರುಕಟ್ಟೆ ಮುಟ್ಟಿಸದಂತಾಗಿದೆ.
ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕಾಫಿ ಕೊಯ್ಲು ಆರಂಭವಾಗಿ ತಿಂಗಳು ಕಳೆಯುತ್ತಾ ಬಂದರೂ ಬಹುತೇಕ ಕಡೆ ಇನ್ನು ಕಾರ್ಮಿಕರ ಕೊತೆರೆಯಿಂದ ಕೊಯ್ಲು ಆರಂಭವಾಗಿಲ್ಲ. ಮೊದಲು ಕೊಡಗಿನಲ್ಲಿ ಆರಂಭವಾದ ಕಾಫಿ ಕೀಳುವ ಕಾರ್ಮಿಕರ ಕೊರತೆ ಈಗ ಹಾಸನ ಜಿಲ್ಲೆಯ ಸಕಲೇಶಪುರದಲ್ಲೂ ಹೆಚ್ಚಾಗಿದ್ದು, ಕಾರ್ಮಿಕರು ಸಿಗದೇ ಕಾಫಿ ತೋಟದ ಮಾಲೀಕರರು ಹಾಗೂ ಮ್ಯಾನೇಜರ್ಗಳು ಹೈರಾಣಾಗಿ ಹೋಗಿದ್ದಾರೆ.

ಕಾಫಿ ಹಣ್ಣಾಗುವ ಕಾಲ ಶುರುವಾಗಿದ್ದು, ಎಲ್ಲಾ ಗಿಡಗಳಲ್ಲೂ ಕೊಯ್ಲಿಗೆ ಬಂದ ಹಣ್ಣುಗಳು ಕಾಣುತ್ತಿವೆ. ಸ್ಪಲ್ಪ ಸಮಯ ಬಿಟ್ಟರೆ ಕಾಫಿ ಹಣ್ಣಾಗಿ ಗಿಡದಿಂದ ಬಿದ್ದು ಹೋಗುತ್ತದೆ. ಹೀಗಾಗಿ ಸೂಕ್ತ ಸಮಯಕ್ಕೆ ಅವುಗಳನ್ನು ಗಿಡದಿಂದ ಕೀಳಬೇಕು. ಆದರೆ ಕಾಫಿ ಕೀಳಲು ಕಾರ್ಮಿಕರು ಸಿಗದೆ ತೋಟದ ಮಾಲೀಕರು ಪರದಾಡುತ್ತಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಅರೇಬಿಕಾ ಕಾಫಿ ಕೊಯ್ಲು ವಿಳಂಬವಾಗಿತ್ತು. ಈ ವೇಳೆ ಕಾರ್ಮಿಕರಿಗೆ ಕೊಡಗಿನಲ್ಲಿ ಭಾರಿ ಬೇಡಿಕೆ ಉಂಟಾಗಿತ್ತು. ಹೀಗಾಗಿ ಕೊಡಗಿ ಕಾಫಿ ತೋಟದ ಮಾಲೀಕರರು ಮಹಿಳೆಯರ ದಿನದ ವೇತನ 415 ರೂಪಾಯಿ ಹಾಗೂ ಪುರುಷರ ದಿನದ ವೇತನ 615 ರೂಪಾಯಿ ನಿಡುವುದಾಗಿ ಆಫರ್ ನೀಡಿದ್ದರು. ನಿಗದಿತ ಸಮಯಕ್ಕಿಂತ ಜಾಸ್ತಿ ಕೆಲಸ ಮಹಿಳೆಯರು ಮತ್ತು ಪುರುಷರಿಗೆ ಹೆಚ್ಚಿನ ಸಂಬಳ ನೀಡುವುದಾಗಿ ತಿಳಿಸಿದ್ದರು.

ಕೊಡಗಿನ ಕಾಫಿ ತೋಟದ ಮಾಲೀಕರ ಆಫರ್ಗೆ ಒಪ್ಪಿಕೊಂಡ ಸ್ಥಳೀಯ ಹಾಗೂ ಹೊರ ರಾಜ್ಯದ ಕಾರ್ಮಿಕರು ಕೊಡಗಿನತ್ತ ತೆರಳಿದ್ದಾರೆ. ಹೀಗಾಗಿ ಸಕಲೇಶಪುರ ಭಾಗದಲ್ಲಿ ಕಾರ್ಮಿಕರ ಕೊರತೆ ಉಂಟಾಗಿದೆ. ಸಕಲೇಶಪುರ ತಾಲೂಕಿನ ಶೇ.80 ಭಾಗದಲ್ಲಿ ರೋಬಸ್ಟಾ ಕಾಫಿ ಬೆಳೆಯಲಾಗುತ್ತದೆ. ವನ್ಯ ಜೀವಿಗಳ ಕಾಟ ಅಕಾಲಿಕ ಮಳೆಯಿಂದ ಈ ವರ್ಷ ಶೇ.50 ರಷ್ಟು ಬೆಳೆ ನಷ್ಟವಾಗಿದೆ. ಉಳಿದ ಬೆಳೆಯನ್ನು ಉಳಿಸಿಕೊಳ್ಳಲು ಮಾಲೀಕರರು ಪರದಾಡುತ್ತಿದ್ದು, ಏನೇ ಆಫರ್ ನೀಡದರೂ ಕೂಡ ಕಾಫಿ ಕೊಯ್ಲು ಮಾಡಲು ಕಾರ್ಮಿಕರು ಸಿಗದಂತಾಗಿದೆ.

ಕಳೆದ ವರ್ಷ ಒಂದು ಟಿನ್ ಕಾಫಿ ಕೊಯ್ಲು ಮಾಡಲು 50 ರೂಪಾಯಿ ಇದ್ದ ದರ ಈ ವರ್ಷ 70 ರೂಪಾಯಿಗೆ ಏರಿಕೆ ಮಾಡಲಾಗಿದೆ. ಅದೇ ರೀತಿ ಕಳೆದ ವರ್ಷ ಹಸಿ ಕಾಫಿ ಕೊಯ್ಲು ಮಾಡಲು ಒಂದು ಕೆಜಿಗೆ ಮೂರು ರೂಪಾಯಿ ಇದ್ದ ದರ ಈ ವರ್ಷ 5 ರಿಂದ 6 ರೂಪಾಯಿ ವರೆಗೆ ಏರಿಕೆ ಮಾಡಲಾಗಿದೆ. ಹೀಗಾಗಿ ಕಾಫಿ ಬೆಳೆಗಾಗರು ಬೆಳೆ ಉಳಿಸಿಕೊಳ್ಳಲು ಶತಪ್ರಯತ್ನ ಪಡುತ್ತಿದ್ದು, ಉತ್ತರ ಕರ್ನಾಟಕದಿಂದ ಕಾರ್ಮಿಕರನ್ನು ಏಜೆಂಟ್ರ್ಗಳ ಮೂಲಕ ಕರೆತರಲು ಮುಂದಾಗಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications