ದೇವೇಗೌಡರ ಕುಟುಂಬದ ಮೇಲೆ ಭೂಕಬಳಿಕೆ ಆರೋಪ ಮಾಡಿದ ಕಾಂಗ್ರೆಸ್ ಮಾಜಿ ಸಚಿವ ಎ.ಮಂಜು
ಹಾಸನ, ಅಕ್ಟೋಬರ್ 10: ಕಾಂಗ್ರೆಸ್-ಜೆಡಿಎಸ್ ಭಾಯಿ-ಭಾಯಿ ಎಂದು ಎಷ್ಟೇ ಹೇಳಿಕೊಂಡರು. ಹಾಸನದಲ್ಲಿ ಮಾತ್ರ ಇವೆರಡೂ ಪಕ್ಷಗಳ ಹಗೆತನ ಹಾಗೆಯೇ ಮುಂದುವರೆದಿದೆ. ಕಾಂಗ್ರೆಸ್ ಮಾಜಿ ಸಚಿವ ಎ.ರೇವಣ್ಣ ಅವರು ದೇವೇಗೌಡರ ಕುಟುಂಬದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೆ ರೇವಣ್ಣ ಅವರ ವಿರುದ್ಧ ಆಸ್ತಿ ಕಬಳಿಕೆಯ ಆರೋಪ ಹೊರಿಸಿದ್ದ ಎ.ಮಂಜು ಇಂದು ಮತ್ತೆ ಅದನ್ನೇ ಮುಂದುವರೆಸಿದ್ದು ಈ ಬಾರಿ ಇನ್ನಷ್ಟು ದೊಡ್ಡ ಲೆಕ್ಕವನ್ನು ತೆರೆದಿಟ್ಟಿದ್ದಾರೆ.
ಇಂದು ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದೇವೇಗೌಡರ ಕುಟುಂಬದವರು ಹಾಸನ ಜಿಲ್ಲೆ ಕಸಬಾ ತಾಲ್ಲೂಕು ಸೋಮನಹಳ್ಳಿ ಕಾವಲು ಬಳಿ 69.19 ಎಕರೆ ಜಮೀನನ್ನು ಅಕ್ರಮವಾಗಿ ಕಬಳಿಸಿದ್ದಾರೆ ಎಂದು ಆರೋಪ ಮಾಡಿದರು.
ಈ ಜಮೀನಿನಲ್ಲಿ ಕೆಲವು ಎಕರೆಯನ್ನು ಪ್ರಜ್ವಲ್ ರೇವಣ್ಣ ಹೆಸರಿಗೆ ಇನ್ನು ಕೆಲವು ಜಮೀನನ್ನು ದೇವೇಗೌಡರ ಸೋದರಿಯ ಹೆಸರಿಗೆ ನೊಂದಣಿ ಮಾಡಲಾಗಿದೆ ಎಂದು ಅವರು ಕೆಲವು ದಾಖಲೆಗಳನ್ನು ಸಹ ತೋರಿಸಿದರು.

ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ
2014-15ರಲ್ಲಿ ಕಂದಾಯ ಇಲಾಖೆ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಈ ನೊಂದಾವಣಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ ಅವರು, ಈ ಅಕ್ರಮದ ಹಿಂದೆ ಸಚಿವ ರೇವಣ್ಣ ಅವರಿದ್ದಾರೆ ಎಂದು ನೇರ ಆರೋಪ ಮಾಡಿದರು.

ಅಧಿಕಾರಿಗಳಿಗೆ ದೂರು ನೀಡಿದ್ದಾಗಿದೆ
ಈ ಭೂಕಬಳಿಕೆ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಈಗಾಗಲೇ ದೂರು ನೀಡಿದ್ದೇನೆ, ಜೊತೆಗೆ ಸಚಿವ ರೇವಣ್ಣ ಅವರ ಒಟ್ಟು ಆಸ್ತಿ ವಿವರದ ಬಗ್ಗೆಯೂ ಮಾಹಿತಿ ಕೇಳಿದ್ದೇನೆ ಎಂದು ತಿಳಿಸಿದ್ದಾರೆ.

ರೋಹಿಣಿ ಕ್ರಮ ಕೈಗೊಳ್ಳಲಿ
ಈ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ರೋಹಿಣಿ ಅವರು ಮೂರು ದಿನಗಳ ಒಳಗಾಗಿ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಭೂ ನ್ಯಾಯಾಲಯದ ಮೊರೆ ಹೋಗುತ್ತೇನೆ ಎಂದು ಅವರು ಹೇಳಿದರು.

ಹಾಸನದಲ್ಲಿ ಮುಗಿಯದ ಜಗಳ
ಮಾಜಿ ಸಚಿವ, ಹಾಸನ ಕಾಂಗ್ರೆಸ್ ಮುಖಂಡ ಎ.ಮಂಜು ಅವರು ಸಮ್ಮಿಶ್ರ ಸರ್ಕಾರ ರಚನೆ ಆದಾಗಿನಿಂದಲೂ ಜೆಡಿಎಸ್ ಮೇಲೆ ಹಾಗೂ ದೇವೇಗೌಡರ ಕುಟುಂಬದ ಮೇಲೆ ತಮ್ಮ ಅಸಮಾಧಾನ ಹೊರ ಹಾಕುತ್ತಲೇ ಇದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications