ಮಾಜಿ ಸಚಿವ ಎ.ಮಂಜು ಬಿಜೆಪಿಗೆ, ಪ್ರಜ್ವಲ್ ರೇವಣ್ಣ ವಿರುದ್ಧ ಸ್ಪರ್ಧೆ?
Recommended Video

ಹಾಸನ, ಮಾರ್ಚ್ 12: ಕಾಂಗ್ರೆಸ್ನ ಮಾಜಿ ಸಚಿವ ಎ.ಮಂಜು ಅವರು ನಾಳೆ ಬಿಜೆಪಿ ಸೇರ್ಪಡೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಎ.ಮಂಜು ಅವರೇ ಮಾಧ್ಯಮಗಳೊಟ್ಟಿಗೆ ಮಾತನಾಡಿ ಸ್ಪಷ್ಟಪಡಿಸಿದ್ದಾರೆ.
ಹಾಸನದಲ್ಲಿ ದೇವೇಗೌಡರ ಕುಟುಂಬ ರಾಜಕೀಯದ ವಿರುದ್ಧ ಹೋರಾಡುತ್ತಾ ಬಂದಿದ್ದ ಎ.ಮಂಜು ಅವರು ಮೈತ್ರಿ ಸರ್ಕಾರ ರಚನೆ ಆದಂದಿನಿಂದಲೂ ಜೆಡಿಎಸ್ ಪಕ್ಷದ ಮೇಲೆ ಕಿಡಿಕಾರುತ್ತಲೇ ಇದ್ದರು.
ಹಾಸನ ಕ್ಷೇತ್ರಕ್ಕೆ ಕಾಂಗ್ರೆಸ್ಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದ ಅವರು ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡು ಈಗ ಬಿಜೆಪಿ ಕೈಹಿಡಿಯಲು ಸಕಲ ಸಿದ್ಧತೆ ನಡೆಸಿದ್ದಾರೆ. ನಾಳೆಯೇ ಅವರು ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಮಂಜು ಕಣಕ್ಕೆ?
ಹಾಸನದಲ್ಲಿ ಮೈತ್ರಿಯ ಅಭ್ಯರ್ಥಿ ಆಗಿರುವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಎ.ಮಂಜು ಅವರು ಬಿಜೆಪಿ ಯಿಂದ ಚುನಾವಣೆಗೆ ಸ್ಪರ್ಧಿಸುವ ಎಲ್ಲ ಸಾಧ್ಯತೆಗಳೂ ಇವೆ. ರೇವಣ್ಣ ವಿರುದ್ಧ ಸ್ಪರ್ಧಿಸಲೆಂದೇ ಅವರು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

'ಯಡಿಯೂರಪ್ಪ ಅವರೊಂದಿಗೆ ಮಾತುಕತೆ ಆಗಿದೆ'
ಸುದ್ದಿಗಾರರೊಂದಿಗೆ ಮಾತನಾಡಿದ ಎ.ಮಂಜು ಅವರು ನಾನು ಯಡಿಯೂರಪ್ಪ ಅವರೊಂದಿಗೆ ಮಾತನಾಡಿರುವುದು ನಿಜ. ಕಾರ್ಯಕರ್ತರು ಸಹ ನಾನು ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸುತ್ತಿದ್ದಾರೆ. ದೇವೇಗೌಡರ ಕುಟುಂಬ ರಾಜಕಾರಣದ ಬಗ್ಗೆ ಕ್ಷೇತ್ರದ ಮತದಾರರಿಗೆ ಬೇಸರವಿದೆ ಎಂದು ಮಂಜು ಹೇಳಿದ್ದಾರೆ.

ರೇವಣ್ಣ ಕುಟುಂಬದ ಕಠು ವಿರೋಧಿ ಎ.ಮಂಜು
ದೇವೇಗೌಡರ ಕುಟುಂಬದ ವಿರೋಧಿ ಆಗಿರುವ ಅದರಲ್ಲಿಯೂ ವಿಶೇಷವಾಗಿ ರೇವಣ್ಣ ಅವರ ಕುಟುಂಬದ ವಿರುದ್ಧ ಸತತ ವಾಗ್ದಾಳಿ ನಡೆಸುತ್ತಲೇ ಬಂದಿರುವ ಎ.ಮಂಜು ಅವರು ಈಗ ರೇವಣ್ಣ ಅವರ ಮಗನ ವಿರುದ್ಧ ಕಣಕ್ಕಿಳಿಯುವ ಸಿದ್ಧತೆಯಲ್ಲಿದ್ದಾರೆ. ಎ.ಮಂಜು ಹಾಸನ ಕಾಂಗ್ರೆಸ್ನ ಪ್ರಮುಖ ಮುಖಂಡ ಆಗಿದ್ದು ಅವರು ಪಕ್ಷ ಬಿಡುತ್ತಿರುವುದು ಹಾಸನದಲ್ಲಿ ಕಾಂಗ್ರೆಸ್ಗೆ ಆಗುತ್ತಿರುವ ನಷ್ಟ ಎನ್ನಲಾಗುತ್ತಿದೆ.

ಮಂಜು ಸೇರ್ಪಡೆಗೆ ಸ್ಥಳೀಯ ಬಿಜೆಪಿ ಅಪಸ್ವರ
ಎ.ಮಂಜು ಅವರು ಬಿಜೆಪಿ ಸೇರುತ್ತಿರುವುದನ್ನು ಕೆಲವು ಸ್ಥಳೀಯ ಬಿಜೆಪಿ ಮುಖಂಡರೇ ವಿರೋಧಿಸುತ್ತಿದ್ದಾರೆ. ಹಾಸನದ ಜಿಲ್ಲಾ ಬಿಜೆಪಿ ಅಧ್ಯಕ್ಷ ಯೋಗ ರಮೇಶ್ ಅವರೂ ಸಹ ಎ.ಮಂಜು ಅವರ ಆಗಮನವನ್ನು ಕಠುವಾಗಿ ಟೀಕಿಸಿದ್ದಾರೆ. ಅವರಿಂದ ಪಕ್ಷಕ್ಕೇನೂ ಲಾಭವಿಲ್ಲ ಎಂದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications