ನಿಮ್ಮ ಜೋಳಿಗೆ ತುಂಬಿಸಿಕೊಳ್ಳಿ, ಆದ್ರೆ ಕಾರ್ಯಕರ್ತರನ್ನ ತುಳಿಬೇಡಿ: ಶಿವಲಿಂಗೇಗೌಡ ವಿರುದ್ಧ ಸ್ವಪಕ್ಷದಲೇ ಆಕ್ರೋಶ
ಹಾಸನ, ಆಗಸ್ಟ್, 08: ಹಾಸನ ಜಿಲ್ಲೆಯ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡರ ವಿರುದ್ಧ ಪಕ್ಷದೊಳಗೇ ಆಕ್ರೋಶ ಭುಗಿಲೆದ್ದಿದೆ.
ತಮ್ಮ ಜೋಳಿಗೆ ತುಂಬಿಸಿಕೊಳ್ಳುವುದಿದ್ದರೆ ತುಂಬಿಸಿಕೊಳ್ಳಲಿ. ಅದರೆ ಹಾಸನ ಜಿಲ್ಲೆಯ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ತುಳಿದು ಬದುಕುವುದು ಬೇಡ ಎಂದು ಕೆಪಿಸಿಸಿ ಸದಸ್ಯ ಶೇಷೇಗೌಡ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಳ್ಳುವ ಮೂಲಕ ಶಾಸಕ ಶಿವಲಿಂಗೇಗೌಡರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ವಿಧಾನಸಭಾ ಚುನಾವಣಾ ವೇಳೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಬಳಿಕ ಶಾಸಕರಾಗಿರುವ ಶಿವಲಿಂಗೇಗೌಡರು ಸ್ವಪಕ್ಷದ ಕಾರ್ಯಕರ್ತರನ್ನು ಕಡೆಗಣನೆ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಬಹಿರಂಗವಾಗಿಯೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಅರಕಲಗೂಡು ಕ್ಷೇತ್ರದ ಕಾಂಗ್ರೆಸ್ ಮುಖಂಡ ಶೇಷೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗ ಬಂದಿರುವ ಆರೋಪ ಸುಳ್ಳು
ಮತ್ತೊಂದೆಡೆ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳ ಪತ್ರ ವಿಚಾರವಾಗಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದ್ದು, ಇದು ಸತ್ಯಕ್ಕೆ ದೂರವಾರ ವಿಚಾರವಾಗಿದೆ. ಚಲುವರಾಯಸ್ವಾಮಿ ಅವರು ಉತ್ತಮ ರಾಜಕಾರಣಿಯಾಗಿದ್ದಾರೆ ಎಂದು ಹೇಳಿದ್ದರು.
ಅವರಿಗೆ ಆತರಹದ ರಾಜಕರಣದ ಅವಶ್ಯಕತೆ ಇಲ್ಲ. ವಿನಾಕಾರಣ ಯಾರೋ ಆರೋಪ ಮಾಡಿದ್ದಾರೆ. ಹಿಂದೆಯೂ ಸಹ ಕಂಡಕ್ಟರ್ ಒಬ್ಬರ ಆತ್ಮಹತ್ಯೆ ವಿಚಾರವಾಗಿ ಕೂಡ ವಿಧಾನಸಭೆಯಲ್ಲಿ ಅವರ ವಿರುದ್ಧ ಮಾತನಾಡಿದ್ದರು. ನಾವು ನಮಗೆ ಬೇಕಾದವರಿಗೆ ಟ್ರಾನ್ಸ್ಫರ್ಗೆ ಲೆಟರ್ ಕೊಡುತ್ತೇವೆ. ಆದರೆ ಅದೊಂದೇ ವಿಚಾರವನ್ನ ಇಟ್ಟುಕೊಂಡು ಸದನದಲ್ಲಿ ಹೇಗೆ ಅವರ ಮೇಲೆ ಮುಗಿಬಿದ್ದರು ನೀವೆ ನೋಡಿದ್ದೀರಿ ಎಂದರು.
ಈಗ ಬಂದಿರುವ ಆರೋಪವು ಸುಳ್ಳು. ಯಾರು ಚಲುವರಾಯಸ್ವಾಮಿ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂಬುದು ನಿಮಗೂ ಗೊತ್ತಿದೆ.ಅಧಿಕಾರ ಸಿಗಲಿಲ್ಲ ಅಂತಾ ಹೀಗೆಲ್ಲ ಮಾಡೋದು ಶೋಭೆ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರು ಹೇಳದೆ ಶಾಸಕ ಇಕ್ಬಾಲ್ ಹುಸೇನ್ ಆರೋಪಿಸಿದ್ದರು.
ನಾನು ಯಾರ ಹೆಸರನ್ನು ಹೇಳುವುದಿಲ್ಲ. ಅಧಿಕಾರಿಗಳು ಪತ್ರ ಬರಿದಿದ್ದರಾ? ಅಥವಾ ಯಾರಾದರೂ ಬರೆಸಿದ್ದರಾ? ಎಂಬುದು ತನಿಖೆ ಆದ ಮೇಲೆ ಸತ್ಯಾಸತ್ಯೆತೆ ಏನೆಂದು ಗೊತ್ತಾಗಲಿದೆ ಎಂದು ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದರು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications