ಮಾಜಿ ಪ್ರಧಾನಿಗಳ ಕರ್ಮಭೂಮಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕಿತರು!
ಬೆಂಗಳೂರು, ಮೇ 20: ಮೊನ್ನೆಯಷ್ಟೇ 88ನೇ ವಸಂತಕ್ಕೆ ಕಾಟಲಿಟ್ಟಿರುವ ಮಾಜಿ ಪ್ರಧಾನಿ ದೇವೇಗೌಡರು, ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಆತಂಕ ಮೂಡಿಸಿದೆ ಎಂದಿದ್ದರು. ಇದೀಗ ಅವರ ಕರ್ಮಭೂಮಿ ಹಾಸನ ಜಿಲ್ಲೆಯಲ್ಲಿಯೆ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಈಗ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಲಾಕ್ಡೌನ್ ಸಂದರ್ಭದಲ್ಲಿ ಕೋವಿಡ್ ವಿರುದ್ಧದ ಹೋರಾಟದಲ್ಲಿ ಕ್ಷೇತ್ರದಾದ್ಯಂತ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದು ವರದಿಯಾಗಿತ್ತು.
ಸದಾ ಒಂದಿಲ್ಲೊಂದು ಕಾರಣಕ್ಕೆ ಚರ್ಚೆಯಲ್ಲಿರುತ್ತಿದ್ದ ಹಾಸನ ಜಿಲ್ಲೆಗೆ ಕೊರೊನಾ ವೈರಸ್ ತಡವಾಗಿಯೆ ಎಂಟ್ರಿ ಕೊಟ್ಟಿತ್ತು. ಆದರೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇವತ್ತು (ಮೇ 20) ರಾಜ್ಯದಲ್ಲಿ ವರದಿಯಾದ ಪ್ರಕರಣಗಳ ಪೈಕಿ ಅತಿಹೆಚ್ಚು ಸೋಂಕಿತರು ಹಾಸನ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ.

ಇಂದು ಒಟ್ಟು 67 ಸೋಂಕಿತರು ಪತ್ತೆಯಾಗಿದ್ದು, ಅವರಲ್ಲಿ 21 ಜನರು ಹಾಸನ ಜಿಲ್ಲೆಯವರಾಗಿದ್ದಾರೆ. ಇದಿರಿಂದಾಗಿ ಹಾಸನ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾದಂತಾಗಿದೆ.
ವಿಪರ್ಯಾಸ ಎಂದರೆ ಮೇ 11ರ ವರೆಗೆ ಹಾಸನ ಜಿಲ್ಲೆಯಲ್ಲಿ ಒಂದೇ ಒಂದು ಸೋಂಕಿತ ಪ್ರಕರಣ ಪತ್ತೆಯಾಗಿರಲಿಲ್ಲ. ಆದರೆ ಮೇ 12ರಂದು ಮುಂಬೈ ಪ್ರಯಾಣದ ಹಿನ್ನೆಲೆ ಹೊಂದಿದ್ದ 5 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ನಂತರದ ದಿನಗಳಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈವರೆಗೆ ಬೇರೆ ರಾಜ್ಯಗಳಿಂದ ಬಂದವರಲ್ಲಿಯೆ ಸೋಂಕು ದೃಢಪಟ್ಟಿದ್ದು ಒಟ್ಟು 53 ಸೋಂಕಿತರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಇನ್ನೂ 55 ಶಂಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಫಲಿತಾಂಶ ಬರಬೇಕಾಗಿದೆ. ಸೋಂಕಿತರಲ್ಲಿ ಈ ವರೆಗೆ ಗುಣಮುಖರಾಗಿ ಯಾರು ಆಸ್ಪತ್ರೆಯಿಂದ ಬಿಡುಗಡೆ ಆಗಿಲ್ಲ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications