ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಬೇಗ ಹೋಗಲ್ಲ, ತಾಳ್ಮೆ ಕಳೆದುಕೊಳ್ಳಬೇಡಿ ಎಂದ ಶ್ರೀರಾಮುಲು

|
Google Oneindia Kannada News

ಹಾಸನ, ಮೇ 1: ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಹಾಸನದ ಜಿಲ್ಲಾಸ್ಪತ್ರೆಗಳಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜಿಲ್ಲಾ ಕೇಂದ್ರದಲ್ಲಿ ಸಭೆ ನಡೆಸಿದರು.

Recommended Video

ಲಾಕ್ ಡೌನ್ ಸಡಿಲ ಪಡಿಸಲು ಸಿದ್ದರಾಮಯ್ಯ ಕೊಟ್ಟ ಮಾಸ್ಟರ್ ಪ್ಲಾನ್ ಇದು | Siddaramaiah | Oneindia Kannada

ಈ ವೇಳೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ''ಕೊರೊನಾ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ. ಹೀಗಾಗಿ ಯಾರೂ ತಾಳ್ಮೆ ಕಳೆದುಕೊಳ್ಳಬಾರದು. ಸಾಮಾಜಿಕ ಅಂತರವನ್ನು ಎಲ್ಲರೂ ಪಾಲಿಸಬೇಕು'' ಎಂದರು.

ಕಾರ್ಮಿಕರ ಬೆನ್ನಿಗೆ ನಿಂತ ಸರ್ಕಾರ: ವೇತನ ಪಾವತಿ ಮಾಡುವಂತೆ ಮನವಿಕಾರ್ಮಿಕರ ಬೆನ್ನಿಗೆ ನಿಂತ ಸರ್ಕಾರ: ವೇತನ ಪಾವತಿ ಮಾಡುವಂತೆ ಮನವಿ

''ಕೊರೊನಾ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ 5 ವರ್ಷ ಜೈಲು ಶಿಕ್ಷೆ ಆಗುತ್ತದೆ. ಮೇ 3 ರ ಬಳಿಕ ಲಾಕ್ ಡೌನ್ ಸಡಿಲಿಕೆ ಆಗುತ್ತದೆ. ಹೀಗಾಗಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕು'' ಅಂತ ಮನವಿ ಮಾಡಿದರು.

Coronavirus Wont Go soon, Have Patience Says B Sriramulu

''ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿದೆ. ಅದರಿಂದ ರೋಗಿಗಳು ಗುಣಮುಖರಾಗುತ್ತಿದ್ದಾರೆ. ಮುಂದೆ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವ ಬಗ್ಗೆ ಪರಿಶೀಲನೆ ಮಾಡುತ್ತೇವೆ'' ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.

ಅಂದ್ಹಾಗೆ, ಹಾಸನದ ಜಿಲ್ಲಾ ಕೇಂದ್ರದಲ್ಲಿ ನಡೆದ ಸಭೆಯಲ್ಲಿ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಪ್ರೀತಂ ಗೌಡ ಉಪಸ್ಥಿತರಿದ್ದರು.

English summary
Coronavirus won't go soon, Have patience says B Sriramulu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X