ಹಾಸನ: ನಿವೃತ್ತ ಶಿಕ್ಷಕನ ಮನೆಯಲ್ಲಿ ಅಂದ-ಚೆಂದದ ಬೊಂಬೆಗಳ ಕಲರವ
ಹಾಸನ, ಸೆಪ್ಟೆಂಬರ್ 20 : ಶರನ್ನವರಾತ್ರಿ ಪ್ರಯುಕ್ತ ಅರಸೀಕೆರೆ ಪಟ್ಟಣದ ಮಾರುತಿ ನಗರದಲ್ಲಿ ವಾಸವಾಗಿರುವ ನಿವೃತ್ತ ಶಿಕ್ಷಕರಾದ ಕೆ.ಆರ್.ಆನಂದ್ ರವರ ಮನೆಯಲ್ಲಿ ದಸರಾ ಬೊಂಬೆಗಳನ್ನು ಪ್ರದರ್ಶನಕ್ಕೆ ಇರಿಸಲಾಗಿದೆ
ರಾಜಾ ಪ್ರತ್ಯಕ್ಷ ದೇವತಾ ಎಂಬ ಮಾತಿನಂತೆ ಚಂದಣದ ಪಟ್ಟದ ಬೊಂಬೆಗೆ ರಾಜ ರಾಣಿಯರಂತೆ ಅಲಂಕರಿಸಿ ಅಗ್ರಸ್ಥಾನದಲ್ಲಿ ಮಂಟಪ ನಿರ್ಮಿಸಿ ಅದರಲ್ಲಿ ಪ್ರತಿಷ್ಟಾಪಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಪ್ರತಿವರ್ಷ ನವರಾತ್ರಿಯ ಪಾಡ್ಯದ ದಿನದಿಂದಲೇ ಗೊಂಬೆಗಳನ್ನು ಪ್ರತಿಷ್ಠಾಪಿಸಿ, ಪ್ರತಿ ದಿನ ಸಂಜೆ ಗೊಂಬೆಗಳಿಗೆ ಸಾಂಪ್ರದಾಯಕ ಶೈಲಿಯಲ್ಲಿ ಆರತಿ ಬೆಳಗಿ ಪೂಜಿಸುತ್ತಾರೆ.

ನಂತರದ ಸಾಲುಗಳಲ್ಲಿ, ದಶಾವತಾರ, ನವದುರ್ಗೆಯರು, ಅಷ್ಟಲಕ್ಷ್ಮಿ, ಶ್ರೀಕೃಷ್ಣಾವತಾರ, ಕಾಳಿಂಗ ಮರ್ದನ, ಶ್ರೀರಾಮ ಪಟ್ಟಾಭಿಷೇಕ, ದಸರೆಯ ಪ್ರಮುಖ ದೇವತೆಗಳಾದ ದುರ್ಗಿ ಹಾಗೂ ಶಾರದೆಯ ವಿಗ್ರಹ, ಪುಸ್ತಕಗಳು, ವಿವಿಧ ದೇವತೆಗಳ ವಿಗ್ರಹಗಳು, ವಿವಾಹ ಮಹೋತ್ಸವ, ವಿವಿಧ ವಾದ್ಯಗಳು, ಪ್ರಾಣಿ ಪಕ್ಷಿಗಳು ಮೊದಲಾದ ಬೊಂಬೆಗಳನ್ನು ಒಪ್ಪವಾಗಿ ಜೋಡಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ವಿಶ್ವದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಯೋಗದಿನದಂದು ಜರುಗುವ ಸೂರ್ಯ ನಮಸ್ಕಾರವನ್ನು ಬೊಂಬೆಗಳಲ್ಲಿ ನಿರ್ಮಿಸಿರುವುದು ಎಲ್ಲರ ಗಮನ ಸೆಳೆಯುತ್ತದೆ.
ಆನಂದ್ ರವರು ಸ್ವತಃ ಥರ್ಮೋಕೋಲ್ ನಿಂದ ನಿರ್ಮಿಸಿರುವ ಗಣೇಶನ ವಿಗ್ರಹ, ಈಶ್ವರ, ಅಂಬಾರಿ ಹೊತ್ತ ಆನೆ, ಅರ್ಜುನನಿಗೆ ಗೀತೋಪದೇಶ ಮಾಡುತ್ತಿರುವ ಕೃಷ್ಣ ಮೊದಲಾದ ಕಲಾಕೃತಿಗಳು ಆಕರ್ಶಕವಾಗಿವೆ.
"ಹೈಟೆಕ್ ಸಂಸ್ಕೃತಿಯಲ್ಲಿ ಬೆಳೆಯುತ್ತಿರುವ ಇಂದಿನ ಪೀಳಿಗೆಯ ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ, ವಿಚಾರ ಮತ್ತು ಸಂಪ್ರದಾಯವನ್ನು ಪರಿಚಯಿಸಬೇಕಾದ ಅನಿವಾರ್ಯತೆ ಬಂದೊದಗಿದೆ.
ಪ್ರತಿ ಮನೆಗಳಲ್ಲಿ ಈ ರೀತಿಯ ಆಚರಣೆಗಳನ್ನು ನಡೆಸುವುದರಿಂದ, ಸನಾತನ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ತಿಳಿಸಬಹುದು" ಎಂದು ಶಕುಂತಳ ಆನಂದ ಅವರು ತಿಳಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications