ಹಾಸನಾಂಬೆ ಜಾತ್ರೆ ಮುಕ್ತಾಯ; ಹುಂಡಿ ಸಂಗ್ರಹ ಕುಸಿತ!
ಹಾಸನ, ನವೆಂಬರ್ 17 : ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ಜಾತ್ರಾ ಮಹೋತ್ಸವ ಅಂತ್ಯಗೊಂಡಿದೆ. ನವೆಂಬರ್ 16ರಂದು ದೇವಾಲಯದ ಬಾಗಿಲನ್ನು ಮುಚ್ಚಲಾಗಿದ್ದು, ಇನ್ನುಒಂದು ವರ್ಷ ದೇವಿಯ ದರ್ಶನ ಭಕ್ತರಿಗೆ ಸಿಗುವುದಿಲ್ಲ.
ಹಾಸನಾಂಬೆ ಜಾತ್ರೆ ಅಂತ್ಯವಾದ ಹಿನ್ನಲೆಯಲ್ಲಿ ಮಂಗಳವಾರ ಜಿಲ್ಲಾಡಳಿತದ ವತಿಯಿಂದ ಕಾಣಿಕೆ ಹುಂಡಿಯ ಎಣಿಕೆ ನಡೆಯಿತು. ಕೋವಿಡ್ ಕಾರಣದಿಂದಾಗಿ ಭಕ್ತರು ದೇವಾಲಯಕ್ಕೆ ಭೇಟಿ ನೀಡುವುದು ನಿಷೇಧಿಸಲಾಗಿತ್ತು.
ಈ ವರ್ಷ ಹಾಸನಾಂಬೆ ದೇವಾಲಯದಲ್ಲಿ 21,34,052 ರೂ. ಕಾಣಿಕೆ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕಾಣಿಕೆ ಸಂಗ್ರಹದಲ್ಲಿ ಭಾರಿ ಕುಸಿತವಾಗಿದೆ.

2019ರಲ್ಲಿ ವಿಶೇಷ ದರ್ಶನ, ಲಾಡು ಮಾರಾಟ ಎಲ್ಲವೂ ಸೇರಿ ಮೂರುವರೆ ಕೋಟಿ ಆದಾಯ ಬಂದಿತ್ತು. ಈ ಬಾರಿ ಭಕ್ತರಿಗೆ ನಿರ್ಬಂಧ ವಿಧಿಸಿದ್ದ ಹಿನ್ನಲೆಯಲ್ಲಿ ಆದಾಯದಲ್ಲಿ ಕುಸಿತ ಕಂಡುಬಂದಿದೆ.
ಸಿದ್ದೇಶ್ವರ ದೇವಾಲಯದಲ್ಲಿ 1,45,720 ರೂ. ಕಾಣಿಕೆ ಸಂಗ್ರಹವಾಗಿದ್ದು, ಒಟ್ಟು ದೇವಾಲಯಕ್ಕೆ 22,79,772 ರೂ. ಆದಾಯ ಬಂದಿದೆ. ಕಳೆದ ಬಾರಿ ಹಾಸನಾಂಬೆ ದೇವಾಲಯದಲ್ಲಿಯೇ 1,31,24,424 ರೂ. ಹುಂಡಿ ಸಂಗ್ರಹವಾಗಿತ್ತು.
ವಿಚಿತ್ರ ಬೇಡಿಕೆಗಳು : ಹಾಸನಾಂಬೆ ದರ್ಶನಕ್ಕೆ ಬಂದ ಜನರು ವಿಚಿತ್ರ ಬೇಡಿಕೆಗಳನ್ನು ದೇವಿಗೆ ಸಲ್ಲಿಕೆ ಮಾಡಿದ್ದಾರೆ. "ಈ ದೇಶದಿಂದ ಕೊರೊನಾ ರೋಗ ಓಡಿ ಹೋಗಲಿ. ನಮ್ಮ ದೇಶದ ರೈತರಿಗೆ ಮುಖ್ಯವಾಗಿ ನಮ್ಮ ರಾಜ್ಯದ ರೈತರಿಗೆ ಒಳ್ಳೆಯದಾಗಲಿ. ನಮ್ಮ ದೇಶದ ಸೈನಿಕರ ಆಯಸ್ಸು ವೃದ್ಧಿಸಿ ಹೋರಾಟದಲ್ಲಿ ಗೆಲುವು ಕಾಣುವಂತೆ ಮಾಡಮ್ಮ" ಎಂದು ಬೇಡಿಕೆ ಇಡಲಾಗಿದೆ.
"ಹಾಸನಾಂಬ ತಾಯಿ ನಮ್ಮ ಕಷ್ಟಗಳು ಪರಿಹಾರ ಮಾಡಿ ನನ್ನ ಗಂಡ ಮಕ್ಕಳು ಮತ್ತು ನನ್ನ ಆರೋಗ್ಯ ಕಾಪಾಡಿ ತಾಯಿ. ನನ್ನ ಕೆಲಸ ಶಾಶ್ವತವಾಗಲಿ. ನಮ್ಮನ್ನು ಕಾಪಾಡಿ ತಾಯಿ"ಎಂದು ಕಾಣಿಕೆ ಹಾಕಿ ಹರಕೆ ಹೊತ್ತು ಚೀಟಿ ಹಾಕಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications