ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವೇಗೌಡರ ಕುಟುಂಬದ ಕಣ್ಣೀರ ನಾಟಕ ಶುರು: ಬಿಜೆಪಿ ವ್ಯಂಗ್ಯ

|
Google Oneindia Kannada News

ಬೆಂಗಳೂರು, ಮಾರ್ಚ್‌ 13: ದೇವೇಗೌಡ ಹಾಗೂ ಕುಟುಂಬದವರು ಇಂದು ಹೊಳೆನರಸೀಪುರದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ್ದನ್ನು ರಾಜ್ಯ ಬಿಜೆಪಿ ಅಣಕಿಸಿದೆ.

ಲೋಕಸಭೆ ಚುನಾವಣೆ ಪ್ರಾರಂಭವಾಗುತ್ತಿದ್ದಂತೆ ಮೊದಲ ನಾಟಕ ಪ್ರಾರಂಭವಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ದೇವೇಗೌಡ ಅವರು ರೇವಣ್ಣ ಅವರು ಕಣ್ಣೀರು ಹಾಕುತ್ತಿರುವ ಚಿತ್ರವನ್ನು ಸಹ ಅದು ಪ್ರಕಟಿಸಿದೆ.

 Deve Gowda and Revanna family cries in rally: BJP trolls

ಕಣ್ಣೀರ 'ಹೊಳೆ' ಹರಿಸಿ, ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಎಂದ ದೇವೇಗೌಡ್ರುಕಣ್ಣೀರ 'ಹೊಳೆ' ಹರಿಸಿ, ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಎಂದ ದೇವೇಗೌಡ್ರು

ದೇವೇಗೌಡ ಹಾಗೂ ರೇವಣ್ಣ ಕುಟುಂಬದ ಕಣ್ಣೀರು ಕುರಿತು ಎರಡು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ, ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ, ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು, ರಾಜ್ಯದ ಜನ ಈಗಲೂ ಮರುಳಾಗುವರೇ ಎಂದು ಬಿಜೆಪಿ ಪ್ರಶ್ನಿಸಿದೆ.

ಇಂದು ಹೊಳೆನರಸೀಪುರದಲ್ಲಿ ನಡೆದ ಪ್ರಜ್ವಲ್ ರೇವಣ್ಣ ಅವರ ಪ್ರಚಾರ ಸಮಾವೇಶದಲ್ಲಿ, ದೇವೇಗೌಡ, ಎಚ್‌.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣ ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದರು. ಇವರ ಸಂಬಂಧಿ ಆದ ಶಾಸಕ ಎಚ್‌.ಸಿ.ಬಾಲಕೃಷ್ಣ ಸಹ ಕಣ್ಣೀರು ಹಾಕಿದರು.

English summary
Deve Gowda, HD Revanna, Prajwal Revanna, HC Balakrishna cried in JDS rally in Holenarasipura. Karnataka BJP trolls the Deve Gowda family for crying.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X